AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಬಾಲಿವುಡ್​ ಮಂದಿ ಭಾರಿ ಉತ್ಸಾಹದಿಂದ ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರಿಗೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್​ ಅವರು ಕಾಪಿರೈಟ್​ ಉಲ್ಲಂಘನೆಯ ನೋಟಿಸ್​ ಕಳಿಸಿದ್ದಾರೆ. ಇದರಿಂದ ಹೊಸ ಚರ್ಚೆ ಶುರುವಾಗಿದೆ. ರಾಮಾಯಣದ ಕಥೆಗೆ ಇದು ಯಾವ ಸೀಮೆಯ ಕಾಪಿರೈಟ್​ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 09, 2024 | 9:33 PM

Share

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದು ಹೋಗಿವೆ. ಈಗ ಬಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾಕಿಂಗ್​ ಸಂಗತಿ ಏನೆಂದರೆ, ಈ ಚಿತ್ರತಂಡದ ಮೇಲೆ ಕಾಪಿರೈಟ್ (Copyright)​ ಉಲ್ಲಂಘನೆಯ ಆರೋಪ ಎದುರಾಗಿದೆ. ‘ರಾಮಾಯಣ’ (Ramayan) ಸಿನಿಮಾದ ನಿರ್ಮಾಪಕರಿಗೆ ನೋಟಿಸ್​ ಕಳಿಸಲಾಗಿದೆ!

ಎಲ್ಲರಿಗೂ ತಿಳಿದಿರುವಂತೆ ‘ರಾಮಾಯಣ’ ಕಥೆ ಯಾರ ಸ್ವತ್ತೂ ಅಲ್ಲ. ಅದು ಎಲ್ಲರಿಗೂ ಸೇರಿದ್ದು. ಯಾರು ಬೇಕಿದ್ದರೂ ಆ ಕಥೆಯನ್ನು ಬಳಸಿಕೊಂಡು ಸಿನಿಮಾ, ನಾಟಕ, ಸೀರಿಯಲ್ ಮಾಡಬಹುದು. ಅದರ ಮೇಲೆ ಯಾರೂ ಕೂಡ ಕಾಪಿ ರೈಟ್​ ಹೊಂದುವಂತಿಲ್ಲ. ಹಾಗಿದ್ದರೂ ಕೂಡ ಬಾಲಿವುಡ್​ನ ‘ರಾಮಾಯಣ’ ಚಿತ್ರತಂಡಕ್ಕೆ ಕಾಪಿರೈಟ್​ ಸಮಸ್ಯೆ ಎದುರಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ ಹಾಗೂ ಮಧು ಮಂಟೇನಾ ಅವರ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯ ಮೂಲಕ ಈ ನೋಟಿಸ್​ ಕಳಿಸಿದ್ದಾರೆ. ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಸಂಸ್ಥೆಗೆ ನೋಟಿಸ್​ ನೀಡಲಾಗಿದೆ. ಇದರ ಅನ್ವಯ ಏಪ್ರಿಲ್​ನಲ್ಲಿ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಕಂಪನಿಯು ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆದರೆ ಒಪ್ಪಂದದ ಪ್ರಕಾರ ಹಕ್ಕು ಖರೀದಿಸದೇ ಸಿನಿಮಾ ಮಾಡುತ್ತಿರುವುದಕ್ಕೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ರಾಮಾಯಣಕ್ಕೆ ಕಾಪಿರೈಟ್​ ಇಲ್ಲವಾದರೂ ಸಹ, ಸ್ಕಿಪ್ಟ್​ಗೆ ಕಾಪಿರೈಟ್​ ಇರುತ್ತದೆ. ಸಿನಿಮಾದ ಟೈಟಲ್​ಗೆ ಸಂಬಂಧಿಸಿದಂತೆ ಕೂಡ ಕಾಪಿರೈಟ್​ ಸಮಸ್ಯೆ ಎದುರಾಗಬಹುದು. ಈಗ ಈ ಎರಡು ನಿರ್ಮಾಣ ಸಂಸ್ಥೆಗಳ ನಡುವೆ ಇದೇ ವಿಚಾರಕ್ಕೆ ಕಿರಿಕ್​ ಆಗಿರಬಹುದು ಎನ್ನಲಾಗಿದೆ. ಬಾಲಿವುಡ್​ನ ರಾಮಾಯಣ ಚಿತ್ರತಂಡದವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಫೋಟೋಗಳು ಲೀಕ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ