AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​

800 ಕೋಟಿ ರೂಪಾಯಿಗೂ ಅಧಿಕ ಬಜೆಟ್​ ಹಾಕಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ಸಿನಿಮಾದ ಶೂಟಿಂಗ್​ ನಿಂತುಹೋಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ. ಶೂಟಿಂಗ್​ ನಿಲ್ಲಲು ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​
ಸಾಯಿ ಪಲ್ಲವಿ, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 21, 2024 | 7:39 PM

Share

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಅಲ್ಲದೇ, ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿದ್ದವು. ಈಗ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಶೂಟಿಂಗ್​ ನಿಂತಿದೆ. ನಿರ್ಮಾಪಕರು ಕಾಪಿರೈಟ್​ (Copyright) ನಿಯಮವನ್ನು ಉಲ್ಲಂಘನೆ ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ನಿತೇಶ್​ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯು ನೋಟಿಸ್​ ಕಳಿಸಿತ್ತು. ಅದರ ಅನ್ವಯ ‘ರಾಮಾಯಣ’ ಸಿನಿಮಾದ ನಿರ್ಮಾಪಕರು ಈ ಕಂಪನಿಯ ಜೊತೆ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಕ್ರಿಪ್ಟ್​ಗೆ ಸಂಬಂಧಿಸಿದ ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ನೋಟಿಸ್​ ಕಳಿಸಲಾಗಿತ್ತು.

‘ರಾಮಾಯಣ’ ಚಿತ್ರತಂಡಕ್ಕೆ ನೋಟಿಸ್ ಬಂದ ನಂತರವೂ ಕೆಲವು ದಿನಗಳ ಕಾಲ ಶೂಟಿಂಗ್​ ಮುಂದುವರಿಸಲಾಯಿತು. ಆದರೆ ಕಳೆದ ವಾರದಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಕಾನೂನಿನ ತೊಡಕುಗಳು ಬಗೆಹರಿದ ನಂತರವೇ ಶೂಟಿಂಗ್​ ಮುಂದುವರಿಸಲು ತೀರ್ಮಾನಿಸಲಾಗಿದೆ ಅಂತ ಮೂಲಗಳು ಹೇಳಿರುವುದಾಗಿ ಬಾಲಿವುಡ್​ ಹಂಗಾಮಾ ವರದಿ ಮಾಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ

ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರ ನಟಿಸುತ್ತಿದ್ದಾರೆ. ಶೂಟಿಂಗ್​ಗೆ ಸಂಬಂಧಿಸಿದಂತೆ ಈ ಮೊದಲೇ ಡೇಟ್ಸ್​ ಬಗ್ಗೆ ಮಾತುಕಥೆ ಆಗಿರುತ್ತದೆ. ಆದರೆ ಈಗ ಚಿತ್ರೀಕರಣ ನಿಂತಿರುವುದರಿಂದ ಎಲ್ಲ ಡೇಟ್ಸ್​ ಬದಲಾವಣೆ ಆಗಲಿದೆ. ಇದರಿಂದ ಕಲಾವಿದರಿಗೆ ಮತ್ತು ಚಿತ್ರದ ನಿರ್ಮಾಪಕರಿಗೆ ಖಂಡಿತಾ ತೊಂದರೆ ಆಗಲಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ಸನ್ನಿ ಡಿಯೋಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ