‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​

ಬಾಲಿವುಡ್​ ಮಂದಿ ಭಾರಿ ಉತ್ಸಾಹದಿಂದ ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಆದರೆ ಅವರಿಗೆ ಮಧು ಮಂಟೇನಾ ಮತ್ತು ಅಲ್ಲು ಅರವಿಂದ್​ ಅವರು ಕಾಪಿರೈಟ್​ ಉಲ್ಲಂಘನೆಯ ನೋಟಿಸ್​ ಕಳಿಸಿದ್ದಾರೆ. ಇದರಿಂದ ಹೊಸ ಚರ್ಚೆ ಶುರುವಾಗಿದೆ. ರಾಮಾಯಣದ ಕಥೆಗೆ ಇದು ಯಾವ ಸೀಮೆಯ ಕಾಪಿರೈಟ್​ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ.

‘ರಾಮಾಯಣ’ ಚಿತ್ರತಂಡದ ಮೇಲೆ ಕಾಪಿರೈಟ್​ ಉಲ್ಲಂಘನೆ ಆರೋಪ; ನಿರ್ಮಾಪಕರಿಗೆ ನೋಟಿಸ್​
ರಣಬೀರ್​ ಕಪೂರ್​
Follow us
|

Updated on: May 09, 2024 | 9:33 PM

ರಾಮಾಯಣ ಕಥೆಯನ್ನು ಆಧರಿಸಿ ಈಗಾಗಲೇ ಅನೇಕ ಸಿನಿಮಾಗಳು ಬಂದು ಹೋಗಿವೆ. ಈಗ ಬಾಲಿವುಡ್​ನಲ್ಲಿ ಮತ್ತೊಂದು ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ‘ದಂಗಲ್​’ ಖ್ಯಾತಿಯ ನಿರ್ದೇಶಕ ನಿತೇಶ್​ ತಿವಾರಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಶಾಕಿಂಗ್​ ಸಂಗತಿ ಏನೆಂದರೆ, ಈ ಚಿತ್ರತಂಡದ ಮೇಲೆ ಕಾಪಿರೈಟ್ (Copyright)​ ಉಲ್ಲಂಘನೆಯ ಆರೋಪ ಎದುರಾಗಿದೆ. ‘ರಾಮಾಯಣ’ (Ramayan) ಸಿನಿಮಾದ ನಿರ್ಮಾಪಕರಿಗೆ ನೋಟಿಸ್​ ಕಳಿಸಲಾಗಿದೆ!

ಎಲ್ಲರಿಗೂ ತಿಳಿದಿರುವಂತೆ ‘ರಾಮಾಯಣ’ ಕಥೆ ಯಾರ ಸ್ವತ್ತೂ ಅಲ್ಲ. ಅದು ಎಲ್ಲರಿಗೂ ಸೇರಿದ್ದು. ಯಾರು ಬೇಕಿದ್ದರೂ ಆ ಕಥೆಯನ್ನು ಬಳಸಿಕೊಂಡು ಸಿನಿಮಾ, ನಾಟಕ, ಸೀರಿಯಲ್ ಮಾಡಬಹುದು. ಅದರ ಮೇಲೆ ಯಾರೂ ಕೂಡ ಕಾಪಿ ರೈಟ್​ ಹೊಂದುವಂತಿಲ್ಲ. ಹಾಗಿದ್ದರೂ ಕೂಡ ಬಾಲಿವುಡ್​ನ ‘ರಾಮಾಯಣ’ ಚಿತ್ರತಂಡಕ್ಕೆ ಕಾಪಿರೈಟ್​ ಸಮಸ್ಯೆ ಎದುರಾಗಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.

ಅಲ್ಲು ಅರ್ಜುನ್​ ಅವರ ತಂದೆ ಅಲ್ಲು ಅರವಿಂದ್​ ಹಾಗೂ ಮಧು ಮಂಟೇನಾ ಅವರ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯ ಮೂಲಕ ಈ ನೋಟಿಸ್​ ಕಳಿಸಿದ್ದಾರೆ. ಬಾಲಿವುಡ್​ನಲ್ಲಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಸಂಸ್ಥೆಗೆ ನೋಟಿಸ್​ ನೀಡಲಾಗಿದೆ. ಇದರ ಅನ್ವಯ ಏಪ್ರಿಲ್​ನಲ್ಲಿ ‘ಪ್ರೈಂ ಫೋಕಸ್​ ಟೆಕ್ನಾಲಜಿಸ್​’ ಕಂಪನಿಯು ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆದರೆ ಒಪ್ಪಂದದ ಪ್ರಕಾರ ಹಕ್ಕು ಖರೀದಿಸದೇ ಸಿನಿಮಾ ಮಾಡುತ್ತಿರುವುದಕ್ಕೆ ನೋಟಿಸ್​ ನೀಡಲಾಗಿದೆ.

ಇದನ್ನೂ ಓದಿ: ‘ರಾಮಾಯಣ’ ನಟಿ ಸಾಯಿ ಪಲ್ಲವಿ ಅಭಿನಯದ ಇನ್ನೊಂದು ಚಿತ್ರ 40 ಕೋಟಿ ರೂ.ಗೆ ಸೇಲ್​

ರಾಮಾಯಣಕ್ಕೆ ಕಾಪಿರೈಟ್​ ಇಲ್ಲವಾದರೂ ಸಹ, ಸ್ಕಿಪ್ಟ್​ಗೆ ಕಾಪಿರೈಟ್​ ಇರುತ್ತದೆ. ಸಿನಿಮಾದ ಟೈಟಲ್​ಗೆ ಸಂಬಂಧಿಸಿದಂತೆ ಕೂಡ ಕಾಪಿರೈಟ್​ ಸಮಸ್ಯೆ ಎದುರಾಗಬಹುದು. ಈಗ ಈ ಎರಡು ನಿರ್ಮಾಣ ಸಂಸ್ಥೆಗಳ ನಡುವೆ ಇದೇ ವಿಚಾರಕ್ಕೆ ಕಿರಿಕ್​ ಆಗಿರಬಹುದು ಎನ್ನಲಾಗಿದೆ. ಬಾಲಿವುಡ್​ನ ರಾಮಾಯಣ ಚಿತ್ರತಂಡದವರು ಈ ಬಗ್ಗೆ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು. ಈ ಸಿನಿಮಾದಲ್ಲಿ ಸಾಯಿ ಪಲ್ಲವಿ ಅವರು ಸೀತೆಯ ಪಾತ್ರ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಅವರ ಫೋಟೋಗಳು ಲೀಕ್​ ಆಗಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ