AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್​ಬೀರ್ ಕಪೂರ್​ಗೂ ಬಂತು ಇಡಿ ಸಮನ್ಸ್

Ranbir Kapoor: ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಹೆಸರು ಕೇಳಿ ಬಂದಿದೆ. ರಣ್​ಬೀರ್​ಗೆ ಇಡಿ ಸಮನ್ಸ್ ಜಾರಿ ಮಾಡಿದ್ದು ಶೀಘ್ರವೇ ಉತ್ತರಿಸುವಂತೆ ಸೂಚಿಸಿದೆ.

ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್​ಬೀರ್ ಕಪೂರ್​ಗೂ ಬಂತು ಇಡಿ ಸಮನ್ಸ್
ರಣ್​ಬೀರ್ ಕಪೂರ್
ಮಂಜುನಾಥ ಸಿ.
|

Updated on:Oct 04, 2023 | 4:37 PM

Share

ಕಳೆದ ತಿಂಗಳ ಮಧ್ಯದಲ್ಲಿ ಬಾಲಿವುಡ್​ನ (Bollywood) ಕೆಲವು ನಟ-ನಟಿಯರು, ಸಂಗೀತಗಾರರಿಗೆ ಜಾರಿ ನಿರ್ದೇಶನಾಲಯವು (ಇಡಿ) ಬೆಟ್ಟಿಂಗ್ ಆಪ್ ಒಂದರ ಪ್ರಕರಣ ಸಂಬಂಧ ದಾಳಿ ನಡೆಸಿ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಇದೀಗ ಅದೇ ಪ್ರಕರಣದಲ್ಲಿ ಬಾಲಿವುಡ್​ನ ಸ್ಟಾರ್ ನಟ ರಣ್​ಬೀರ್ ಕಪೂರ್​ಗೂ ಸಮನ್ಸ್​ ಜಾರಿ ಮಾಡಿದ್ದು, ಉತ್ತರ ನೀಡುವಂತೆ ಸೂಚಿಸಿದೆ.

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಂಬಂಧ ಇಡಿಯು ತನಿಖೆ ನಡೆಸುತ್ತಿದ್ದು, ಬೆಟ್ಟಿಂಗ್​ ಆಪ್​ನ ಸಹ ಮಾಲೀಕ ಸೌರಭ್ ಚಂದ್ರಕರ್ ವಿವಾಹದಲ್ಲಿ ಭಾಗಿಯಾಗಿದ್ದ ಬಾಲಿವುಡ್​ನ ನಟ-ನಟಿಯರು, ಸಂಗೀತಗಾರರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇದೇ ಪ್ರಕರಣದ ತನಿಖೆಯನ್ನು ಇಡಿ ಸಂಸ್ಥೆ ಚುರುಕುಗೊಳಿಸಿತ್ತು, ತನಿಖೆಯ ಭಾಗವಾಗಿ ನಟ ರಣ್​ಬೀರ್ ಕಪೂರ್​ಗೂ ನೊಟೀಸ್ ನೀಡಲಾಗಿದೆ. ಅಕ್ಟೋಬರ್ 6 ರ ಒಳಗಾಗಿ ಸಮನ್​ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಹಲವು ಬಾಲಿವುಡ್ ನಟರ ಮೇಲೆ ಇಡಿ ದಾಳಿ: ದುಬೈ ಮದುವೆಯ ಲಿಂಕ್

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಹ ಮಾಲೀಕ ಸೌರಭ್ ಚಂದ್ರಕರ್ ಮದುವೆ ಕೆಲವು ತಿಂಗಳ ಹಿಂದೆ ದುಬೈನಲ್ಲಿ ನಡೆದಿತ್ತು. ಈ ಮದುವೆಗೆ ಸುಮಾರು 200 ಕೋಟಿ ಖರ್ಚು ಮಾಡಿದ್ದಾರೆ ಎಂದು ಇಡಿ ಅಂದಾಜಿಸಿದೆ. ಇದರಲ್ಲಿ 140 ಕೋಟಿ ಹಣವನ್ನು ಹವಾಲ ರೂಪದಲ್ಲಿ ಮುಂಬೈನ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯೊಂದಕ್ಕೆ ನೀಡಲಾಗಿದೆಯಂತೆ. ಈ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯ ಮೂಲಕವೇ ಬಾಲಿವುಡ್ ನಟ-ನಟಿಯರು, ಗಾಯಕರಿಗೆ ಸಂಭಾವನೆಗಳನ್ನು ತಲುಪಿಸಲಾಗಿದೆ.

ಇದನ್ನೂ ಓದಿ:ಅನಿಮಲ್ ಸಿನಿಮಾದಲ್ಲಿ ರಣ್​ಬೀರ್ ಕಪೂರ್ ಹಲವು ಅವತಾರಗಳು

ಮದುವೆಯಲ್ಲಿ ಭಾಗಿಯಾಗಿದ್ದ ಸಿನಿಮಾ ನಟರು, ಮದುವೆಯಲ್ಲಿ ಮನೊರಂಜನಾ ಕಾರ್ಯಕ್ರಮಗಳನ್ನು ನೀಡಿದ ಜನಪ್ರಿಯ ಸಂಗೀತಗಾರರು, ಹಾಸ್ಯ ಕಲಾವಿದರು, ನಟ-ನಟಿಯರ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ಈ ಮದುವೆಯಲ್ಲಿ ಬಾಲಿವುಡ್ ನಟರಾದ ಟೈಗರ್ ಶ್ರಾಫ್, ಸನ್ನಿ ಲಿಯೋನಿ, ಕೃತಿ ಕರಬಂಧ, ನುಸ್ರತ್ ಬರೂಚಾ, ಭಾಗ್ಯಶ್ರೀ, ಕಮಿಡಿಯನ್​ಗಳಾದ ಕೃಷ್ಣ ಅಭಿಷೇಕ್, ಭಾರತಿ, ಗಾಯಕರಾದ ನೇಹಾ ಕಕ್ಕಡ್, ಅತಿಫ್ ಅಸ್ಲಂ, ರಾಹತ್ ಫತೇ ಅಲಿ ಖಾನ್, ವಿಶಾಲ್ ದದ್ಲಾನಿ, ಅಲಿ ಅಸ್ಗರ್ ಇನ್ನೂ ಕೆಲವರ ಮೇಲೆ ಇಡಿ ದಾಳಿ ನಡೆಸಿತ್ತು. ಇದೀಗ ಈ ಪ್ರಕರಣ ರಣ್​ಬೀರ್ ಕಪೂರ್​ಗೂ ಅಂಟಿಕೊಂಡಿದೆ. ಆದರೆ ರಣ್​ಬೀರ್ ಕಪೂರ್ ಈ ಮದುವೆಯಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗುತ್ತಿದೆ.

ದುಬೈನಲ್ಲಿ ನಡೆದ ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಹ ಮಾಲೀಕ ಸೌರಭ್ ಚಂದ್ರಕರ್ ಮದುವೆಗೆ ತೆರಳಲು ನಾಗಪುರದಿಂದ ಹಲವು ಪ್ರೈವೇಟ್ ಜೆಟ್​ಗಳನ್ನು ಬುಕ್ ಮಾಡಲಾಗಿತ್ತಂತೆ. ದುಬೈನಲ್ಲಿ ಹೋಟೆಲ್​ಗಳಿಗೆಂದೆ 40 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತಂತೆ. ಈ 40 ಕೋಟಿ ಹಣದ ಹೊರತಾಗಿ ಮದುವೆಗೆ ಖರ್ಚು ಮಾಡಿದ ನೂರಾರು ಕೋಟಿ ಹಣವನ್ನು ಹವಾಲಾ ಮೂಲಕವೇ ನೀಡಲಾಗಿತ್ತು ಎಂದು ಇಡಿಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸೌರಭ್ ಚಂದ್ರಕರ್ ಹಾಗೂ ರವಿ ಉಪ್ಪಾಲ್ ಅವರುಗಳು ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ದುಬೈನಲ್ಲಿದ್ದುಕೊಂಡು ನಡೆಸುತ್ತಿದ್ದರಂತೆ. ಹೊಸ ಬಳಕೆದಾರರನ್ನು ತಲುಪಲು, ಹಣ ವರ್ಗಾವಣೆ ಇನ್ನಿತರೆ ಕಾರ್ಯಗಳಿಗೆ ಲೇಯರ್ಡ್ ವೆಬ್ ಅನ್ನು ಬಳಸುತ್ತಿದ್ದರು. ಭಾರತದಲ್ಲಿಯೂ ಹಲವಾರು ಏಜೆಂಟ್​ಗಳನ್ನು ಇವರು ನೇಮಕ ಮಾಡಿಕೊಂಡಿದ್ದು 70:30ರ ಅನುಪಾತದಲ್ಲಿ ಲಾಭಾಂಶ ಹಂಚಿಕೆ ಮಾಡಿಕೊಳ್ಳುತ್ತಿದ್ದರು ಎಂದಿದೆ ಇಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ 417 ಕೋಟಿ ಮೌಲ್ಯದ ನಗದು, ಚಿನ್ನ, ಆಸ್ತಿಗಳನ್ನು ಇಡಿ ವಶಪಡಿಸಿಕೊಂಡಿದೆ. ಭೋಪಾಲ್, ಮುಂಬೈ, ಕೊಲ್ಕತ್ತ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ರೇಡ್​ಗಳನ್ನು ಇಡಿ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Wed, 4 October 23

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?