AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​

ಪಾಪಾರಾಜಿ ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಪಾಪರಾಜಿಗಳ ಕಡೆ ನೋಡಿ ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರಿಂದ ಖಂಡನೆ ವ್ಯಕ್ತವಾಗುತ್ತಿದೆ. ವಿಡಿಯೋ ವೈರಲ್​ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 28, 2024 | 11:28 AM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಇತ್ತೀಚೆಗೆ ಒಂದು ಮುಜುಗರದ ಸನ್ನಿವೇಶ ಎದುರಿಸಿದ್ದಾರೆ. ಗುಜರಾಜ್​ನ ಸೂರತ್​ನಲ್ಲಿ ಆಭರಣದ ಮಳಿಗೆಯನ್ನು ಉದ್ಘಾಟಿಸಲು ರಣಬೀರ್​ ಕಪೂರ್​ ತೆರೆಳಿದ್ದರು. ಅವರ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಯೊಬ್ಬನು (Paparazzi) ಅಶ್ಲೀಲ ಪದಗಳಿಂದ ಬೈಯ್ದಿದ್ದಾನೆ. ಅದನ್ನು ಕೇಳಿಸಿಕೊಂಡು ರಣಬೀರ್​ ಕಪೂರ್​ಗೆ ಶಾಕ್​ ಆಗಿದೆ. ಬಹಳ ಅಚ್ಚರಿಯಿಂದ ಅವರು ಫೋಟೋಗ್ರಾಫರ್​ ಕಡೆಗೆ ನೋಡಿದ್ದಾರೆ. ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ರಣಬೀರ್​ ಕಪೂರ್​ ಅವರ ಫೋಟೋಗಳನ್ನು ಕ್ಲಿಕ್ಕಿಸಬೇಕು ಎಂಬುದು ಪಾಪರಾಜಿಗಳ ತವಕ. ಜನಜಂಗುಳಿ ಇದ್ದಿದ್ದರಿಂದ ಸರಿಯಾದ ಫೋಟೋಗಳು ಸಿಗದೇ ಇರಬಹುದು. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೋಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಖಚಿತವಾಗಿಲ್ಲ.

ಒಟ್ಟಿನಲ್ಲಿ ಆ ಫೋಟೋಗ್ರಾಫರ್​ ಬಳಸಿದ ಅಶ್ಲೀಲ ಭಾಷೆ ಕೇಳಿ ರಣಬೀರ್​ ಕಪೂರ್​ ಅವರಿಗೆ ಕೋಪ ಬಂದಿದೆ. ಆದರೂ ಅವರು ಆ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಲುಕ್​ ಕೊಟ್ಟು ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಗಳ ಅನಾಗರಿಕ ವರ್ತನೆಗೆ ಸೋಶಿಯಲ್​ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಕೆಟ್ಟದಾಗಿ ಮಾತನಾಡಿದ ಪಾಪಾರಾಜಿಗೆ ಅನೇಕರು ಕಮೆಂಟ್​ ಮೂಲಕ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ರಣಬೀರ್​ ಕಪೂರ್​ ಅವರು ಈಗ ರಾಮಾಯಣ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ‘ಅನಿಮಲ್​’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ಅವರಿಗೆ ಈ ಅವಕಾಶ ಸಿಕ್ಕಿದೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ‘ದಂಗಲ್’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿವೆ. ಆ ಮೂಲಕ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು