AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ‘ಬ್ರಹ್ಮಾಸ್ತ್ರ ನೋಡಿ ಅಂತ ನಾನು ಎಲ್ಲರ ಮನೆಗೆ ಹೋಗಿ ಬೇಡಿಕೊಳ್ಳಬೇಕಾ?’: ಸಿಟ್ಟಾದ ರಣಬೀರ್​ ಕಪೂರ್​

Brahmastra OTT Release Date: ‘ಬ್ರಹ್ಮಾಸ್ತ್ರ’ ಚಿತ್ರದ ನಟ ರಣಬೀರ್​ ಕಪೂರ್​ ಅವರು ಕೂಗಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ‘ಕಟು ಸತ್ಯಗಳು’ ಎಂದು ಅವರ ಮಡದಿ ಆಲಿಯಾ ಭಟ್​ ಅವರು ಇದಕ್ಕೆ ಕ್ಯಾಪ್ಷನ್​ ನೀಡಿದ್ದಾರೆ.

Ranbir Kapoor: ‘ಬ್ರಹ್ಮಾಸ್ತ್ರ ನೋಡಿ ಅಂತ ನಾನು ಎಲ್ಲರ ಮನೆಗೆ ಹೋಗಿ ಬೇಡಿಕೊಳ್ಳಬೇಕಾ?’: ಸಿಟ್ಟಾದ ರಣಬೀರ್​ ಕಪೂರ್​
ರಣಬೀರ್ ಕಪೂರ್
TV9 Web
| Edited By: |

Updated on: Oct 26, 2022 | 4:09 PM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರು ಬಾಲಿವುಡ್​ನಲ್ಲಿ ಸ್ಟಾರ್ ಹೀರೋ ಆಗಿ ಮೆರೆಯುತ್ತಿದ್ದಾರೆ. ಅವರು ನಟಿಸಿದ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಸೂಪರ್​ ಹಿಟ್​ ಆಗಿದೆ. ಚಿತ್ರಮಂದಿರದಲ್ಲಿ ಭರ್ಜರಿ ಕಲೆಕ್ಷನ್​ ಮಾಡಿದ ಬಳಿಕ ಆ ಸಿನಿಮಾ ಈಗ ಒಟಿಟಿಗೆ ಬರುತ್ತಿದೆ. ಈ ಸಲುವಾಗಿ ಮತ್ತೆ ಪ್ರಚಾರ ಮಾಡಲು ಚಿತ್ರತಂಡ ಪ್ಲ್ಯಾನ್​ ಮಾಡಿದೆ. ಆದರೆ ಪ್ರಚಾರ ಮಾಡಲು ರಣಬೀರ್​ ಕಪೂರ್​ ಅವರಿಗೆ ಮನಸ್ಸು ಇಲ್ಲ. ಈಗಾಗಲೇ ಹಿಟ್​ ಆಗಿರುವ ಚಿತ್ರಕ್ಕೆ ಮತ್ತೆ ಪ್ರಮೋಷನ್​ ಯಾಕೆ ಬೇಕು ಎಂಬುದು ಅವರ ವಾದ. ಅದೇ ಕಾನ್ಸೆಪ್ಟ್​ ಇಟ್ಟುಕೊಂಡು ಒಂದು ವಿಡಿಯೋ ಮಾಡಲಾಗಿದೆ. ಆ ವಿಡಿಯೋ ವೈರಲ್​ ಆಗಿದ್ದು, ನಟಿ ಆಲಿಯಾ ಭಟ್​ (Alia Bhatt) ಸೇರಿದಂತೆ ಅನೇಕರು ಬಗೆಬಗೆಯಲ್ಲಿ ಕಮೆಂಟ್​ ಮಾಡಿದ್ದಾರೆ.

ಪ್ರಮೋಷನ್​ ಟೀಮ್​ ಜೊತೆ ರಣಬೀರ್​ ಕಪೂರ್ ಅವರು ಫೋನ್​ನಲ್ಲಿ ಮಾತನಾಡುತ್ತಾರೆ. ‘ಆಗಲ್ಲ ಅಣ್ಣಾ.. ನನಗೆ ಸಾಕಾಗಿದೆ. ಬ್ರಹ್ಮಾಸ್ತ್ರ ಸಿನಿಮಾನೂ ಸಾಕು, ನಿರ್ದೇಶಕ ಅಯಾನ್​ ಮುಖರ್ಜಿ ಸಹವಾಸವೂ ಸಾಕು. ಬ್ರಹ್ಮಾಸ್ತ್ರ ಚಿತ್ರ ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ನಲ್ಲಿ ಬರುತ್ತಿದೆ ಎಂದ ಮಾತ್ರಕ್ಕೆ ಮತ್ತೆ ನಾವು ಪ್ರಚಾರಕ್ಕೆ ಬರಬೇಕಾ’ ಎಂದು ರಣಬೀರ್​ ಕಪೂರ್​ ಅವರು ಕೂಗಾಡುತ್ತಿರುವ ದೃಶ್ಯ ಈ ವಿಡಿಯೋದಲ್ಲಿದೆ.

‘ಈಗ ನಾನೇನು ಮಾಡಬೇಕು? ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ನಲ್ಲಿ ಬ್ರಹ್ಮಾಸ್ತ್ರ ಸಿನಿಮಾ ನೋಡಿ ಅಂತ ಪ್ರತಿಯೊಬ್ಬರ ಮನೆಗೆ ಹೋಗಿ ನಾನು ಬೇಡಿಕೊಳ್ಳಬೇಕಾ? ಬೆಳಕು ಬರುತ್ತಿದೆ.. ಹ್ಯಾಪಿ ದೀಪಾವಳಿ ಎನ್ನಬೇಕಾ? ಬೆಳಕು ಬಂದಾಗಿದೆ. ಬ್ರಹ್ಮಾಸ್ತ್ರ ದೊಡ್ಡ ಹಿಟ್​ ಆಗಿದೆ. ಬ್ರಹ್ಮಾಸ್ತ್ರ ಪ್ರಚಾರ ಮಾಡೋದು ಬಿಟ್ಟರೆ ನನ್ನ ಬದುಕಿನಲ್ಲಿ ಬೇರೆ ಏನೂ ಇಲ್ಲ ಅಂತ ಅಯಾನ್​ ಮುಖರ್ಜಿ ಅಂದುಕೊಂಡಿದ್ದಾರಾ? ತಂದೆ ಆಗ್ತಾ ಇದ್ದೀನಿ. ನನ್ನ ಬದುಕಿನ ಅತಿ ದೊಡ್ಡ ಕ್ಷಣ ಇದು’ ಎಂದು ರಣಬೀರ್​ ಕಪೂರ್​ ಕಿರುಚಾಡುತ್ತಾರೆ.

ಇದನ್ನೂ ಓದಿ
Image
Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

ಇದಾಗ ತಕ್ಷಣ ಅಯಾನ್​ ಮುಖರ್ಜಿಯ ಕಾಲ್​ ಬರುತ್ತದೆ. ತಕ್ಷಣವೇ ಮೆತ್ತಗಾಗುವ ರಣಬೀರ್​ ಕಫೂರ್​, ‘ಹೌದು, ಹೌದು.. ನಾವು ಪ್ರಮೋಷನ್​ ಮಾಡಬೇಕು’ ಅಂತ ಒಪ್ಪಿಕೊಳ್ಳುತ್ತಾರೆ. ಫೋನ್​ ಕರೆ ಕಟ್​ ಮಾಡಿದ ಬಳಿಕ ತಲೆ ಚಚ್ಚಿಕೊಳ್ಳುತ್ತಾರೆ. ಪ್ರಚಾರಕ್ಕಾಗಿಯೇ ಮಾಡಿದ ಈ ವಿಡಿಯೋ ಸಖತ್​ ಫನ್ನಿ ಆಗಿದೆ. ಆಲಿಯಾ ಭಟ್​ ಅವರು ಇದನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದಾರೆ. ‘ಕಟು ಸತ್ಯಗಳು’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​ನಲ್ಲಿ ನವೆಂಬರ್​ 4ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ಸ್ಟ್ರೀಮಿಂಗ್​ ಆರಂಭಿಸಲಿದೆ. ಅಮಿತಾಭ್​ ಬಚ್ಚನ್​, ನಾಗಾರ್ಜುನ, ಶಾರುಖ್​ ಖಾನ್​, ಮೌನಿ ರಾಯ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಕಳಪೆ ಗ್ರಾಫಿಕ್ಸ್​ ಕಾರಣಕ್ಕೆ ಈ ಚಿತ್ರದ ಟ್ರೇಲರ್​ ಅನ್ನು ಟ್ರೋಲ್​ ಮಾಡಲಾಗಿತ್ತು. ಆದರೆ ಸಿನಿಮಾ ಸೂಪರ್​ ಹಿಟ್​ ಆಯಿತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ