AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​

800 ಕೋಟಿ ರೂಪಾಯಿಗೂ ಅಧಿಕ ಬಜೆಟ್​ ಹಾಕಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ಸಿನಿಮಾದ ಶೂಟಿಂಗ್​ ನಿಂತುಹೋಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ. ಶೂಟಿಂಗ್​ ನಿಲ್ಲಲು ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​
ಸಾಯಿ ಪಲ್ಲವಿ, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 21, 2024 | 7:39 PM

Share

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಅಲ್ಲದೇ, ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿದ್ದವು. ಈಗ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಶೂಟಿಂಗ್​ ನಿಂತಿದೆ. ನಿರ್ಮಾಪಕರು ಕಾಪಿರೈಟ್​ (Copyright) ನಿಯಮವನ್ನು ಉಲ್ಲಂಘನೆ ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ನಿತೇಶ್​ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯು ನೋಟಿಸ್​ ಕಳಿಸಿತ್ತು. ಅದರ ಅನ್ವಯ ‘ರಾಮಾಯಣ’ ಸಿನಿಮಾದ ನಿರ್ಮಾಪಕರು ಈ ಕಂಪನಿಯ ಜೊತೆ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಕ್ರಿಪ್ಟ್​ಗೆ ಸಂಬಂಧಿಸಿದ ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ನೋಟಿಸ್​ ಕಳಿಸಲಾಗಿತ್ತು.

‘ರಾಮಾಯಣ’ ಚಿತ್ರತಂಡಕ್ಕೆ ನೋಟಿಸ್ ಬಂದ ನಂತರವೂ ಕೆಲವು ದಿನಗಳ ಕಾಲ ಶೂಟಿಂಗ್​ ಮುಂದುವರಿಸಲಾಯಿತು. ಆದರೆ ಕಳೆದ ವಾರದಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಕಾನೂನಿನ ತೊಡಕುಗಳು ಬಗೆಹರಿದ ನಂತರವೇ ಶೂಟಿಂಗ್​ ಮುಂದುವರಿಸಲು ತೀರ್ಮಾನಿಸಲಾಗಿದೆ ಅಂತ ಮೂಲಗಳು ಹೇಳಿರುವುದಾಗಿ ಬಾಲಿವುಡ್​ ಹಂಗಾಮಾ ವರದಿ ಮಾಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ

ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರ ನಟಿಸುತ್ತಿದ್ದಾರೆ. ಶೂಟಿಂಗ್​ಗೆ ಸಂಬಂಧಿಸಿದಂತೆ ಈ ಮೊದಲೇ ಡೇಟ್ಸ್​ ಬಗ್ಗೆ ಮಾತುಕಥೆ ಆಗಿರುತ್ತದೆ. ಆದರೆ ಈಗ ಚಿತ್ರೀಕರಣ ನಿಂತಿರುವುದರಿಂದ ಎಲ್ಲ ಡೇಟ್ಸ್​ ಬದಲಾವಣೆ ಆಗಲಿದೆ. ಇದರಿಂದ ಕಲಾವಿದರಿಗೆ ಮತ್ತು ಚಿತ್ರದ ನಿರ್ಮಾಪಕರಿಗೆ ಖಂಡಿತಾ ತೊಂದರೆ ಆಗಲಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ಸನ್ನಿ ಡಿಯೋಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ