AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಬಡ ಮಕ್ಕಳಿಗಾಗಿ ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ ಉಚಿತವಾಗಿ ನೀಡಲು ಮುಂದಾದ ನಟ ರಣಬೀರ್​ ಕಪೂರ್​

Adipurush Movie tickets: ರಣಬೀರ್​ ಕಪೂರ್​ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ. ಹಾಗಿದ್ದರೂ ಕೂಡ ಅವರು ಈ ಕೆಲಸ ಮಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.

Ranbir Kapoor: ಬಡ ಮಕ್ಕಳಿಗಾಗಿ ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ ಉಚಿತವಾಗಿ ನೀಡಲು ಮುಂದಾದ ನಟ ರಣಬೀರ್​ ಕಪೂರ್​
ಪ್ರಭಾಸ್​, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Jun 08, 2023 | 7:07 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಆದಿಪುರುಷ್​’ (Adipurush) ಚಿತ್ರದ ಹೆಸರು ಮುಂಚೂಣಿಯಲ್ಲಿದೆ. ಓಂ ರಾವತ್​ ನಿರ್ದೇಶನದ ಈ ಸಿನಿಮಾ ಜೂನ್​ 16ರಂದು ಬಿಡುಗಡೆ ಆಗಲಿದೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ರಿಲೀಸ್​ ಆಗುತ್ತಿದೆ ಎಂಬುದು ವಿಶೇಷ. ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್​’ ಸಿದ್ಧವಾಗಿದೆ. ಆದ್ದರಿಂದ ಜನರಿಗೆ ಮತ್ತು ಸೆಲೆಬ್ರಿಟಿಗಳಿಗೆ ಈ ಸಿನಿಮಾ ಮೇಲೆ ವಿಶೇಷವಾದ ಭಾವನೆ ಮೂಡಿದೆ. ಈ ಚಿತ್ರದಲ್ಲಿ ಪ್ರಭಾಸ್ (Prabhas)​ ಅವರು ರಾಮನಾಗಿ ನಟಿಸಿದ್ದು, ಸೀತೆ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ಮೊದಲ ದಿನ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಮೂಡಿದೆ. ಈ ನಡುವೆ ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್​ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್​ ಕಪೂರ್​ (Ranbir Kapoor) ಅವರು ಬರೋಬ್ಬರಿ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಟ್ರೇಡ್​ ವಿಶ್ಲೇಷಕ ತರಣ್​ ಆದರ್ಶ್​ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿಸುವ ಸಲುವಾಗಿ ಒಂದು ಪೋಸ್ಟರ್​ ಶೇರ್​ ಮಾಡಿಕೊಳ್ಳಲಾಗಿದೆ. ‘ಬಡ ಮಕ್ಕಳಿಗಾಗಿ ರಣಬೀರ್​ ಕಪೂರ್​ ಅವರು ಆದಿಪುರುಷ್​ ಸಿನಿಮಾದ 10 ಸಾವಿರ ಟಿಕೆಟ್​ಗಳನ್ನು ಬುಕ್​ ಮಾಡಲಿದ್ದಾರೆ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಅವರ ಈ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಣಬೀರ್​ ಕಪೂರ್​ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ. ಹಾಗಿದ್ದರೂ ಕೂಡ ಅವರು ಈ ಕೆಲಸ ಮಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.

ರಣಬೀರ್​ ಕಪೂರ್​ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್​’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್​ವಾಲ್ ಅವರು ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ. ‘ಆದಿಪುರುಷ್ ಜೀವಮಾನದಲ್ಲಿ ಒಮ್ಮೆ ನೋಡಲೇಬೇಕಾದ ಸಿನಿಮಾ. ಇದನ್ನು ಎಲ್ಲರೂ ಸಂಭ್ರಮಿಸಲೇಬೇಕು. ಭಗವಾನ್ ಶ್ರೀರಾಮನ ಮೇಲಿನ ಅಪಾರ ಭಕ್ತಿಯಿಂದ ತೆಲಂಗಾಣದಾದ್ಯಂತ ಇರುವ ಸರ್ಕಾರಿ ಶಾಲೆಗಳು ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ 10,000+ ಟಿಕೆಟ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇನೆ. ಟಿಕೆಟ್‌ಗಳನ್ನು ಪಡೆಯಲು ನಿಮ್ಮ ವಿವರಗಳೊಂದಿಗೆ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಿ. ಜೈ ಶ್ರೀರಾಮ್ ಘೋಷಣೆಗಳು ಎಲ್ಲಾ ದಿಕ್ಕುಗಳಲ್ಲಿಯೂ ಪ್ರತಿಧ್ವನಿಸಲಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Alia Bhatt: ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್​ ಕಪೂರ್​?

‘ಆದಿಪುರುಷ್​’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್​ ಮೀಸಲಿಡಲು ತೀರ್ಮಾನಿಸಲಾಗಿದೆ. ಚಿತ್ರತಂಡದವರು ಈ ರೀತಿ ಮಾಡಲು ಒಂದು ಸ್ಪೆಷಲ್​ ಕಾರಣ ಇದೆ. ಇದು ಅಪ್ಪಟ ನಂಬಿಕೆಗೆ ಸಂಬಂಧಿಸಿದ ವಿಚಾರ. ಎಲ್ಲಿ ರಾಮನ ಆರಾಧನೆ ಮಾಡಲಾಗುತ್ತೋ ಅಲ್ಲಿ ಆಂಜನೇಯ ಬರುತ್ತಾನೆ ಎಂಬ ನಂಬಿಕೆ ಇದೆ. ‘ಆದಿಪುರುಷ್​’ ಸಿನಿಮಾದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗುತ್ತದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ಹಾಗಾಗಿ ಈ ಸಿನಿಮಾ ಪ್ರದರ್ಶನ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಹಲವರಿಗೆ ಇದೆ. ಆ ಕಾರಣದಿಂದ ಒಂದು ಸೀಟನ್ನು ಪವನ ಪುತ್ರನಿಗಾಗಿ ಮೀಸಲಿಡಲಾಗುವುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?