AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಷಮಿಸಿ, ಅನಿಮಲ್ ರೀತಿಯ ಸಿನಿಮಾ ಮತ್ತೆ ಮಾಡಲ್ಲ’: ರಣಬೀರ್ ಕಪೂರ್​ ಹೀಗೆ ಹೇಳಿದ್ದೇಕೆ?

‘ಅನಿಮಲ್​’ ಸಿನಿಮಾದ ಕಥೆಯನ್ನು ಮೊದಲ ಬಾರಿಗೆ ಕೇಳಿದಾಗ ತಮಗೆ ಭಯ ಆಗಿತ್ತು ಎಂದು ನಟ ರಣಬೀರ್​ ಕಪೂರ್​ ಹೇಳಿದ್ದಾರೆ. ಈ ಸಿನಿಮಾಗೆ ಎದುರಾದ ಎಲ್ಲ ಬಗೆಯ ಟೀಕೆಗಳ ಬಗ್ಗೆ ಅವರು ಇಷ್ಟು ದಿನ ಸೈಲೆಂಟ್​ ಆಗಿದ್ದರು. ಈಗ ಅವರು ಈ ಬಗ್ಗೆ ಮೌನ ಮುರಿದಿದ್ದಾರೆ. ಸಿನಿಮಾ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಚಿತ್ರರಂಗದವರಿಗೆ ತಮ್ಮ ಉತ್ತರ ಏನಾಗಿತ್ತು ಎಂಬುದನ್ನು ರಣಬೀರ್ ಕಪೂರ್​ ತಿಳಿಸಿದ್ದಾರೆ.

‘ಕ್ಷಮಿಸಿ, ಅನಿಮಲ್ ರೀತಿಯ ಸಿನಿಮಾ ಮತ್ತೆ ಮಾಡಲ್ಲ’: ರಣಬೀರ್ ಕಪೂರ್​ ಹೀಗೆ ಹೇಳಿದ್ದೇಕೆ?
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jul 27, 2024 | 9:11 PM

Share

2023ರಲ್ಲಿ ತೆರೆಕಂಡು ಅತಿ ಹೆಚ್ಚು ಚರ್ಚೆಗೆ ಒಳಗಾದ ಸಿನಿಮಾ ‘ಅನಿಮಲ್​’. ಈ ಸಿನಿಮಾದ ಮೂಲಕ ರಣಬೀರ್​ ಕಪೂರ್​ ಅವರಿಗೆ ದೊಡ್ಡ ಗೆಲುವು ಸಿಕ್ಕಿತು ಎಂಬುದು ನಿಜ. ಅದರ ಜೊತೆಗೆ ಕೆಲವರಿಂದ ಕಟು ಟೀಕೆ ಕೂಡ ವ್ಯಕ್ತವಾಯಿತು. ಒಂದು ವರ್ಗದ ಜನರು ಈ ಸಿನಿಮಾವನ್ನು ಸಿಕ್ಕಾಪಟ್ಟೆ ತೆಗಳಿದರು. ಹಾಗಿದ್ದರೂ ಕೂಡ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ 900 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿತು. ತಮ್ಮ ಬಗ್ಗೆ ಮತ್ತು ಒಟ್ಟಾರೆ ಈ ಸಿನಿಮಾದ ಬಗ್ಗೆ ಕೇಳಿಬಂದ ವಿಮರ್ಶೆಗಳಿಗೆ ಇದೇ ಮೊದಲ ಬಾರಿಗೆ ರಣಬೀರ್​ ಕಪೂರ್​ ಅವರು ಮಾತನಾಡಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ರಣಬೀರ್​ ಕಪೂರ್​ ಅವರು ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಅನಿಮಲ್​’ ಸಿನಿಮಾ ನೋಡಿದ ಜನರು ಮೆಚ್ಚುಗೆ ಸೂಚಿಸಿದರೆ, ಚಿತ್ರರಂಗದ ಒಳಗಿನ ಕೆಲವರು ಅಸಮಾಧಾನ ವ್ಯಕ್ತಪಡಿಸಿದರು. ಅಂಥವರಿಗೆ ರಣಬೀರ್​ ಕಪೂರ್​ ಅವರು ತಮ್ಮದೇ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಆ ಬಗ್ಗೆ ಅವರು ಸಂದರ್ಶನದಲ್ಲಿ ವಿವರಿಸಿದ್ದಾರೆ.

‘ಚಿತ್ರರಂಗದ ಅನೇಕರು ಈ ಸಿನಿಮಾದಿಂದ ತಮಗೆ ನಿರಾಸೆ ಆಯಿತು ಅಂತ ಹೇಳಿದರು. ನಾನು ಅವರ ಬಳಿ ಕ್ಷಮೆ ಕೇಳಿದೆ. ಕ್ಷಮಿಸಿ, ಇನ್ಮುಂದೆ ಇಂಥ ಸಿನಿಮಾ ಮಾಡುವುದಿಲ್ಲ ಅಂತ ಹೇಳಿದೆ. ಹಾಗಂತ ನಾನು ಅವರ ಮಾತನ್ನು ನಿಜಕ್ಕೂ ಒಪ್ಪಿಕೊಂಡಿಲ್ಲ. ಯಾಕೆಂದರೆ, ನಾನು ಈಗ ಯಾರೊಂದಿಗೂ ವಾದ ಮಾಡಲು ಇಷ್ಟವಿಲ್ಲದ ಹಂತದಲ್ಲಿ ಇದ್ದೇನೆ. ಒಂದು ವೇಳೆ ನಿಮಗೆ ನನ್ನ ಕೆಲಸ ಇಷ್ಟ ಆಗಿಲ್ಲ ಎಂದರೆ ನಿಮ್ಮ ಬಳಿ ಕ್ಷಮೆ ಕೇಳುತ್ತೇನೆ. ಮುಂದಿನ ಬಾರಿ ಇನ್ನಷ್ಟು ಕಷ್ಟಪಟ್ಟು ಕೆಲಸ ಮಾಡುವೆ ಅಂತ ಹೇಳುತ್ತೇನೆ’ ಎಂದಿದ್ದಾರೆ ರಣಬೀರ್​ ಕಪೂರ್​.

ಇದನ್ನೂ ಓದಿ: ರಣಬೀರ್​ ಕಪೂರ್​ ಎದುರಲ್ಲೇ ಅಶ್ಲೀಲವಾಗಿ ಬೈಯ್ದ ಫೋಟೋಗ್ರಾಫರ್​; ವಿಡಿಯೋ ವೈರಲ್​

‘ಅನಿಮಲ್​’ ಸಿನಿಮಾಗೆ ಸಂದೀಪ್​ ರೆಡ್ಡಿ ವಂಗಾ ಅವರು ನಿರ್ದೇಶನ ಮಾಡಿದ್ದಾರೆ. ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಸಿದ್ದಾರೆ. ತೃಪ್ತಿ ದಿಮ್ರಿ ಅವರು ಬೋಲ್ಡ್​ ಪಾತ್ರ ಮಾಡಿ ಗಮನ ಸೆಳೆದಿದ್ದಾರೆ. ಬಾಲಿವುಡ್ ನಟ ಬಾಬಿ ಡಿಯೋಲ್​ ಅವರು ನೆಗೆಟಿವ್​ ಪಾತ್ರ ಮಾಡಿ ಹೊಸ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಈ ಸಿನಿಮಾಗೆ ಸೀಕ್ವೆಲ್​ ಕೂಡ ಬರಲಿದೆ. ಆ ಬಗ್ಗೆ ಜನರಿಗೆ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್