AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?

ಸೆ.28ರಂದು ರಣಬೀರ್​ ಕಪೂರ್​ ಅವರ ಜನ್ಮದಿನ. ಅಂದು ಸಿಂಪಲ್​ ಪೋಸ್ಟರ್​ ಬಿಡುಗಡೆ ಮಾಡಿ ಸುಮ್ಮನಾಗಬೇಕು ಎಂಬುದು ‘ಅನಿಮಲ್​’ ಬಳಗದ ನಿರ್ಧಾರ ಆಗಿತ್ತು. ಆದರೆ ಆ ನಿರ್ಧಾರದಲ್ಲಿ ಈಗ ಬದಲಾವಣೆ ಆಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?
ರಣಬೀರ್​ ಕಪೂರ್​, ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Sep 09, 2023 | 1:23 PM

ಸಿನಿಪ್ರಿಯರು ಅತಿ ಹೆಚ್ಚು ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾಗಳ ಪಟ್ಟಿಯಲ್ಲಿ ‘ಸಲಾರ್​’ (Salaar) ಚಿತ್ರಕ್ಕೆ ಮೊದಲ ಸ್ಥಾನ ಇದೆ ಎನ್ನಬಹುದು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ‘ಸಲಾರ್​’ ಬಿಡುಗಡೆ ದಿನಾಂಕ (Salaar Release Date) ಮುಂದಕ್ಕೆ ಹೋಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಹಾಗಾಗಿ ಸೆ.28ರಂದು ಇನ್ನುಳಿದ ಕೆಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದೇ ದಿನಾಂಕವನ್ನು ಬೇರೆ ರೀತಿಯಲ್ಲಿ ಉಪಯೋಗಿಸಿಕೊಳ್ಳಲು ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ತಂಡ ನಿರ್ಧರಿಸಿದೆ ಎನ್ನಲಾಗಿದೆ. ಹಾಗಂತ ಸೆಪ್ಟೆಂಬರ್​ 28ಕ್ಕೆ ‘ಅನಿಮಲ್​’ ಬಿಡುಗಡೆ ಆಗುವುದಿಲ್ಲ. ಅದರ ಬದಲು ಅಂದು ಅಭಿಮಾನಿಗಳಿಗೆ ಭರ್ಜರಿ ಸರ್ಪೈಸ್​ ನೀಡಲು ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ತೀರ್ಮಾನಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಬಹಳ ದಿನಗಳ ಹಿಂದೆ ‘ಅನಿಮಲ್​’ ಸಿನಿಮಾದ ಪ್ರೀ-ಟೀಸರ್​ ವಿಡಿಯೋ ಬಿಡುಗಡೆ ಮಾಡಲಾಗಿತ್ತು. ಅದನ್ನು ನೋಡಿದ ರಣಬೀರ್​ ಕಪೂರ್​ ಅಭಿಮಾನಿಗಳು ವಾವ್​ ಎಂದಿದ್ದರು. ಅದರ ಬೆನ್ನಲ್ಲೇ ಟೀಸರ್​ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದ್ದರಿಂದ ಟೀಸರ್​ ಅನಾವರಣ ಆಗಲೇ ಇಲ್ಲ. ಇನ್ನು, ಸೆ.28ರಂದು ರಣಬೀರ್​ ಕಪೂರ್​ ಅವರ ಜನ್ಮದಿನ. ಅಂದು ಸಿಂಪಲ್​ ಪೋಸ್ಟರ್​ ಬಿಡುಗಡೆ ಮಾಡಿ ಸುಮ್ಮನಾಗಬೇಕು ಎಂಬುದು ‘ಅನಿಮಲ್​’ ಬಳಗದ ನಿರ್ಧಾರ ಆಗಿತ್ತು. ಆದರೆ ಆ ನಿರ್ಧಾರದಲ್ಲಿ ಈಗ ಬದಲಾವಣೆ ಆಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Animal Release Date: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ಒಂದು ವೇಳೆ ಸೆಪ್ಟೆಂಬರ್​ 28ರಂದು ‘ಸಲಾರ್​’ ಬಿಡುಗಡೆ ಆಗುವುದಾಗಿದ್ದರೆ ಅಂದು ಬೇರೆ ಯಾವುದೇ ಸಿನಿಮಾದ ಸದ್ದು ಇರುವುದಿಲ್ಲ. ಅದೇ ದಿನ ‘ಅನಿಮಲ್​’ ಟೀಸರ್​ ಬಿಡುಗಡೆ ಆದರೆ ಹೆಚ್ಚು ಗಮನ ಸೆಳೆಯುತ್ತಿರಲಿಲ್ಲ. ಆ ಕಾರಣಕ್ಕಾಗಿ ಸಿಂಪಲ್​ ಆದಂತಹ ಒಂದು ಪೋಸ್ಟರ್​ ಹಂಚಿಕೊಂಡು ರಣಬೀರ್​ ಕಪೂರ್​ ಅವರ ಬರ್ತ್​ಡೇ ಆಚರಿಸಬೇಕು ಎಂದು ‘ಅನಿಮಲ್​’ ಬಳಗ ತೀರ್ಮಾನಿಸಿತ್ತು. ಆದರೆ ಈಗ ‘ಸಲಾರ್​’ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ಸೆ.28ರಂದು ಅದ್ದೂರಿಯಾಗಿ ಟೀಸರ್​ ಅನಾವರಣ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗ ಅವರು ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

‘ಅರ್ಜುನ್​ ರೆಡ್ಡಿ’ ಮತ್ತು ‘ಕಬೀರ್​ ಸಿಂಗ್​’ ಸಿನಿಮಾಗಳ ಯಶಸ್ಸಿನ ಬಳಿಕ ಸಂದೀಪ್​ ರೆಡ್ಡಿ ವಂಗ ಅವರ ಬೇಡಿಕೆ ಹೆಚ್ಚಿದೆ. ಹಾಗಾಗಿ ‘ಅನಿಮಲ್​’ ಸಿನಿಮಾ ಮೇಲೆ ನಿರೀಕ್ಷೆ ಜೋರಾಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಸಖತ್​ ಮಾಸ್​ ಆಗಿ ಮೂಡಿಬರುತ್ತಿರುವ ಈ ಚಿತ್ರ ಡಿಸೆಂಬರ್​ 1ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್