Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀವ್ರ ಟೀಕೆ ನಡುವೆಯೂ ‘ಅನಿಮಲ್​’ ಚಿತ್ರ 9 ದಿನದಲ್ಲಿ ಗಳಿಸಿದ್ದು ಎಷ್ಟು?

‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಬಾಬಿ ಡಿಯೋಲ್​, ಅನಿಲ್​ ಕಪೂರ್​, ತೃಪ್ತಿ ದಿಮ್ರಿ, ರಶ್ಮಿಕಾ ಮಂದಣ್ಣ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಬಿಡುಗಡೆಯಾಗಿ 9 ದಿನ ಕಳೆದರೂ ಕೂಡ ಈ ಸಿನಿಮಾದ ಹವಾ ಕಡಿಮೆ ಆಗಿಲ್ಲ.

ತೀವ್ರ ಟೀಕೆ ನಡುವೆಯೂ ‘ಅನಿಮಲ್​’ ಚಿತ್ರ 9 ದಿನದಲ್ಲಿ ಗಳಿಸಿದ್ದು ಎಷ್ಟು?
ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
|

Updated on: Dec 10, 2023 | 8:20 AM

ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ಕುರಿತಂತೆ ಸಾಕಷ್ಟು ಚರ್ಚೆ ಆಗುತ್ತಿದೆ. ಈ ಸಿನಿಮಾದಲ್ಲಿ ಹಿಂಸೆಯನ್ನು ವಿಜೃಂಭಿಸಲಾಗಿದೆ. ಮಹಿಳೆಯರ ಬಗ್ಗೆ ಅವಹೇಳನ ಮಾಡುವಂತಹ ದೃಶ್ಯಗಳು ಇವೆ. ಅಸಭ್ಯವಾದ ಭಾಷೆ ಬಳಕೆ ಆಗಿದೆ. ಈ ಕಾರಣದಿಂದ ಸಿನಿಮಾಗೆ ತೀವ್ರ ಟೀಕೆ ವ್ಯಕ್ತವಾಗಿದೆ. ಹಾಗಿದ್ದರೂ ಕೂಡ ‘ಅನಿಮಲ್​’ ಸಿನಿಮ ಬಾಕ್ಸ್​ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ರಣಬೀರ್​ ಕಪೂರ್​ (Ranbir Kapoor) ಅವರ ವೃತ್ತಿಜೀವನದಲ್ಲಿ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಒಳಗಾಗಿದೆ. 9 ದಿನದಲ್ಲಿ ‘ಅನಿಮಲ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮಾಡಿದ ಕಲೆಕ್ಷನ್​ ಬಗ್ಗೆ ಇಲ್ಲದೆ ಮಾಹಿತಿ..

ಮೊದಲ ದಿನ ‘ಅನಿಮಲ್​’ ಚಿತ್ರಕ್ಕೆ 52 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಎರಡನೇ ದಿನ 57 ಕೋಟಿ ರೂಪಾಯಿ ಬಾಚಿಕೊಂಡಿತು. ಮೂರನೇ ದಿನ 61 ಕೋಟಿ, ನಾಲ್ಕನೇ ದಿನ 38 ಕೋಟಿ, ಐದನೇ ದಿನ 32 ಕೋಟಿ, 6ನೇ ದಿನ 26 ಕೋಟಿ, 7ನೇ ದಿನ 22 ಕೋಟಿ, 8ನೇ ದಿನ 21 ಕೋಟಿ, 9ನೇ ದಿನ 34 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. ಈವರೆಗೆ ಒಟ್ಟು 344 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಇದನ್ನೂ ಓದಿ: ರಣಬೀರ್​ ಕಪೂರ್​ ಜತೆ ತೃಪ್ತಿ ದಿಮ್ರಿ ಬೋಲ್ಡ್​ ಪಾತ್ರ: ‘ಅನಿಮಲ್​’ ಚಿತ್ರಕ್ಕೆ ಈ ಸುಂದರಿ ಆಯ್ಕೆ ಆಗಿದ್ದು ಹೇಗೆ?

‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ರಣಬೀರ್​ ಕಪೂರ್​ ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬಾಬಿ ಡಿಯೋಲ್​, ಅನಿಲ್​ ಕಪೂರ್​, ತೃಪ್ತಿ ದಿಮ್ರಿ, ರಶ್ಮಿಕಾ ಮಂದಣ್ಣ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರವನ್ನು ಕ್ಲಾಸಿಕ್​ ಎಂದು ಹೊಗಳಿದ ಅಲ್ಲು ಅರ್ಜುನ್​; ರಶ್ಮಿಕಾ ನಟನೆಗೂ ಮೆಚ್ಚುಗೆ

2ನೇ ವೀಕೆಂಡ್​ನಲ್ಲಿ ‘ಅನಿಮಲ್​’ ಸಿನಿಮಾ ಉತ್ತಮವಾಗಿ ಕಮಾಯಿ ಮಾಡುತ್ತಿದೆ. ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಅಂತಿಮವಾಗಿ ಎಷ್ಟು ಕಲೆಕ್ಷನ್​ ಆಗಲಿದೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾಗೆ ಸೀಕ್ವೆಲ್​ ಕೂಡ ಬರಲಿದೆ ಎಂಬುದಕ್ಕೆ ಚಿತ್ರದ ಕೊನೆಯಲ್ಲಿ ಸುಳಿವು ನೀಡಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿ ಬೇಸಿಕ್ ಡಾಟಾ ಒದಗಿಸಿದೆ, ಆದರ ಆಧಾರದ ಮೇಲೆ ತೀರ್ಮಾನಗಳು: ಸಚಿವ
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!
ಜಾತಿ ಗಣತಿಯ ಬಗ್ಗೆ ಕಾಂಗ್ರೆಸ್ ಸರ್ಕಾರದ ಗೊಂದಲ ಜನಕ್ಕೆ ಗೊತ್ತಾಗುತ್ತಿದೆ!