AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾಕ್ಕಾಗಿ ರಣ್​ಬೀರ್​ ಕಪೂರ್​ಗೆ ವಿಶೇಷ ತರಬೇತಿ

Ranbir Kapoor: ರಣ್​ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದು, ಈ ಪಾತ್ರಕ್ಕಾಗಿ ರಣ್​ಬೀರ್ ಕಪೂರ್​ಗೆ ಹಲವು ತರಬೇತಿಗಳನ್ನು ಕೊಡಿಸಲಾಗುತ್ತಿದೆ.

‘ರಾಮಾಯಣ’ ಸಿನಿಮಾಕ್ಕಾಗಿ ರಣ್​ಬೀರ್​ ಕಪೂರ್​ಗೆ ವಿಶೇಷ ತರಬೇತಿ
ಮಂಜುನಾಥ ಸಿ.
|

Updated on: Feb 07, 2024 | 11:04 PM

Share

ಅನಿಮಲ್’ (Animal) ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ರಣ್​ಬೀರ್ ಕಪೂರ್, ಬಾಲಿವುಡ್​ನ ಪ್ಲೇಬಾಯ್ ಇಮೇಜಿನಿಂದ ಹೊರಬಂದು ಮಾಸ್ ಹೀರೋ ಎನಿಸಿಕೊಂಡಿದ್ದಾರೆ. ‘ಅನಿಮಲ್’ ಹಿಟ್ ಆದ ಬೆನ್ನಲ್ಲೆ ಸಂಜಯ್ ಲೀಲಾ ಬನ್ಸಾಲಿಯವರ ‘ಲವ್ ಆಂಡ್ ವಾರ್’ ಸಿನಿಮಾದ ಅವಕಾಶ ರಣ್​ಬೀರ್​ಗೆ ಲಭಿಸಿದ್ದು ಆ ಸಿನಿಮಾದಲ್ಲಿಯೂ ನೆಗೆಟಿವ್ ಶೇಡ್​ನ ಪಾತ್ರದಲ್ಲಿಯೇ ರಣ್​ಬೀರ್ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೆ ವೈರುಧ್ಯವಾಗಿ ರಣ್​ಬೀರ್ ಕಪೂರ್​​ ಅವರು ‘ರಾಮಾಯಣ’ ಆಧರಿತ ಸಿನಿಮಾದಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಇದಕ್ಕಾಗಿ ವಿಶೇಷ ತಯಾರಿಯನ್ನು ರಣ್​ಬೀರ್ ಆರಂಭಿಸಿದ್ದಾರೆ.

ಬಾಲಿವುಡ್​ನ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ನಿತೇಶ್ ತಿವಾರಿ ರಾಮಾಯಣ ಕತೆ ಆಧರಿಸಿದ ಸಿನಿಮಾ ನಿರ್ದೇಶನ ಮಾಡಲಿದ್ದು, ಸಿನಿಮಾದಲ್ಲಿ ರಣ್​ಬೀರ್ ಕಪೂರ್ ಶ್ರೀರಾಮನ ಪಾತ್ರದಲ್ಲಿ ನಟಿಸಲಿದ್ದಾರೆ. ಕನ್ನಡದ ನಟ ಯಶ್ ರಾವಣನ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾಕ್ಕಾಗಿ ನಟ-ನಟಿಯರಿಗೆ ವಿಶೇಷ ತರಬೇತಿಗಳನ್ನು ಕೊಡಿಸಲಾಗುತ್ತಿದೆ. ಅದರಲ್ಲಿಯೂ ಮುಖ್ಯ ಪಾತ್ರವಾದ ಶ್ರೀರಾಮನ ಪಾತ್ರಕ್ಕೆ ಹಲವು ರೀತಿಯ ತರಬೇತಿಗಳನ್ನು ಕೊಡಿಸಲಾಗುತ್ತಿದೆ.

ಕೆಲ ತಿಂಗಳ ಹಿಂದಷ್ಟೆ ಸಿನಿಮಾದ ಮುಖ್ಯ ನಟರನ್ನು ಅಮೆರಿಕದ ಜನಪ್ರಿಯ ಸ್ಟುಡಿಯೋಕ್ಕೆ ಕರೆದೊಯ್ದು ಲುಕ್ ಟೆಸ್ಟ್ ಅನ್ನು ಭಿನ್ನ ರೀತಿಯಲ್ಲಿ ಮಾಡಲಾಗಿದೆ. ಸಿನಿಮಾವನ್ನು ಚಿತ್ರೀಕರಣ ಮಾಡಲಾಗುತ್ತಿರುವ ತಂತ್ರಜ್ಞಾನದ ಪರಿಚಯವನ್ನು ಮಾಡಿಸಲಾಗಿದೆ ಎಂಬ ಸುದ್ದಿಗಳು ಹರಿದಾಡಿತ್ತು. ಇದೀಗ ಬಂದಿರುವ ಹೊಸ ಸುದ್ದಿಯೆಂದರೆ ಶ್ರೀರಾಮನ ಪಾತ್ರ ನಿರ್ವಹಿಸಲಿರುವ ರಣ್​ಬೀರ್ ಕಪೂರ್ ಅವರಿಗೆ ಭಿನ್ನವಾದ ತರಬೇತಿಯೊಂದನ್ನು ಕೊಡಿಸಲಾಗುತ್ತಿದೆ.

ಇದನ್ನೂ ಓದಿ:ತಮ್ಮ ಮೆಚ್ಚಿನ ತಮಿಳು ಸಿನಿಮಾಗಳ ಹೆಸರಿಸಿದ ರಣ್​ಬೀರ್ ಕಪೂರ್

ರಣ್​ಬೀರ್ ಕಪೂರ್ ಅವರಿಗೆ ಧ್ವನಿ ಮತ್ತು ಧ್ವನಿಯ ಏರಿಳಿತದ ತರಬೇತಿ ಕೊಡಿಸಲಾಗುತ್ತಿದೆ. ರಾಮನ ಪಾತ್ರದ ಡಬ್ಬಿಂಗ್ ಅನ್ನು ರಣ್​ಬೀರ್ ಅವರೇ ಮಾಡಬೇಕಿದ್ದು ಅವರ ಧ್ವನಿಯಲ್ಲಿರುವ ಕೆಲವು ಋಣಾತ್ಮಕ ಅಂಶಗಳನ್ನು ತಿದ್ದುವ ಕಾರಣದಿಂದ ಈ ತರಬೇತಿ ಕೊಡಿಸಲಾಗುತ್ತಿದೆ. ಜೊತೆಗೆ ಧ್ವನಿಯ ಏರಿಳಿತದ ತರಬೇತಿಯನ್ನು ಸಹ ಕೊಡಿಸಲಾಗುತ್ತಿದೆ. ರಾಮನ ಪಾತ್ರದಲ್ಲಿ ಸಂಭಾಷಣೆ ಹೇಳುವ ಕ್ರಮ ಸಹ ಭಿನ್ನವಾಗಿದ್ದು ಅದಕ್ಕಾಗಿ ವಿಶೇಷ ತರಬೇತಿಯನ್ನು ರಣ್​ಬೀರ್ ಪಡೆಯಲೇ ಬೇಕಿದೆ. ರಾವಣ ಪಾತ್ರಧಾರಿ ನಟ ಯಶ್​ಗೂ ಇದೇ ತರಬೇತಿ ನೀಡುವ ಸಾಧ್ಯತೆ ಇದೆ.

ಸಿನಿಮಾದಲ್ಲಿ ನಟಿ ಸಾಯಿ ಪಲ್ಲವಿ ಸೀತಾಮಾತೆಯ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಇದೀಗ ಹೊರಬಿದ್ದಿರುವ ಸುದ್ದಿಯ ಪ್ರಕಾರ, ಸೀತೆಯ ಪಾತ್ರದಲ್ಲಿ ಜಾನ್ಹವಿ ಕಪೂರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾ ಸಹ ರಾಮಾಯಣ ಕತೆ ಆಧರಿತವಾಗಿತ್ತು, ಕಳೆದ ವರ್ಷ ಬಿಡುಗಡೆ ಆದ ಈ ಸಿನಿಮಾ ಫ್ಲಾಪ್ ಆಯ್ತು. ಇದೀಗ ಮತ್ತೊಂದು ರಾಮಾಯಣ ಆಧರಿತ ಸಿನಿಮಾ ಸಿದ್ಧವಾಗುತ್ತಿದೆ. ಸಿನಿಮಾದ ಅಧಿಕೃತ ಘೋಷಣೆ ಇನ್ನಷ್ಟೆ ಆಗಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್