AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು

Brahmastra Trailer Troll: ಟ್ರೇಲರ್​ನಲ್ಲಿನ ದೃಶ್ಯವೊಂದರಲ್ಲಿ ರಣಬೀರ್​ ಕಪೂರ್​ ಅವರು ಶೂ ಧರಿಸಿ ದೇಗುಲ ಪ್ರವೇಶಿಸಿರುವುದು ಕಾಣಿಸಿದೆ. ಅದನ್ನು ಕಂಡು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
ರಣಬೀರ್ ಕಪೂರ್
TV9 Web
| Edited By: |

Updated on: Jun 17, 2022 | 8:48 AM

Share

ಅಯಾನ್​ ಮುಖರ್ಜಿ ನಿರ್ದೇಶನ ಮಾಡುತ್ತಿರುವ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಹಲವು ಕಾರಣದಿಂದ ಸುದ್ದಿ ಆಗುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್​ ರಿಲೀಸ್​ ಆಯಿತು. ಅದನ್ನು ಕಂಡು ನೆಟ್ಟಿಗರು ಹಲವು ಬಗೆಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಗಳಿಗೆ ‘ಬ್ರಹ್ಮಾಸ್ತ್ರ’ ಟ್ರೇಲರ್​ (Brahmastra Trailer) ಇಷ್ಟ ಆಗಿದೆ. ಆದರೆ ಇನ್ನೊಂದು ವರ್ಗದ ನೆಟ್ಟಿಗರು ಇದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ಶಿವ ಎಂಬ ಪಾತ್ರ ಮಾಡಿದ್ದಾರೆ. ಕೆಲವು ಸೀನ್​ಗಳಲ್ಲಿ ತ್ರಿಶೂಲ ಹಿಡಿದು ಕೂಡ ಪೋಸ್​ ನೀಡಿದ್ದಾರೆ. ಆದರೆ ಇದರ ನಡುವೆ ಒಂದು ಎಡವಟ್ಟು ಕೂಡ ಆಗಿದೆ. ರಣಬೀರ್​ ಕಪೂರ್​ (Ranbir Kapoor) ಅವರು ಶೂ ಧರಿಸಿ ದೇವಸ್ಥಾನದ ಒಳಗೆ ಪ್ರವೇಶಿಸುತ್ತಿರುವ ದೃಶ್ಯ ಕೂಡ ಟ್ರೇಲರ್​ನಲ್ಲಿ ಕಾಣಿಸಿದೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾದ ಕಥೆ ಏನು ಎಂಬುದರ ಸುಳಿವನ್ನು ಈ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. ಸೂಪರ್​ ಹೀರೋ ರೀತಿ ಇರುವ ಶಿವ ಎಂಬ ವ್ಯಕ್ತಿಯಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಶೂ ಧರಿಸಿ ದೇಗುಲ ಪ್ರವೇಶಿಸಿದ್ದು ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಅದಕ್ಕೆ ಚಿತ್ರತಂಡದಿಂದ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆ ದೃಶ್ಯವನ್ನು ಬದಲಾಯಿಸಬೇಕು ಎಂಬ ಒತ್ತಾಯ ಕೂಡ ಕೇಳಿಬಂದಿದೆ.

ಇದನ್ನೂ ಓದಿ
Image
​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
Image
ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

ರಣಬೀರ್​ ಕಪೂರ್​, ಆಲಿಯಾ ಭಟ್​ ಮಾತ್ರವಲ್ಲದೇ ಅಕ್ಕಿನೇನಿ ನಾಗಾರ್ಜುನ, ಅಮಿತಾಭ್​ ಬಚ್ಚನ್​, ಮೌನಿ ರಾಯ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಚಿತ್ರದ ಟ್ರೇಲರ್​ನಲ್ಲಿ ಗ್ರಾಫಿಕ್ಸ್​ ದೃಶ್ಯಗಳು ಹೈಲೈಟ್​ ಆಗಿವೆ. ಆದರೆ ಗ್ರಾಫಿಕ್ಸ್​ ಗುಣಮಟ್ಟ ಕಳಪೆ ಆಗಿದೆ ಎಂಬ ಕಾರಣದಿಂದಲೂ ಚಿತ್ರತಂಡವನ್ನು ಟ್ರೋಲ್​ ಮಾಡಲಾಗುತ್ತಿದೆ.

ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಮೂರು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ನಟಿ ಮೌನಿ ರಾಯ್​ ಅವರು ಈ ಸಿನಿಮಾದಲ್ಲಿ ನೆಗೆಟಿವ್​ ಶೇಡ್ ಇರುವ ಪಾತ್ರ ಮಾಡಿದ್ದಾರೆ. ಅವರ ಲುಕ್​ ಬಗ್ಗೆಯೂ ಕೆಲವರು ಲೇವಡಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾ ಸಖತ್​ ಚರ್ಚೆ ಹುಟ್ಟುಹಾಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ