AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಭಾನುವಾರವೂ ‘ಅನಿಮಲ್’ ಸಿನಿಮಾ ಅಬ್ಬರ; 400 ಕೋಟಿ ರೂಪಾಯಿ ದಾಟಿದ ಕಲೆಕ್ಷನ್

‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ

ಎರಡನೇ ಭಾನುವಾರವೂ ‘ಅನಿಮಲ್’ ಸಿನಿಮಾ ಅಬ್ಬರ; 400 ಕೋಟಿ ರೂಪಾಯಿ ದಾಟಿದ ಕಲೆಕ್ಷನ್
ಅನಿಮಲ್
ರಾಜೇಶ್ ದುಗ್ಗುಮನೆ
|

Updated on: Dec 11, 2023 | 10:15 AM

Share

‘ಅನಿಮಲ್’ ಸಿನಿಮಾ (Animal Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಟ್ರೇಲರ್ ಮೂಲಕ ಸಿನಿಮಾ ಅಬ್ಬರಿಸುವ ಸೂಚನೆ ನೀಡಿತ್ತು. ಈಗ ಈ ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಎರಡನೇ ಭಾನುವಾರವೂ ಅಬ್ಬರಿಸಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಸಿನಿಮಾದ ಕಲೆಕ್ಷನ 700 ಕೋಟಿ ರೂಪಾಯಿ ಆಗಿದೆ. ಕೇವಲ 10 ದಿನಕ್ಕೆ ಸಿನಿಮಾ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ತಂಡದ ಖುಷಿ ಹೆಚ್ಚಿಸಿದೆ. ಈ ಚಿತ್ರದಿಂದ ರಣಬೀರ್ ಕಪೂರ್ ಅವರು ದೊಡ್ಡ ಗೆಲುವು ಕಂಡಿದ್ದಾರೆ.

‘ಅನಿಮಲ್’ ಚಿತ್ರಕ್ಕೆ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾದಲ್ಲಿ ಪುರುಷರ ಡಾಮಿನೇಷನ್ ಬಗ್ಗೆ ಮಾತನಾಡಲಾಗಿದೆ ಎಂದು ಕೆಲವರು ಅಪಸ್ವರ ತೆಗೆದಿದ್ದಾರೆ. ವೈಲೆನ್ಸ್ ವಿಚಾರವನ್ನೂ ಕೆಲವರು ಹೈಲೈಟ್ ಮಾಡಿದ್ದಾರೆ. ಆದರೆ, ಇದಕ್ಕೆಲ್ಲ ಸಿನಿಪ್ರಿಯರು ಹೆಚ್ಚು ಪ್ರಾಮುಖ್ಯತೆ ನೀಡಿಲ್ಲ. ಹೀಗಾಗಿ, ಭಾರತದ ಬಾಕ್ಸ್ ಆಫೀಸ್​ನಲ್ಲಿ ಸಿನಿಮಾದ ಗಳಿಕೆ 400 ಕೋಟಿ ರೂಪಾಯಿ ದಾಟಿದೆ.

‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಈ ಚಿತ್ರದ ಮೂಲಕ ಬಾಲಿವುಡ್​ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ: ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ನಟನ ಬಗ್ಗೆ ಮೆಚ್ಚುಗೆ

‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಎರಡು ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ರಶ್ಮಿಕಾಗಿಂತ ತೃಪ್ತಿ ದಿಮ್ರಿ ಅವರ ಪಾತ್ರ ಹೆಚ್ಚು ಗಮನ ಸೆಳೆಯುತ್ತಿದೆ. ಅವರು ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ