AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್ ನಟ ಬೇಡವೆಂದಿದ್ದ ‘ಅನಿಮಲ್’ ಸಿನಿಮಾ, ರಣ್​ಬೀರ್​ಗೆ ದೊರಕಿದ್ದು ಹೇಗೆ?

Animal: ರಣ್​ಬೀರ್ ಕಪೂರ್ ನಟನೆಯ 'ಅನಿಮಲ್' ಸಿನಿಮಾದ ಟೀಸರ್ ಬಿಡುಗಡೆ ಆಗಿದೆ. ಸಿನಿಮಾ ಪಕ್ಕಾ ಹಿಟ್ ಆಗಲಿದೆ ಎಂದು ಹಲವರು ಭವಿಷ್ಯ ನುಡಿದಿದ್ದಾರೆ. ಆದರೆ ಈ ಸಿನಿಮಾವನ್ನು ಸ್ಟಾರ್ ನಟರೊಬ್ಬರು ರಿಜೆಕ್ಟ್ ಮಾಡಿದ್ದರು. ಹಾಗಾಗಿ ರಣ್​ಬೀರ್ ಕಪೂರ್ 'ಅನಿಮಲ್' ಸಿನಿಮಾದಲ್ಲಿ ನಟಿಸುವಂತಾಯ್ತು.

ಸ್ಟಾರ್ ನಟ ಬೇಡವೆಂದಿದ್ದ 'ಅನಿಮಲ್' ಸಿನಿಮಾ, ರಣ್​ಬೀರ್​ಗೆ ದೊರಕಿದ್ದು ಹೇಗೆ?
ಅನಿಮಲ್
ಮಂಜುನಾಥ ಸಿ.
|

Updated on: Sep 28, 2023 | 9:50 PM

Share

ರಣ್​ಬೀರ್ ಕಪೂರ್ (Ranbir Kapoor) ಹುಟ್ಟುಹಬ್ಬದ ವಿಶೇಷವಾಗಿ ಅವರ ನಟನೆಯ ‘ಅನಿಮಲ್’ ಸಿನಿಮಾದ ಟೀಸರ್ ಇಂದು (ಸೆಪ್ಟೆಂಬರ್ 28) ಬಿಡುಗಡೆ ಮಾಡಲಾಗಿದೆ. ರಣ್​ಬೀರ್ ಕಪೂರ್ ಹಿಂದೆಂದೂ ಕಾಣದ ಸಖತ್ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಬಹಳ ಭಿನ್ನವಾದ ಹಾಗೂ ಅಷ್ಟೆ ಮಾಸ್ ಎಲಿಮೆಂಟ್​ಗಳು ಇರುವ ಕತೆ ಇದಾಗಿರಲಿದೆ ಎಂಬುದು ಪ್ರೋಮೋದಿಂದ ತಿಳಿದು ಬರುತ್ತಿದೆ. ಪ್ರೋಮೋ ನೋಡಿದ ಹಲವರು ಸೂಪರ್ ಹಿಟ್ ಸಿನಿಮಾ ಆಗುವ ಎಲ್ಲ ಲಕ್ಷಣ ಸಿನಿಮಾಕ್ಕೆ ಇದೆಯೆಂದು ಭವಿಷ್ಯ ನುಡಿದಿದ್ದಾರೆ. ಆದರೆ ‘ಅನಿಮಲ್’ ಸಿನಿಮಾಕ್ಕೆ ನಾಯಕ ಆಗಬೇಕಿದ್ದಿದ್ದು ಬೇರೊಬ್ಬ ಸೂಪರ್ ಸ್ಟಾರ್.

‘ಅರ್ಜುನ್ ರೆಡ್ಡಿ’ ಸಿನಿಮಾ ನಿರ್ದೇಶನ ಮಾಡಿ ಜನಪ್ರಿಯತೆ ಗಳಿಸಿರುವ ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಸಿನಿಮಾ ನಿರ್ದೇಶನ ಮಾಡಿದ್ದು, ರಣ್​ಬೀರ್ ಕಪೂರ್​ಗೆ ‘ಅನಿಮಲ್’ ಸಿನಿಮಾದ ಕತೆ ಹೇಳುವ ಮೊದಲು ಇದೇ ಕತೆಯನ್ನು ತೆಲುಗಿನ ಸ್ಟಾರ್ ನಟ ರಣ್​ಬೀರ್ ಕಪೂರ್​ಗೆ ಹೇಳಿದ್ದರಂತೆ. ಆದರೆ ಕತೆ ಕೇಳಿದ ಮಹೇಶ್​ ಬಾಬು ತಾವು ಸಿನಿಮಾದಲ್ಲಿ ನಟಿಸಲ್ಲ ಎಂದಿದ್ದರಂತೆ. ಕೊನೆಗೆ ಸಂದೀಪ್ ರೆಡ್ಡಿ ವಂಗಾ ರಣ್​ಬೀರ್​ಗೆ ಕತೆ ಹೇಳಿದ ಕೂಡಲೇ ರಣ್​ಬೀರ್ ಒಪ್ಪಿಗೆ ಸೂಚಿಸಿದ್ದಾರೆ.

‘ಅರ್ಜುನ್ ರೆಡ್ಡಿ’ ಸಿನಿಮಾದ ಬಳಿಕ ಅದೇ ಸಿನಿಮಾದ ಹಿಂದಿ ರೀಮೇಕ್ ಆದ ‘ಕಬೀರ್ ಸಿಂಗ್’ ಸಿನಿಮಾವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದರು. ಆಗ ಅವರಿಗೆ ದೊರೆತ ಕೆಲವು ಬಾಲಿವುಡ್ ತಂತ್ರಜ್ಞರಿಂದ ರಣ್​ಬೀರ್ ಕಪೂರ್ ಅವರನ್ನು ಸಂಪರ್ಕ ಮಾಡಿ ಕತೆ ಹೇಳಿದ್ದರಂತೆ ಸಂದೀಪ್. ಪ್ಲೇಬಾಯ್, ಲವರ್ ಬಾಯ್ ಪಾತ್ರಗಳಿಂದ ಬೇಸತ್ತಿದ್ದ ರಣ್​ಬೀರ್ ಕಪೂರ್ ಮಾಸ್ ಜೊತೆಗೆ ನಟನೆಗೂ ಸ್ಕೋಪ್ ಇರುವ ‘ಅನಿಮಲ್’ ಸಿನಿಮಾದ ಪಾತ್ರ ಬಹುವಾಗಿ ಮೆಚ್ಚುಗೆಯಾಗಿ ತಟ್ಟನೆ ಸಿನಿಮಾಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್

‘ಅನಿಮಲ್’ ಸಿನಿಮಾದಲ್ಲಿ ಬೇರೆ-ಬೇರೆ ಷೇಡ್​ಗಳಲ್ಲಿ ರಣ್​ಬೀರ್ ಕಾಣಿಸಿಕೊಂಡಿದ್ದಾರೆ. ಅಪ್ಪನಿಂದ ಬೈಸಿಕೊಳ್ಳುವ-ಹೊಡೆಸಿಕೊಳ್ಳುವ ಮಗ, ಪ್ರೀತಿಸುವ ಹುಡುಗ, ಗ್ಯಾಂಗ್​ಸ್ಟರ್, ರಕ್ತಪೀಪಾಸು ಹೀಗೆ ಹಲವು ರಣ್​ಬೀರ್​ಗೆ ಹಲವು ಶೇಡ್​ಗಳು ‘ಅನಿಮಲ್’ ಸಿನಿಮಾದಲ್ಲಿವೆ. ಸಿನಿಮಾದಲ್ಲಿ ರಣ್​ಬೀರ್ ತಂದೆಯ ಪಾತ್ರದಲ್ಲಿ ಅನಿಲ್ ಕಪೂರ್ ನಟಿಸಿದ್ದಾರೆ. ಅವರ ಪಾತ್ರವೂ ಸಹ ಸಖತ್ ಡಿಫರೆಂಟ್ ಹಾಗೂ ಮಾಸ್ಸಿ ಆಗಿದೆ.

‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಸಿನಿಮಾದಲ್ಲಿ ಅವರ ಪಾತ್ರದ ಹೆಸರು ‘ಗೀತಾಂಜಲಿ’. ಬಾಲಿವುಡ್ ನಟ ಬಾಬಿ ಡಿಯೋಲ್ ಸಹ ‘ಅನಿಮಲ್’ ಸಿನಿಮಾದಲ್ಲಿದ್ದು, ವಿಲನ್ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ‘ಅನಿಮಲ್’ ಸಿನಿಮಾ ಡಿಸೆಂಬರ್ 1 ರಂದು ತೆರೆಗೆ ಬರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?