AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​

ಪಾಪಾರಾಜಿ ಬಳಸಿದ ಅಶ್ಲೀಲ ಭಾಷೆ ಕೇಳಿಸಿಕೊಂಡ ರಣಬೀರ್​ ಕಪೂರ್​ ಅವರಿಗೆ ಸಿಟ್ಟು ಬಂದಿದೆ. ಆದರೂ ಆ ಸಮಯದಲ್ಲಿ ಅವರು ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಪಾಪರಾಜಿಗಳ ಕಡೆ ನೋಡಿ ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಯ ಅಸಭ್ಯ ಭಾಷೆಗೆ ಸೋಶಿಯಲ್​ ಮೀಡಿಯಾದಲ್ಲಿ ಜನರಿಂದ ಖಂಡನೆ ವ್ಯಕ್ತವಾಗುತ್ತಿದೆ. ವಿಡಿಯೋ ವೈರಲ್​ ಆಗಿದ್ದು, ಜನರು ಹಲವು ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Apr 28, 2024 | 11:28 AM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಇತ್ತೀಚೆಗೆ ಒಂದು ಮುಜುಗರದ ಸನ್ನಿವೇಶ ಎದುರಿಸಿದ್ದಾರೆ. ಗುಜರಾಜ್​ನ ಸೂರತ್​ನಲ್ಲಿ ಆಭರಣದ ಮಳಿಗೆಯನ್ನು ಉದ್ಘಾಟಿಸಲು ರಣಬೀರ್​ ಕಪೂರ್​ ತೆರೆಳಿದ್ದರು. ಅವರ ಫೋಟೋ ಕ್ಲಿಕ್ಕಿಸಲು ಬಂದ ಪಾಪರಾಜಿಯೊಬ್ಬನು (Paparazzi) ಅಶ್ಲೀಲ ಪದಗಳಿಂದ ಬೈಯ್ದಿದ್ದಾನೆ. ಅದನ್ನು ಕೇಳಿಸಿಕೊಂಡು ರಣಬೀರ್​ ಕಪೂರ್​ಗೆ ಶಾಕ್​ ಆಗಿದೆ. ಬಹಳ ಅಚ್ಚರಿಯಿಂದ ಅವರು ಫೋಟೋಗ್ರಾಫರ್​ ಕಡೆಗೆ ನೋಡಿದ್ದಾರೆ. ‘ಏನು ನಡೆಯುತ್ತಿದೆ ಇಲ್ಲಿ?’ ಎಂದು ಪ್ರಶ್ನಿಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದೆ.

ರಣಬೀರ್​ ಕಪೂರ್​ ಅವರ ಫೋಟೋಗಳನ್ನು ಕ್ಲಿಕ್ಕಿಸಬೇಕು ಎಂಬುದು ಪಾಪರಾಜಿಗಳ ತವಕ. ಜನಜಂಗುಳಿ ಇದ್ದಿದ್ದರಿಂದ ಸರಿಯಾದ ಫೋಟೋಗಳು ಸಿಗದೇ ಇರಬಹುದು. ಈ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಫೋಟೋಗ್ರಾಫರ್​ ಒಬ್ಬನು ಕೆಟ್ಟ ಭಾಷೆ ಬಳಸಿ ಕೂಗಾಡಿದ್ದಾನೆ. ಆತ ಆ ಮಾತನ್ನು ರಣಬೀರ್​ ಕಪೂರ್​ಗೆ ಹೇಳಿದ್ದಾ ಅಥವಾ ಅಲ್ಲಿದ್ದ ಜನರ ಪೈಕಿ ಯಾರೋ ಒಬ್ಬರಿಗೆ ಹೇಳಿದ್ದಾ ಎಂಬುದು ಖಚಿತವಾಗಿಲ್ಲ.

ಒಟ್ಟಿನಲ್ಲಿ ಆ ಫೋಟೋಗ್ರಾಫರ್​ ಬಳಸಿದ ಅಶ್ಲೀಲ ಭಾಷೆ ಕೇಳಿ ರಣಬೀರ್​ ಕಪೂರ್​ ಅವರಿಗೆ ಕೋಪ ಬಂದಿದೆ. ಆದರೂ ಅವರು ಆ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡಿಲ್ಲ. ಅಸಹನೆಯಿಂದ ಲುಕ್​ ಕೊಟ್ಟು ಅಲ್ಲಿಂದ ತೆರಳಿದ್ದಾರೆ. ಪಾಪರಾಜಿಗಳ ಅನಾಗರಿಕ ವರ್ತನೆಗೆ ಸೋಶಿಯಲ್​ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಕೆಟ್ಟದಾಗಿ ಮಾತನಾಡಿದ ಪಾಪಾರಾಜಿಗೆ ಅನೇಕರು ಕಮೆಂಟ್​ ಮೂಲಕ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಗಾಗಿ ಹಳ್ಳಿಗೆ ಹೋಗಿ ತರಬೇತಿ ಪಡೆಯುತ್ತಿರುವ ರಣಬೀರ್​ ಕಪೂರ್​

ರಣಬೀರ್​ ಕಪೂರ್​ ಅವರು ಈಗ ರಾಮಾಯಣ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ. ‘ಅನಿಮಲ್​’ ಸಿನಿಮಾದ ಭಾರಿ ಯಶಸ್ಸಿನ ಬಳಿಕ ಅವರಿಗೆ ಈ ಅವಕಾಶ ಸಿಕ್ಕಿದೆ. ಈ ಸಿನಿಮಾದಲ್ಲಿ ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ‘ದಂಗಲ್’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿವೆ. ಆ ಮೂಲಕ ಸಿನಿಮಾ ಮೇಲಿನ ಹೈಪ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ