AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್​ಬೀರ್ ಕಪೂರ್​ಗೂ ಬಂತು ಇಡಿ ಸಮನ್ಸ್

Ranbir Kapoor: ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣ್​ಬೀರ್ ಕಪೂರ್ ಹೆಸರು ಕೇಳಿ ಬಂದಿದೆ. ರಣ್​ಬೀರ್​ಗೆ ಇಡಿ ಸಮನ್ಸ್ ಜಾರಿ ಮಾಡಿದ್ದು ಶೀಘ್ರವೇ ಉತ್ತರಿಸುವಂತೆ ಸೂಚಿಸಿದೆ.

ಬೆಟ್ಟಿಂಗ್ ಆ್ಯಪ್ ಪ್ರಕರಣ: ರಣ್​ಬೀರ್ ಕಪೂರ್​ಗೂ ಬಂತು ಇಡಿ ಸಮನ್ಸ್
ರಣ್​ಬೀರ್ ಕಪೂರ್
ಮಂಜುನಾಥ ಸಿ.
|

Updated on:Oct 04, 2023 | 4:37 PM

Share

ಕಳೆದ ತಿಂಗಳ ಮಧ್ಯದಲ್ಲಿ ಬಾಲಿವುಡ್​ನ (Bollywood) ಕೆಲವು ನಟ-ನಟಿಯರು, ಸಂಗೀತಗಾರರಿಗೆ ಜಾರಿ ನಿರ್ದೇಶನಾಲಯವು (ಇಡಿ) ಬೆಟ್ಟಿಂಗ್ ಆಪ್ ಒಂದರ ಪ್ರಕರಣ ಸಂಬಂಧ ದಾಳಿ ನಡೆಸಿ ನೊಟೀಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು. ಇದೀಗ ಅದೇ ಪ್ರಕರಣದಲ್ಲಿ ಬಾಲಿವುಡ್​ನ ಸ್ಟಾರ್ ನಟ ರಣ್​ಬೀರ್ ಕಪೂರ್​ಗೂ ಸಮನ್ಸ್​ ಜಾರಿ ಮಾಡಿದ್ದು, ಉತ್ತರ ನೀಡುವಂತೆ ಸೂಚಿಸಿದೆ.

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಂಬಂಧ ಇಡಿಯು ತನಿಖೆ ನಡೆಸುತ್ತಿದ್ದು, ಬೆಟ್ಟಿಂಗ್​ ಆಪ್​ನ ಸಹ ಮಾಲೀಕ ಸೌರಭ್ ಚಂದ್ರಕರ್ ವಿವಾಹದಲ್ಲಿ ಭಾಗಿಯಾಗಿದ್ದ ಬಾಲಿವುಡ್​ನ ನಟ-ನಟಿಯರು, ಸಂಗೀತಗಾರರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇದೇ ಪ್ರಕರಣದ ತನಿಖೆಯನ್ನು ಇಡಿ ಸಂಸ್ಥೆ ಚುರುಕುಗೊಳಿಸಿತ್ತು, ತನಿಖೆಯ ಭಾಗವಾಗಿ ನಟ ರಣ್​ಬೀರ್ ಕಪೂರ್​ಗೂ ನೊಟೀಸ್ ನೀಡಲಾಗಿದೆ. ಅಕ್ಟೋಬರ್ 6 ರ ಒಳಗಾಗಿ ಸಮನ್​ಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಹಲವು ಬಾಲಿವುಡ್ ನಟರ ಮೇಲೆ ಇಡಿ ದಾಳಿ: ದುಬೈ ಮದುವೆಯ ಲಿಂಕ್

ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಹ ಮಾಲೀಕ ಸೌರಭ್ ಚಂದ್ರಕರ್ ಮದುವೆ ಕೆಲವು ತಿಂಗಳ ಹಿಂದೆ ದುಬೈನಲ್ಲಿ ನಡೆದಿತ್ತು. ಈ ಮದುವೆಗೆ ಸುಮಾರು 200 ಕೋಟಿ ಖರ್ಚು ಮಾಡಿದ್ದಾರೆ ಎಂದು ಇಡಿ ಅಂದಾಜಿಸಿದೆ. ಇದರಲ್ಲಿ 140 ಕೋಟಿ ಹಣವನ್ನು ಹವಾಲ ರೂಪದಲ್ಲಿ ಮುಂಬೈನ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯೊಂದಕ್ಕೆ ನೀಡಲಾಗಿದೆಯಂತೆ. ಈ ಇವೆಂಟ್ ಮ್ಯಾನೇಜ್​ಮೆಂಟ್ ಸಂಸ್ಥೆಯ ಮೂಲಕವೇ ಬಾಲಿವುಡ್ ನಟ-ನಟಿಯರು, ಗಾಯಕರಿಗೆ ಸಂಭಾವನೆಗಳನ್ನು ತಲುಪಿಸಲಾಗಿದೆ.

ಇದನ್ನೂ ಓದಿ:ಅನಿಮಲ್ ಸಿನಿಮಾದಲ್ಲಿ ರಣ್​ಬೀರ್ ಕಪೂರ್ ಹಲವು ಅವತಾರಗಳು

ಮದುವೆಯಲ್ಲಿ ಭಾಗಿಯಾಗಿದ್ದ ಸಿನಿಮಾ ನಟರು, ಮದುವೆಯಲ್ಲಿ ಮನೊರಂಜನಾ ಕಾರ್ಯಕ್ರಮಗಳನ್ನು ನೀಡಿದ ಜನಪ್ರಿಯ ಸಂಗೀತಗಾರರು, ಹಾಸ್ಯ ಕಲಾವಿದರು, ನಟ-ನಟಿಯರ ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ. ಈ ಮದುವೆಯಲ್ಲಿ ಬಾಲಿವುಡ್ ನಟರಾದ ಟೈಗರ್ ಶ್ರಾಫ್, ಸನ್ನಿ ಲಿಯೋನಿ, ಕೃತಿ ಕರಬಂಧ, ನುಸ್ರತ್ ಬರೂಚಾ, ಭಾಗ್ಯಶ್ರೀ, ಕಮಿಡಿಯನ್​ಗಳಾದ ಕೃಷ್ಣ ಅಭಿಷೇಕ್, ಭಾರತಿ, ಗಾಯಕರಾದ ನೇಹಾ ಕಕ್ಕಡ್, ಅತಿಫ್ ಅಸ್ಲಂ, ರಾಹತ್ ಫತೇ ಅಲಿ ಖಾನ್, ವಿಶಾಲ್ ದದ್ಲಾನಿ, ಅಲಿ ಅಸ್ಗರ್ ಇನ್ನೂ ಕೆಲವರ ಮೇಲೆ ಇಡಿ ದಾಳಿ ನಡೆಸಿತ್ತು. ಇದೀಗ ಈ ಪ್ರಕರಣ ರಣ್​ಬೀರ್ ಕಪೂರ್​ಗೂ ಅಂಟಿಕೊಂಡಿದೆ. ಆದರೆ ರಣ್​ಬೀರ್ ಕಪೂರ್ ಈ ಮದುವೆಯಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗುತ್ತಿದೆ.

ದುಬೈನಲ್ಲಿ ನಡೆದ ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್​ ಸಹ ಮಾಲೀಕ ಸೌರಭ್ ಚಂದ್ರಕರ್ ಮದುವೆಗೆ ತೆರಳಲು ನಾಗಪುರದಿಂದ ಹಲವು ಪ್ರೈವೇಟ್ ಜೆಟ್​ಗಳನ್ನು ಬುಕ್ ಮಾಡಲಾಗಿತ್ತಂತೆ. ದುಬೈನಲ್ಲಿ ಹೋಟೆಲ್​ಗಳಿಗೆಂದೆ 40 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತಂತೆ. ಈ 40 ಕೋಟಿ ಹಣದ ಹೊರತಾಗಿ ಮದುವೆಗೆ ಖರ್ಚು ಮಾಡಿದ ನೂರಾರು ಕೋಟಿ ಹಣವನ್ನು ಹವಾಲಾ ಮೂಲಕವೇ ನೀಡಲಾಗಿತ್ತು ಎಂದು ಇಡಿಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಸೌರಭ್ ಚಂದ್ರಕರ್ ಹಾಗೂ ರವಿ ಉಪ್ಪಾಲ್ ಅವರುಗಳು ಮಹದೇವ್ ಆನ್​ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಅನ್ನು ದುಬೈನಲ್ಲಿದ್ದುಕೊಂಡು ನಡೆಸುತ್ತಿದ್ದರಂತೆ. ಹೊಸ ಬಳಕೆದಾರರನ್ನು ತಲುಪಲು, ಹಣ ವರ್ಗಾವಣೆ ಇನ್ನಿತರೆ ಕಾರ್ಯಗಳಿಗೆ ಲೇಯರ್ಡ್ ವೆಬ್ ಅನ್ನು ಬಳಸುತ್ತಿದ್ದರು. ಭಾರತದಲ್ಲಿಯೂ ಹಲವಾರು ಏಜೆಂಟ್​ಗಳನ್ನು ಇವರು ನೇಮಕ ಮಾಡಿಕೊಂಡಿದ್ದು 70:30ರ ಅನುಪಾತದಲ್ಲಿ ಲಾಭಾಂಶ ಹಂಚಿಕೆ ಮಾಡಿಕೊಳ್ಳುತ್ತಿದ್ದರು ಎಂದಿದೆ ಇಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ 417 ಕೋಟಿ ಮೌಲ್ಯದ ನಗದು, ಚಿನ್ನ, ಆಸ್ತಿಗಳನ್ನು ಇಡಿ ವಶಪಡಿಸಿಕೊಂಡಿದೆ. ಭೋಪಾಲ್, ಮುಂಬೈ, ಕೊಲ್ಕತ್ತ ಸೇರಿದಂತೆ ಇನ್ನೂ ಕೆಲವು ನಗರಗಳಲ್ಲಿ ರೇಡ್​ಗಳನ್ನು ಇಡಿ ಮಾಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Wed, 4 October 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್