AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಬಾಲಿವುಡ್​ ಮಂದಿ ಭಾರಿ ಉತ್ಸಾಹದಿಂದ ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರಿಗೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್​ ಅವರು ಕಾಪಿರೈಟ್​ ಉಲ್ಲಂಘನೆಯ ನೋಟಿಸ್​ ಕಳಿಸಿದ್ದಾರೆ. ಇದರಿಂದ ಹೊಸ ಚರ್ಚೆ ಶುರುವಾಗಿದೆ. ರಾಮಾಯಣದ ಕಥೆಗೆ ಇದು ಯಾವ ಸೀಮೆಯ ಕಾಪಿರೈಟ್​ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 09, 2024 | 9:33 PM

Share

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದು ಹೋಗಿವೆ. ಈಗ ಬಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾಕಿಂಗ್​ ಸಂಗತಿ ಏನೆಂದರೆ, ಈ ಚಿತ್ರತಂಡದ ಮೇಲೆ ಕಾಪಿರೈಟ್ (Copyright)​ ಉಲ್ಲಂಘನೆಯ ಆರೋಪ ಎದುರಾಗಿದೆ. ‘ರಾಮಾಯಣ’ (Ramayan) ಸಿನಿಮಾದ ನಿರ್ಮಾಪಕರಿಗೆ ನೋಟಿಸ್​ ಕಳಿಸಲಾಗಿದೆ!

ಎಲ್ಲರಿಗೂ ತಿಳಿದಿರುವಂತೆ ‘ರಾಮಾಯಣ’ ಕಥೆ ಯಾರ ಸ್ವತ್ತೂ ಅಲ್ಲ. ಅದು ಎಲ್ಲರಿಗೂ ಸೇರಿದ್ದು. ಯಾರು ಬೇಕಿದ್ದರೂ ಆ ಕಥೆಯನ್ನು ಬಳಸಿಕೊಂಡು ಸಿನಿಮಾ, ನಾಟಕ, ಸೀರಿಯಲ್ ಮಾಡಬಹುದು. ಅದರ ಮೇಲೆ ಯಾರೂ ಕೂಡ ಕಾಪಿ ರೈಟ್​ ಹೊಂದುವಂತಿಲ್ಲ. ಹಾಗಿದ್ದರೂ ಕೂಡ ಬಾಲಿವುಡ್​ನ ‘ರಾಮಾಯಣ’ ಚಿತ್ರತಂಡಕ್ಕೆ ಕಾಪಿರೈಟ್​ ಸಮಸ್ಯೆ ಎದುರಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ ಹಾಗೂ ಮಧು ಮಂಟೇನಾ ಅವರ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯ ಮೂಲಕ ಈ ನೋಟಿಸ್​ ಕಳಿಸಿದ್ದಾರೆ. ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಸಂಸ್ಥೆಗೆ ನೋಟಿಸ್​ ನೀಡಲಾಗಿದೆ. ಇದರ ಅನ್ವಯ ಏಪ್ರಿಲ್​ನಲ್ಲಿ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಕಂಪನಿಯು ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆದರೆ ಒಪ್ಪಂದದ ಪ್ರಕಾರ ಹಕ್ಕು ಖರೀದಿಸದೇ ಸಿನಿಮಾ ಮಾಡುತ್ತಿರುವುದಕ್ಕೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ರಾಮಾಯಣಕ್ಕೆ ಕಾಪಿರೈಟ್​ ಇಲ್ಲವಾದರೂ ಸಹ, ಸ್ಕಿಪ್ಟ್​ಗೆ ಕಾಪಿರೈಟ್​ ಇರುತ್ತದೆ. ಸಿನಿಮಾದ ಟೈಟಲ್​ಗೆ ಸಂಬಂಧಿಸಿದಂತೆ ಕೂಡ ಕಾಪಿರೈಟ್​ ಸಮಸ್ಯೆ ಎದುರಾಗಬಹುದು. ಈಗ ಈ ಎರಡು ನಿರ್ಮಾಣ ಸಂಸ್ಥೆಗಳ ನಡುವೆ ಇದೇ ವಿಚಾರಕ್ಕೆ ಕಿರಿಕ್​ ಆಗಿರಬಹುದು ಎನ್ನಲಾಗಿದೆ. ಬಾಲಿವುಡ್​ನ ರಾಮಾಯಣ ಚಿತ್ರತಂಡದವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಫೋಟೋಗಳು ಲೀಕ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ