AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

Ranbir Kapoor Viral Video: ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯ ಜೊತೆ ರಣಬೀರ್​ ಕಪೂರ್​ ಅವರು ಅಹಂಕಾರದಿಂದ ವರ್ತಿಸಿದ್ದಾರೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ಎಸೆದಿದ್ದಾರೆ.

Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​
ವೈರಲ್ ವಿಡಿಯೋದಲ್ಲಿ ರಣಬೀರ್ ಕಪೂರ್
ಮದನ್​ ಕುಮಾರ್​
|

Updated on:Jan 27, 2023 | 5:45 PM

Share

ನಟ ರಣಬೀರ್​ ಕಪೂರ್​ (Ranbir Kapoor) ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲಿ ಬಂದಲ್ಲಿ ಜನರು ಮುತ್ತಿಕೊಳ್ಳುತ್ತಾರೆ. ನೆಚ್ಚಿನ ನಟನ ಜೊತೆ ಒಂದೇ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಎಂಬುದು ಫ್ಯಾನ್ಸ್​ (Ranbir Kapoor Fans) ಬಯಕೆ. ಆದರೆ ಎಲ್ಲರ ಕೈಗೂ ರಣಬೀರ್​ ಕಪೂರ್​ ಸಿಗುವುದಿಲ್ಲ. ಅಪರೂಪಕ್ಕೆ ಸಿಕ್ಕರೆ ಆ ಚಾನ್ಸ್​ ಯಾರೂ ಬಿಡಲ್ಲ. ಆದರೆ ಈ ರೀತಿ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬರ ಜೊತೆ ರಣಬೀರ್​ ಕಪೂರ್​ ಅವರು ಕೆಟ್ಟದಾಗಿ ವರ್ತಿಸಿದ್ದಾರೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ಎಸೆದಿದ್ದಾರೆ. ಈ ವಿಡಿಯೋ (Ranbir Kapoor Viral Video) ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿದೆ. ವಿಡಿಯೋದಲ್ಲಿನ ಘಟನೆ ನಿಜವೋ ಅಥವಾ ಸುಳ್ಳೋ ಎಂಬ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ವೈರಲ್​ ವಿಡಿಯೋದಲ್ಲಿ ಏನಿದೆ?

ರಣಬೀರ್​ ಕಪೂರ್​ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬರು ಬರುತ್ತಾರೆ. ಸುತ್ತಲೂ ಜನ ಜಂಗುಳಿ ಇರುತ್ತದೆ. ಆ ಗಡಿಬಿಡಿಯಲ್ಲಿಯೂ ಅಭಿಮಾನಿಗೆ ರಣಬೀರ್​ ಕಪೂರ್​ ಸೆಲ್ಫಿ ನೀಡುತ್ತಾರೆ. ಆದರೆ ಫೋಟೋ ಇನ್ನೂ ಚೆನ್ನಾಗಿ ಬರಲಿ ಎಂಬ ಕಾರಣಕ್ಕೆ ಆ ಅಭಿಮಾನಿ ಮತ್ತೆ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಆಗ ರಣಬೀರ್​ ಕಪೂರ್​ಗೆ ಕೋಪ ಬರುತ್ತದೆ. ಅಭಿಮಾನಿಯ ಮೊಬೈಲ್​ ಫೋನ್​ ಕಿತ್ತುಕೊಂಡು ದೂರಕ್ಕೆ ಎಸೆಯುತ್ತಾರೆ.

ಇದನ್ನೂ ಓದಿ
Image
Alia Bhatt: ಅವಳಿ ಮಕ್ಕಳಿಗೆ ಜನ್ಮ ನೀಡ್ತಾರಾ ಆಲಿಯಾ? ಒಂದು ಸುಳ್ಳು, ಎರಡು ಸತ್ಯ ಹೇಳಿ ಗುಟ್ಟು ಬಿಟ್ಟುಕೊಟ್ಟ ರಣಬೀರ್​
Image
‘ಹೆಣ್ಣು ಮಗು ಬೇಕು’: ಮನದ ಆಸೆ ತಿಳಿಸಿ, ಮಕ್ಕಳನ್ನು ನೋಡಿಕೊಳ್ಳುವುದು ಕಲಿಯುತ್ತಿರುವ ರಣಬೀರ್​ ಕಪೂರ್
Image
10ನೇ ಕ್ಲಾಸ್​ನಲ್ಲಿ ರಣಬೀರ್​ ಕಪೂರ್​ ಪಡೆದ ಅಂಕ ಎಷ್ಟು? ನಿರೀಕ್ಷಿಸಿದ್ದೇ ಬೇರೆ, ಆಗಿದ್ದೇ ಬೇರೆ
Image
ಮದುವೆ ಆದ ಖುಷಿಗೆ ಹೆಂಡತಿಯನ್ನು ಎತ್ತಿಕೊಂಡು ಓಡಾಡಿದ​ ರಣಬೀರ್​ ಕಪೂರ್​: ವಿಡಿಯೋ ವೈರಲ್​

ಇದನ್ನೂ ಓದಿ: Ranbir Kapoor: ‘ಬ್ರಹ್ಮಾಸ್ತ್ರ ನೋಡಿ ಅಂತ ನಾನು ಎಲ್ಲರ ಮನೆಗೆ ಹೋಗಿ ಬೇಡಿಕೊಳ್ಳಬೇಕಾ?’: ಸಿಟ್ಟಾದ ರಣಬೀರ್​ ಕಪೂರ್​

ಈ ವಿಡಿಯೋ ವೈರಲ್​ ಆದ ಬಳಿಕ ನೆಟ್ಟಿಗರು ಅನೇಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಅಹಂಕಾರದಿಂದ ರಣಬೀರ್​ ಕಪೂರ್​ ಈ ರೀತಿ ಮಾಡಿದ್ದಾರೆ ಎಂದು ಹಲವರು ಟೀಕಿಸಿದ್ದಾರೆ. ಕಳೆದ ವರ್ಷ ರಿಲೀಸ್​ ಆದ ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ರಣಬೀರ್​ ಕಪೂರ್​ ಅವರಿಗೆ ಯಶಸ್ಸು ಸಿಕ್ಕಿತು. ಆ ಗೆಲುವಿನ ಬಳಿಕ ಅವರ ಈ ರೀತಿ ವರ್ತಿಸಲು ಆರಂಭಿಸಿದ್ದಾರೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

ಇನ್ನೂ ಕೆಲವರಿಗೆ ಈ ವಿಡಿಯೋದ ಅಸಲಿಯತ್ತಿನ ಮೇಲೆ ಅನುಮಾನ ಮೂಡಿದೆ. ಇದು ಪ್ರಚಾರದ ಗಿಮಿಕ್​ ಎಂದು ಹಲವರು ಹೇಳುತ್ತಿದ್ದಾರೆ. ಯಾವುದೋ ಮೊಬೈಲ್​ ಫೋನ್​ ಕಂಪನಿಯ ಜಾಹೀರಾತಿನ ಶೂಟಿಂಗ್​ ಇರಬಹುದು ಎಂದು ಒಂದಷ್ಟು ಮಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರಣಬೀರ್​ ಕಪೂರ್​ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಸೆಲೆಬ್ರಿಟಿಗಳು ತಾವು ಒಪ್ಪಂದ ಮಾಡಿಕೊಂಡಿರುವ ಬ್ರ್ಯಾಂಡ್​ಗಳ ಪ್ರಚಾರಕ್ಕಾಗಿ ಹಲವು ತಂತ್ರಗಳನ್ನು ಬಳಸುತ್ತಾರೆ. ಇತ್ತೀಚೆಗೆ ಇಂಥ ಪ್ರಯತ್ನಗಳು ಹೆಚ್ಚಾಗುತ್ತಿದೆ. ರಣಬೀರ್​ ಕಪೂರ್​ ಅವರ ಈ ವೈರಲ್ ವಿಡಿಯೋದ ಹಿಂದೆಯೂ ಯಾವುದೋ ಗಿಮಿಕ್​ ಇದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇನ್ನಷ್ಟೇ ಪಕ್ಕಾ ಮಾಹಿತಿ ಹೊರಬೀಳಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:45 pm, Fri, 27 January 23

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!