AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

Ranbir Kapoor Viral Video: ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಜೊತೆ ರಣಬೀರ್​ ಕಪೂರ್​ ಅವರು ಅಹಂಕಾರದಿಂದ ವರ್ತಿಸಿದ್ದಾರೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ಎಸೆದಿದ್ದಾರೆ.

Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​
ವೈರಲ್ ವಿಡಿಯೋದಲ್ಲಿ ರಣಬೀರ್ ಕಪೂರ್
ಮದನ್​ ಕುಮಾರ್​
|

Updated on:Jan 27, 2023 | 5:45 PM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಾರೆ. ನೆಚ್ಚಿನ ನಟನ ಜೊತೆ ಒಂದೇ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಎಂಬುದು ಫ್ಯಾನ್ಸ್​ (Ranbir Kapoor Fans) ಬಯಕೆ. ಆದರೆ ಎಲ್ಲರ ಕೈಗೂ ರಣಬೀರ್​ ಕಪೂರ್​ ಸಿಗುವುದಿಲ್ಲ. ಅಪರೂಪಕ್ಕೆ ಸಿಕ್ಕರೆ ಆ ಚಾನ್ಸ್​ ಯಾರೂ ಬಿಡಲ್ಲ. ಆದರೆ ಈ ರೀತಿ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬರ ಜೊತೆ ರಣಬೀರ್​ ಕಪೂರ್​ ಅವರು ಕೆಟ್ಟದಾಗಿ ವರ್ತಿಸಿದ್ದಾರೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ಎಸೆದಿದ್ದಾರೆ. ಈ ವಿಡಿಯೋ (Ranbir Kapoor Viral Video) ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ವಿಡಿಯೋದಲ್ಲಿನ ಘಟನೆ ನಿಜವೋ ಅಥವಾ ಸುಳ್ಳೋ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ವೈರಲ್​ ವಿಡಿಯೋದಲ್ಲಿ ಏನಿದೆ?

ರಣಬೀರ್​ ಕಪೂರ್​ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬರು ಬರುತ್ತಾರೆ. ಸುತ್ತಲೂ ಜನ ಜಂಗುಳಿ ಇರುತ್ತದೆ. ಆ ಗಡಿಬಿಡಿಯಲ್ಲಿಯೂ ಅಭಿಮಾನಿಗೆ ರಣಬೀರ್​ ಕಪೂರ್​ ಸೆಲ್ಫಿ ನೀಡುತ್ತಾರೆ. ಆದರೆ ಫೋಟೋ ಇನ್ನೂ ಚೆನ್ನಾಗಿ ಬರಲಿ ಎಂಬ ಕಾರಣಕ್ಕೆ ಆ ಅಭಿಮಾನಿ ಮತ್ತೆ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಆಗ ರಣಬೀರ್​ ಕಪೂರ್​ಗೆ ಕೋಪ ಬರುತ್ತದೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ದೂರಕ್ಕೆ ಎಸೆಯುತ್ತಾರೆ.

ಇದನ್ನೂ ಓದಿ
Image
Alia Bhatt: ಅವಳಿ ಮಕ್ಕಳಿಗೆ ಜನ್ಮ ನೀಡ್ತಾರಾ ಆಲಿಯಾ? ಒಂದು ಸುಳ್ಳು, ಎರಡು ಸತ್ಯ ಹೇಳಿ ಗುಟ್ಟು ಬಿಟ್ಟುಕೊಟ್ಟ ರಣಬೀರ್​
Image
‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್​ ಕಪೂರ್
Image
10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ
Image
ಮದುವೆ ಆದ ಖುಷಿಗೆ ಹೆಂಡತಿಯನ್ನು ಎತ್ತಿಕೊಂಡು ಓಡಾಡಿದ​ ರಣಬೀರ್​ ಕಪೂರ್​: ವಿಡಿಯೋ ವೈರಲ್​

ಇದನ್ನೂ ಓದಿ: Ranbir Kapoor: ‘ಬ್ರಹ್ಮಾಸ್ತ್ರ ನೋಡಿ ಅಂತ ನಾನು ಎಲ್ಲರ ಮನೆಗೆ ಹೋಗಿ ಬೇಡಿಕೊಳ್ಳಬೇಕಾ?’: ಸಿಟ್ಟಾದ ರಣಬೀರ್​ ಕಪೂರ್​

ಈ ವಿಡಿಯೋ ವೈರಲ್​ ಆದ ಬಳಿಕ ನೆಟ್ಟಿಗರು ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಅಹಂಕಾರದಿಂದ ರಣಬೀರ್​ ಕಪೂರ್​ ಈ ರೀತಿ ಮಾಡಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. ಕಳೆದ ವರ್ಷ ರಿಲೀಸ್​ ಆದ ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ರಣಬೀರ್​ ಕಪೂರ್​ ಅವರಿಗೆ ಯಶಸ್ಸು ಸಿಕ್ಕಿತು. ಆ ಗೆಲುವಿನ ಬಳಿಕ ಅವರ ಈ ರೀತಿ ವರ್ತಿಸಲು ಆರಂಭಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇನ್ನೂ ಕೆಲವರಿಗೆ ಈ ವಿಡಿಯೋದ ಅಸಲಿಯತ್ತಿನ ಮೇಲೆ ಅನುಮಾನ ಮೂಡಿದೆ. ಇದು ಪ್ರಚಾರದ ಗಿಮಿಕ್​ ಎಂದು ಹಲವರು ಹೇಳುತ್ತಿದ್ದಾರೆ. ಯಾವುದೋ ಮೊಬೈಲ್​ ಫೋನ್​ ಕಂಪನಿಯ ಜಾಹೀರಾತಿನ ಶೂಟಿಂಗ್​ ಇರಬಹುದು ಎಂದು ಒಂದಷ್ಟು ಮಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಣಬೀರ್​ ಕಪೂರ್​ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಸೆಲೆಬ್ರಿಟಿಗಳು ತಾವು ಒಪ್ಪಂದ ಮಾಡಿಕೊಂಡಿರುವ ಬ್ರ್ಯಾಂಡ್​ಗಳ ಪ್ರಚಾರಕ್ಕಾಗಿ ಹಲವು ತಂತ್ರಗಳನ್ನು ಬಳಸುತ್ತಾರೆ. ಇತ್ತೀಚೆಗೆ ಇಂಥ ಪ್ರಯತ್ನಗಳು ಹೆಚ್ಚಾಗುತ್ತಿದೆ. ರಣಬೀರ್​ ಕಪೂರ್​ ಅವರ ಈ ವೈರಲ್ ವಿಡಿಯೋದ ಹಿಂದೆಯೂ ಯಾವುದೋ ಗಿಮಿಕ್​ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇನ್ನಷ್ಟೇ ಪಕ್ಕಾ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Fri, 27 January 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ