ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​

ಪಾಪಾರಾಜಿ ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಪಾಪರಾಜಿಗಳ ಕಡೆ ನೋಡಿ ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರಿಂದ ಖಂಡನೆ ವ್ಯಕ್ತವಾಗುತ್ತಿದೆ. ವಿಡಿಯೋ ವೈರಲ್​ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​
ರಣಬೀರ್​ ಕಪೂರ್​
Follow us
|

Updated on: Apr 28, 2024 | 11:28 AM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಇತ್ತೀಚೆಗೆ ಒಂದು ಮುಜುಗರದ ಸನ್ನಿವೇಶ ಎದುರಿಸಿದ್ದಾರೆ. ಗುಜರಾಜ್​ನ ಸೂರತ್​ನಲ್ಲಿ ಆಭರಣದ ಮಳಿಗೆಯನ್ನು ಉದ್ಘಾಟಿಸಲು ರಣಬೀರ್​ ಕಪೂರ್​ ತೆರೆಳಿದ್ದರು. ಅವರ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಯೊಬ್ಬನು (Paparazzi) ಅಶ್ಲೀಲ ಪದಗಳಿಂದ ಬೈಯ್ದಿದ್ದಾನೆ. ಅದನ್ನು ಕೇಳಿಸಿಕೊಂಡು ರಣಬೀರ್​ ಕಪೂರ್​ಗೆ ಶಾಕ್​ ಆಗಿದೆ. ಬಹಳ ಅಚ್ಚರಿಯಿಂದ ಅವರು ಫೋಟೋಗ್ರಾಫರ್​ ಕಡೆಗೆ ನೋಡಿದ್ದಾರೆ. ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ರಣಬೀರ್​ ಕಪೂರ್​ ಅವರ ಫೋಟೋಗಳನ್ನು ಕ್ಲಿಕ್ಕಿಸಬೇಕು ಎಂಬುದು ಪಾಪರಾಜಿಗಳ ತವಕ. ಜನಜಂಗುಳಿ ಇದ್ದಿದ್ದರಿಂದ ಸರಿಯಾದ ಫೋಟೋಗಳು ಸಿಗದೇ ಇರಬಹುದು. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೋಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಖಚಿತವಾಗಿಲ್ಲ.

ಒಟ್ಟಿನಲ್ಲಿ ಆ ಫೋಟೋಗ್ರಾಫರ್​ ಬಳಸಿದ ಅಶ್ಲೀಲ ಭಾಷೆ ಕೇಳಿ ರಣಬೀರ್​ ಕಪೂರ್​ ಅವರಿಗೆ ಕೋಪ ಬಂದಿದೆ. ಆದರೂ ಅವರು ಆ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಲುಕ್​ ಕೊಟ್ಟು ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಗಳ ಅನಾಗರಿಕ ವರ್ತನೆಗೆ ಸೋಶಿಯಲ್​ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಕೆಟ್ಟದಾಗಿ ಮಾತನಾಡಿದ ಪಾಪಾರಾಜಿಗೆ ಅನೇಕರು ಕಮೆಂಟ್​ ಮೂಲಕ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ರಣಬೀರ್​ ಕಪೂರ್​ ಅವರು ಈಗ ರಾಮಾಯಣ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ‘ಅನಿಮಲ್​’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ಅವರಿಗೆ ಈ ಅವಕಾಶ ಸಿಕ್ಕಿದೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ‘ದಂಗಲ್’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿವೆ. ಆ ಮೂಲಕ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು