AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೀತಿಯಲ್ಲಿ ಕೆಲವೊಮ್ಮೆ ಸುಳ್ಳು ಹೇಳಿದರೆ ಒಳ್ಳೆಯದು’; ಪ್ರೀತಿ-ಬ್ರೇಕಪ್ ಬಗ್ಗೆ ಮಾತನಾಡಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಅವರು ಮೊದಲು ದೀಪಿಕಾ ಪಡುಕೋಣೆ ಜೊತೆ ಪ್ರೀತಿಯಲ್ಲಿದ್ದರು. ಆ ಬಳಿಕ ರಣಬೀರ್​ಗೆ ಕತ್ರಿನಾ ಕೈಫ್ ಭೇಟಿ ಆಯಿತು. ದೀಪಿಕಾನ ಬಿಟ್ಟು ಕತ್ರಿನಾ ಜೊತೆ ರಣಬೀರ್ ಸುತ್ತಾಡೋಕೆ ಶುರು ಮಾಡಿದರು.

‘ಪ್ರೀತಿಯಲ್ಲಿ ಕೆಲವೊಮ್ಮೆ ಸುಳ್ಳು ಹೇಳಿದರೆ ಒಳ್ಳೆಯದು’; ಪ್ರೀತಿ-ಬ್ರೇಕಪ್ ಬಗ್ಗೆ ಮಾತನಾಡಿದ ರಣಬೀರ್ ಕಪೂರ್
ದೀಪಿಕಾ-ರನಬೀರ್​-ಕತ್ರಿನಾ
ರಾಜೇಶ್ ದುಗ್ಗುಮನೆ
|

Updated on: Mar 02, 2023 | 7:58 AM

Share

ನಟ ರಣಬೀರ್ ಕಪೂರ್ (Ranbir Kapoor) ಅವರು ಆಲಿಯಾ ಭಟ್ ಅವರನ್ನು ಮದುವೆಯಾಗಿ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಅವರಿಗೆ ಹೆಣ್ಣುಮಗು ಜನಿಸಿದ್ದು, ರಹಾ ಎಂದು ನಾಮಕರಣ ಮಾಡಿದ್ದಾರೆ. ಆಲಿಯಾ ಭಟ್ ಅವರನ್ನು ಲವ್ ಮಾಡಿ ಮದುವೆ ಆಗುವುದಕ್ಕೂ ಮೊದಲು ರಣಬೀರ್ ಅವರು ಹಲವು ಬ್ರೇಕಪ್ ಮಾಡಿಕೊಂಡಿದ್ದರು. ಈ ಪೈಕಿ ಕತ್ರಿನಾ ಕೈಫ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ಜೊತೆಗಿನ ಪ್ರೇಮ್​ ಕಹಾನಿ ಹೆಚ್ಚು ಹೈಲೈಟ್ ಆಗಿತ್ತು. ಈಗ ರಣಬೀರ್ ಕಪೂರ್ ಅವರು ಸಂಬಂಧಗಳ ಬಗ್ಗೆ ಹಾಗೂ ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ. ಲವ್ ರಂಜನ್ ನಿರ್ದೇಶನದ ‘ತು ಜೂಟಿ ಮೈ ಮಕ್ಕಾರ್​’ ಚಿತ್ರದಲ್ಲಿ ಶ್ರದ್ಧಾ ಕಪೂರ್​ಗೆ ಜೊತೆಯಾಗಿ ರಣಬೀರ್ ನಟಿಸಿದ್ದು, ಈ ಚಿತ್ರದ ಪ್ರಚಾರದ ವೇಳೆ ಲವ್-ಬ್ರೇಕಪ್ ಬಗ್ಗೆ ಮಾತನಾಡಿದ್ದಾರೆ.

ರಣಬೀರ್ ಕಪೂರ್ ಅವರು ಮೊದಲು ದೀಪಿಕಾ ಪಡುಕೋಣೆ ಜೊತೆ ಪ್ರೀತಿಯಲ್ಲಿದ್ದರು. ಆ ಬಳಿಕ ರಣಬೀರ್​ಗೆ ಕತ್ರಿನಾ ಕೈಫ್ ಭೇಟಿ ಆಯಿತು. ದೀಪಿಕಾನ ಬಿಟ್ಟು ಕತ್ರಿನಾ ಜೊತೆ ರಣಬೀರ್ ಸುತ್ತಾಡೋಕೆ ಶುರು ಮಾಡಿದರು. ಕೊನೆಗೆ ಕತ್ರಿನಾ ಜೊತೆಗಿನ ಸಂಬಂಧವೂ ಕೊನೆ ಆಯಿತು. ಹೀಗೆ ಸಾಲು ಸಾಲು ಬ್ರೇಕಪ್​ಗಳನ್ನು ಅವರು ಮಾಡಿಕೊಂಡಿದ್ದಾರೆ. ‘ತು ಜೂಟಿ ಮೈ ಮಕ್ಕಾರ್​’ ಚಿತ್ರದಲ್ಲಿ ಕಥಾ ನಾಯಕ-ಕಥಾ ನಾಯಕಿ ಮಧ್ಯೆ ಸಾಕಷ್ಟು ಸುಳ್ಳು ಬಂದು ಹೋಗುತ್ತದೆ ಎಂಬುದು ಟ್ರೇಲರ್​ನಲ್ಲಿ ಗೊತ್ತಾಗಿದೆ. ಹೀಗಾಗಿ, ಈ ಸಿನಿಮಾ ಪ್ರಚಾರದ ವೇಳೆ ಅವರು ರಿಲೇಶನ್​ಶಿಪ್ ಬಗ್ಗೆ ಮಾತನಾಡಿದ್ದಾರೆ.

ಪ್ರತಿ ವ್ಯಕ್ತಿಗೆ ಒಂದಲ್ಲಾ ಒಂದು ಸಂದರ್ಭದಲ್ಲಿ ಬ್ರೇಕಪ್ ಫೀಲ್ ಆಗುತ್ತದೆ ಅನ್ನೋದು ರಣಬೀರ್ ಅಭಿಪ್ರಾಯ. ‘ನಮ್ಮ ಹೃದಯ ತುಂಬಾ ದುರ್ಬಲವಾದದ್ದು. ಕೆಲವರಿಗೆ ಬ್ರೇಕಪ್ ಬಗ್ಗೆ ಮಾತನಾಡಲು ಕಷ್ಟವಾಗುತ್ತದೆ. ಆಪ್ತವಾಗಿರುವ ಜನರೊಂದಿಗೂ ಕೆಲವರು ಏನನ್ನೂ ಹಂಚಿಕೊಳ್ಳುವುದಿಲ್ಲ. ನಿಮ್ಮ ಹೃದಯ ಹಲವು ಬಾರಿ ಛಿದ್ರ ಆಗಿರಬಹುದು. ಜನರಿಗೆ ಅದರ ಬಗ್ಗೆ ತಿಳಿದಿರುವುದಿಲ್ಲ’ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​
Image
Ranbir Kapoor: ಆ ಮೂರು ಸಿನಿಮಾಗಳು ನನ್ನ ಮೇಲೆ ಬಹಳ ಪ್ರಭಾವ ಬೀರಿದವು: ರಣಬೀರ್ ಕಪೂರ್
Image
Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

ಇದನ್ನೂ ಓದಿ: ಮೆಸ್ಸಿ ಫಿಫಾ ವಿಶ್ವಕಪ್ ಗೆದ್ದಿದ್ದನ್ನು ಸಂಭ್ರಮಿಸಿದ ರಣಬೀರ್ ಕಪೂರ್-ಆಲಿಯಾ ಭಟ್; ನಡೆಯಿತು ಭರ್ಜರಿ ಪಾರ್ಟಿ  

ಸಂಬಂಧಗಳಲ್ಲಿ ಸುಳ್ಳು ಹೇಳಬೇಕೋ ಅಥವಾ ಬೇಡವೋ ಎನ್ನುವ ಪ್ರಶ್ನೆ ಅನೇಕರದ್ದು. ಈ ಬಗ್ಗೆಯೂ ರಣಬೀರ್ ಮಾತನಾಡಿದ್ದಾರೆ.  ‘ಸಂಬಂಧಗಳ ವಿಚಾರದಲ್ಲಿ ಹೆಚ್ಚು ಎಚ್ಚರಿಕೆಯಿಂದ ವರ್ತಿಸಬೇಕು. ಕೇವಲ ಲವರ್ ವಿಚಾರದಲ್ಲಿ ಮಾತ್ರವಲ್ಲ ಪೋಷಕರು ಹಾಗೂ ಸ್ನೇಹಿತರ ಜೊತೆಗೂ ಆಗಿರಬಹುದು. ಕೆಲವೊಮ್ಮೆ ಸುಳ್ಳಿಗಿಂತ ಸತ್ಯ ಹೆಚ್ಚು ಹಾನಿ ಮಾಡುತ್ತದೆ. ಹೀಗಾಗಿ ಕೆಲವೊಮ್ಮೆ ಸುಳ್ಳು ಒಳ್ಳೆಯದು. ಅದರಿಂದ ಸಂಬಂಧಗಳು ಉಳಿಯುತ್ತವೆ’ ಎಂದು ರಣಬೀರ್ ಕಪೂರ್ ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ