AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಬಾಲಿವುಡ್​ ಮಂದಿ ಭಾರಿ ಉತ್ಸಾಹದಿಂದ ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರಿಗೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್​ ಅವರು ಕಾಪಿರೈಟ್​ ಉಲ್ಲಂಘನೆಯ ನೋಟಿಸ್​ ಕಳಿಸಿದ್ದಾರೆ. ಇದರಿಂದ ಹೊಸ ಚರ್ಚೆ ಶುರುವಾಗಿದೆ. ರಾಮಾಯಣದ ಕಥೆಗೆ ಇದು ಯಾವ ಸೀಮೆಯ ಕಾಪಿರೈಟ್​ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 09, 2024 | 9:33 PM

Share

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದು ಹೋಗಿವೆ. ಈಗ ಬಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾಕಿಂಗ್​ ಸಂಗತಿ ಏನೆಂದರೆ, ಈ ಚಿತ್ರತಂಡದ ಮೇಲೆ ಕಾಪಿರೈಟ್ (Copyright)​ ಉಲ್ಲಂಘನೆಯ ಆರೋಪ ಎದುರಾಗಿದೆ. ‘ರಾಮಾಯಣ’ (Ramayan) ಸಿನಿಮಾದ ನಿರ್ಮಾಪಕರಿಗೆ ನೋಟಿಸ್​ ಕಳಿಸಲಾಗಿದೆ!

ಎಲ್ಲರಿಗೂ ತಿಳಿದಿರುವಂತೆ ‘ರಾಮಾಯಣ’ ಕಥೆ ಯಾರ ಸ್ವತ್ತೂ ಅಲ್ಲ. ಅದು ಎಲ್ಲರಿಗೂ ಸೇರಿದ್ದು. ಯಾರು ಬೇಕಿದ್ದರೂ ಆ ಕಥೆಯನ್ನು ಬಳಸಿಕೊಂಡು ಸಿನಿಮಾ, ನಾಟಕ, ಸೀರಿಯಲ್ ಮಾಡಬಹುದು. ಅದರ ಮೇಲೆ ಯಾರೂ ಕೂಡ ಕಾಪಿ ರೈಟ್​ ಹೊಂದುವಂತಿಲ್ಲ. ಹಾಗಿದ್ದರೂ ಕೂಡ ಬಾಲಿವುಡ್​ನ ‘ರಾಮಾಯಣ’ ಚಿತ್ರತಂಡಕ್ಕೆ ಕಾಪಿರೈಟ್​ ಸಮಸ್ಯೆ ಎದುರಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ ಹಾಗೂ ಮಧು ಮಂಟೇನಾ ಅವರ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯ ಮೂಲಕ ಈ ನೋಟಿಸ್​ ಕಳಿಸಿದ್ದಾರೆ. ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಸಂಸ್ಥೆಗೆ ನೋಟಿಸ್​ ನೀಡಲಾಗಿದೆ. ಇದರ ಅನ್ವಯ ಏಪ್ರಿಲ್​ನಲ್ಲಿ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಕಂಪನಿಯು ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆದರೆ ಒಪ್ಪಂದದ ಪ್ರಕಾರ ಹಕ್ಕು ಖರೀದಿಸದೇ ಸಿನಿಮಾ ಮಾಡುತ್ತಿರುವುದಕ್ಕೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ರಾಮಾಯಣಕ್ಕೆ ಕಾಪಿರೈಟ್​ ಇಲ್ಲವಾದರೂ ಸಹ, ಸ್ಕಿಪ್ಟ್​ಗೆ ಕಾಪಿರೈಟ್​ ಇರುತ್ತದೆ. ಸಿನಿಮಾದ ಟೈಟಲ್​ಗೆ ಸಂಬಂಧಿಸಿದಂತೆ ಕೂಡ ಕಾಪಿರೈಟ್​ ಸಮಸ್ಯೆ ಎದುರಾಗಬಹುದು. ಈಗ ಈ ಎರಡು ನಿರ್ಮಾಣ ಸಂಸ್ಥೆಗಳ ನಡುವೆ ಇದೇ ವಿಚಾರಕ್ಕೆ ಕಿರಿಕ್​ ಆಗಿರಬಹುದು ಎನ್ನಲಾಗಿದೆ. ಬಾಲಿವುಡ್​ನ ರಾಮಾಯಣ ಚಿತ್ರತಂಡದವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಫೋಟೋಗಳು ಲೀಕ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ