AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಬಾಲಿವುಡ್​ ಮಂದಿ ಭಾರಿ ಉತ್ಸಾಹದಿಂದ ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರಿಗೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್​ ಅವರು ಕಾಪಿರೈಟ್​ ಉಲ್ಲಂಘನೆಯ ನೋಟಿಸ್​ ಕಳಿಸಿದ್ದಾರೆ. ಇದರಿಂದ ಹೊಸ ಚರ್ಚೆ ಶುರುವಾಗಿದೆ. ರಾಮಾಯಣದ ಕಥೆಗೆ ಇದು ಯಾವ ಸೀಮೆಯ ಕಾಪಿರೈಟ್​ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 09, 2024 | 9:33 PM

Share

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದು ಹೋಗಿವೆ. ಈಗ ಬಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾಕಿಂಗ್​ ಸಂಗತಿ ಏನೆಂದರೆ, ಈ ಚಿತ್ರತಂಡದ ಮೇಲೆ ಕಾಪಿರೈಟ್ (Copyright)​ ಉಲ್ಲಂಘನೆಯ ಆರೋಪ ಎದುರಾಗಿದೆ. ‘ರಾಮಾಯಣ’ (Ramayan) ಸಿನಿಮಾದ ನಿರ್ಮಾಪಕರಿಗೆ ನೋಟಿಸ್​ ಕಳಿಸಲಾಗಿದೆ!

ಎಲ್ಲರಿಗೂ ತಿಳಿದಿರುವಂತೆ ‘ರಾಮಾಯಣ’ ಕಥೆ ಯಾರ ಸ್ವತ್ತೂ ಅಲ್ಲ. ಅದು ಎಲ್ಲರಿಗೂ ಸೇರಿದ್ದು. ಯಾರು ಬೇಕಿದ್ದರೂ ಆ ಕಥೆಯನ್ನು ಬಳಸಿಕೊಂಡು ಸಿನಿಮಾ, ನಾಟಕ, ಸೀರಿಯಲ್ ಮಾಡಬಹುದು. ಅದರ ಮೇಲೆ ಯಾರೂ ಕೂಡ ಕಾಪಿ ರೈಟ್​ ಹೊಂದುವಂತಿಲ್ಲ. ಹಾಗಿದ್ದರೂ ಕೂಡ ಬಾಲಿವುಡ್​ನ ‘ರಾಮಾಯಣ’ ಚಿತ್ರತಂಡಕ್ಕೆ ಕಾಪಿರೈಟ್​ ಸಮಸ್ಯೆ ಎದುರಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ ಹಾಗೂ ಮಧು ಮಂಟೇನಾ ಅವರ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯ ಮೂಲಕ ಈ ನೋಟಿಸ್​ ಕಳಿಸಿದ್ದಾರೆ. ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಸಂಸ್ಥೆಗೆ ನೋಟಿಸ್​ ನೀಡಲಾಗಿದೆ. ಇದರ ಅನ್ವಯ ಏಪ್ರಿಲ್​ನಲ್ಲಿ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಕಂಪನಿಯು ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆದರೆ ಒಪ್ಪಂದದ ಪ್ರಕಾರ ಹಕ್ಕು ಖರೀದಿಸದೇ ಸಿನಿಮಾ ಮಾಡುತ್ತಿರುವುದಕ್ಕೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ರಾಮಾಯಣಕ್ಕೆ ಕಾಪಿರೈಟ್​ ಇಲ್ಲವಾದರೂ ಸಹ, ಸ್ಕಿಪ್ಟ್​ಗೆ ಕಾಪಿರೈಟ್​ ಇರುತ್ತದೆ. ಸಿನಿಮಾದ ಟೈಟಲ್​ಗೆ ಸಂಬಂಧಿಸಿದಂತೆ ಕೂಡ ಕಾಪಿರೈಟ್​ ಸಮಸ್ಯೆ ಎದುರಾಗಬಹುದು. ಈಗ ಈ ಎರಡು ನಿರ್ಮಾಣ ಸಂಸ್ಥೆಗಳ ನಡುವೆ ಇದೇ ವಿಚಾರಕ್ಕೆ ಕಿರಿಕ್​ ಆಗಿರಬಹುದು ಎನ್ನಲಾಗಿದೆ. ಬಾಲಿವುಡ್​ನ ರಾಮಾಯಣ ಚಿತ್ರತಂಡದವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಫೋಟೋಗಳು ಲೀಕ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ