Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾಕ್ಕಾಗಿ ರಣ್​ಬೀರ್​ ಕಪೂರ್​ಗೆ ವಿಶೇಷ ತರಬೇತಿ

Ranbir Kapoor: ರಣ್​ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದು, ಈ ಪಾತ್ರಕ್ಕಾಗಿ ರಣ್​ಬೀರ್ ಕಪೂರ್​ಗೆ ಹಲವು ತರಬೇತಿಗಳನ್ನು ಕೊಡಿಸಲಾಗುತ್ತಿದೆ.

‘ರಾಮಾಯಣ’ ಸಿನಿಮಾಕ್ಕಾಗಿ ರಣ್​ಬೀರ್​ ಕಪೂರ್​ಗೆ ವಿಶೇಷ ತರಬೇತಿ
Follow us
ಮಂಜುನಾಥ ಸಿ.
|

Updated on: Feb 07, 2024 | 11:04 PM

ಅನಿಮಲ್’ (Animal) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಣ್​ಬೀರ್ ಕಪೂರ್, ಬಾಲಿವುಡ್​ನ ಪ್ಲೇಬಾಯ್ ಇಮೇಜಿನಿಂದ ಹೊರಬಂದು ಮಾಸ್ ಹೀರೋ ಎನಿಸಿಕೊಂಡಿದ್ದಾರೆ. ‘ಅನಿಮಲ್’ ಹಿಟ್ ಆದ ಬೆನ್ನಲ್ಲೆ ಸಂಜಯ್ ಲೀಲಾ ಬನ್ಸಾಲಿಯವರ ‘ಲವ್ ಆಂಡ್ ವಾರ್’ ಸಿನಿಮಾದ ಅವಕಾಶ ರಣ್​ಬೀರ್​ಗೆ ಲಭಿಸಿದ್ದು ಆ ಸಿನಿಮಾದಲ್ಲಿಯೂ ನೆಗೆಟಿವ್ ಶೇಡ್​ನ ಪಾತ್ರದಲ್ಲಿಯೇ ರಣ್​ಬೀರ್ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೆ ವೈರುಧ್ಯವಾಗಿ ರಣ್​ಬೀರ್ ಕಪೂರ್​​ ಅವರು ‘ರಾಮಾಯಣ’ ಆಧರಿತ ಸಿನಿಮಾದಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಇದಕ್ಕಾಗಿ ವಿಶೇಷ ತಯಾರಿಯನ್ನು ರಣ್​ಬೀರ್ ಆರಂಭಿಸಿದ್ದಾರೆ.

ಬಾಲಿವುಡ್​ನ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ನಿತೇಶ್ ತಿವಾರಿ ರಾಮಾಯಣ ಕತೆ ಆಧರಿಸಿದ ಸಿನಿಮಾ ನಿರ್ದೇಶನ ಮಾಡಲಿದ್ದು, ಸಿನಿಮಾದಲ್ಲಿ ರಣ್​ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಕನ್ನಡದ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕಾಗಿ ನಟ-ನಟಿಯರಿಗೆ ವಿಶೇಷ ತರಬೇತಿಗಳನ್ನು ಕೊಡಿಸಲಾಗುತ್ತಿದೆ. ಅದರಲ್ಲಿಯೂ ಮುಖ್ಯ ಪಾತ್ರವಾದ ಶ್ರೀರಾಮನ ಪಾತ್ರಕ್ಕೆ ಹಲವು ರೀತಿಯ ತರಬೇತಿಗಳನ್ನು ಕೊಡಿಸಲಾಗುತ್ತಿದೆ.

ಕೆಲ ತಿಂಗಳ ಹಿಂದಷ್ಟೆ ಸಿನಿಮಾದ ಮುಖ್ಯ ನಟರನ್ನು ಅಮೆರಿಕದ ಜನಪ್ರಿಯ ಸ್ಟುಡಿಯೋಕ್ಕೆ ಕರೆದೊಯ್ದು ಲುಕ್ ಟೆಸ್ಟ್ ಅನ್ನು ಭಿನ್ನ ರೀತಿಯಲ್ಲಿ ಮಾಡಲಾಗಿದೆ. ಸಿನಿಮಾವನ್ನು ಚಿತ್ರೀಕರಣ ಮಾಡಲಾಗುತ್ತಿರುವ ತಂತ್ರಜ್ಞಾನದ ಪರಿಚಯವನ್ನು ಮಾಡಿಸಲಾಗಿದೆ ಎಂಬ ಸುದ್ದಿಗಳು ಹರಿದಾಡಿತ್ತು. ಇದೀಗ ಬಂದಿರುವ ಹೊಸ ಸುದ್ದಿಯೆಂದರೆ ಶ್ರೀರಾಮನ ಪಾತ್ರ ನಿರ್ವಹಿಸಲಿರುವ ರಣ್​ಬೀರ್ ಕಪೂರ್ ಅವರಿಗೆ ಭಿನ್ನವಾದ ತರಬೇತಿಯೊಂದನ್ನು ಕೊಡಿಸಲಾಗುತ್ತಿದೆ.

ಇದನ್ನೂ ಓದಿ:ತಮ್ಮ ಮೆಚ್ಚಿನ ತಮಿಳು ಸಿನಿಮಾಗಳ ಹೆಸರಿಸಿದ ರಣ್​ಬೀರ್ ಕಪೂರ್

ರಣ್​ಬೀರ್ ಕಪೂರ್ ಅವರಿಗೆ ಧ್ವನಿ ಮತ್ತು ಧ್ವನಿಯ ಏರಿಳಿತದ ತರಬೇತಿ ಕೊಡಿಸಲಾಗುತ್ತಿದೆ. ರಾಮನ ಪಾತ್ರದ ಡಬ್ಬಿಂಗ್ ಅನ್ನು ರಣ್​ಬೀರ್ ಅವರೇ ಮಾಡಬೇಕಿದ್ದು ಅವರ ಧ್ವನಿಯಲ್ಲಿರುವ ಕೆಲವು ಋಣಾತ್ಮಕ ಅಂಶಗಳನ್ನು ತಿದ್ದುವ ಕಾರಣದಿಂದ ಈ ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ಧ್ವನಿಯ ಏರಿಳಿತದ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆ. ರಾಮನ ಪಾತ್ರದಲ್ಲಿ ಸಂಭಾಷಣೆ ಹೇಳುವ ಕ್ರಮ ಸಹ ಭಿನ್ನವಾಗಿದ್ದು ಅದಕ್ಕಾಗಿ ವಿಶೇಷ ತರಬೇತಿಯನ್ನು ರಣ್​ಬೀರ್ ಪಡೆಯಲೇ ಬೇಕಿದೆ. ರಾವಣ ಪಾತ್ರಧಾರಿ ನಟ ಯಶ್​ಗೂ ಇದೇ ತರಬೇತಿ ನೀಡುವ ಸಾಧ್ಯತೆ ಇದೆ.

ಸಿನಿಮಾದಲ್ಲಿ ನಟಿ ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಇದೀಗ ಹೊರಬಿದ್ದಿರುವ ಸುದ್ದಿಯ ಪ್ರಕಾರ, ಸೀತೆಯ ಪಾತ್ರದಲ್ಲಿ ಜಾನ್ಹವಿ ಕಪೂರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾ ಸಹ ರಾಮಾಯಣ ಕತೆ ಆಧರಿತವಾಗಿತ್ತು, ಕಳೆದ ವರ್ಷ ಬಿಡುಗಡೆ ಆದ ಈ ಸಿನಿಮಾ ಫ್ಲಾಪ್ ಆಯ್ತು. ಇದೀಗ ಮತ್ತೊಂದು ರಾಮಾಯಣ ಆಧರಿತ ಸಿನಿಮಾ ಸಿದ್ಧವಾಗುತ್ತಿದೆ. ಸಿನಿಮಾದ ಅಧಿಕೃತ ಘೋಷಣೆ ಇನ್ನಷ್ಟೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ