AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranbir Kapoor: ಮಗಳ ಮೇಲಿನ ಪ್ರೀತಿಗೆ ಸಿನಿಮಾ ಕೆಲಸಗಳಿಂದ ದೂರ ಇರಲು ನಿರ್ಧರಿಸಿದ ರಣಬೀರ್​ ಕಪೂರ್​

Animal Movie | Ranbir Kapoor Daughter: ಆಗಸ್ಟ್​ ತಿಂಗಳಲ್ಲಿ ‘ಅನಿಮಲ್​’ ಸಿನಿಮಾ ರಿಲೀಸ್​ ಆಗಲಿದೆ. ಆ ಬಳಿಕ ರಣಬೀರ್ ಕಪೂರ್​ ಅವರು ಮಗಳಿಗಾಗಿ ಫುಲ್​ ಬಿಡುವು ಮಾಡಿಕೊಳ್ಳಲಿದ್ದಾರೆ.

Ranbir Kapoor: ಮಗಳ ಮೇಲಿನ ಪ್ರೀತಿಗೆ ಸಿನಿಮಾ ಕೆಲಸಗಳಿಂದ ದೂರ ಇರಲು ನಿರ್ಧರಿಸಿದ ರಣಬೀರ್​ ಕಪೂರ್​
ರಣಬೀರ್ ಕಪೂರ್
Follow us
ಮದನ್​ ಕುಮಾರ್​
|

Updated on: Mar 09, 2023 | 8:00 AM

ಬಾಲಿವುಡ್​ ನಟ ರಣಬೀರ್​ ಕಪೂರ್ (Ranbir Kapoor)​ ಅವರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ. ಮದುವೆ ನಂತರ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​ ಆಗಿದ್ದಾರೆ. ಮಗಳು ಜನಿಸಿದ ಮೇಲಂತೂ ಅವರು ಕುಟುಂಬಕ್ಕಾಗಿ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. 2022ರ ಏಪ್ರಿಲ್​ 14ರಂದು ಆಲಿಯಾ ಭಟ್​ (Alia Bhatt) ಜೊತೆ ರಣಬೀರ್​ ಕಪೂರ್​ ಮದುವೆ ನೆರವೇರಿತು. ಅದೇ ವರ್ಷ ನವೆಂಬರ್​ನಲ್ಲಿ ಅವರಿಗೆ ಹೆಣ್ಣು ಮಗು (Ranbir Kapoor Daughter) ಜನಿಸಿತು. ಮಗಳಿಗೆ ರಾಹಾ ಎಂದು ಹೆಸರು ಇಟ್ಟಿದ್ದಾರೆ. ಈವರೆಗೂ ಮಗಳ ಫೋಟೋವನ್ನು ಈ ದಂಪತಿ ರಿವೀಲ್​ ಮಾಡಿಲ್ಲ. ಮುದ್ದಿನ ಪುತ್ರಿಯ ಜೊತೆಗೆ ಹೆಚ್ಚು ಕಾಲ ಕಳೆಯಬೇಕು ಎಂಬ ಆಸೆ ರಣಬೀರ್​ ಕಪೂರ್​ ಅವರಿಗೆ ಇದೆ. ಹಾಗಾಗಿ ಅವರು ಹೆಚ್ಚಿನ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. ‘ಅನಿಮಲ್​’ ಚಿತ್ರ ತೆರೆಕಂಡ ಬಳಿಕ ಅವರು ನಟನೆಯಿಂದ ಬ್ರೇಕ್​ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ರಣಬೀರ್​ ಕಪೂರ್​ ಅವರಿಗೆ ಸಖತ್​ ಬೇಡಿಕೆ ಇದೆ. ಹಲವು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಆದರೆ ಎಲ್ಲವನ್ನೂ ಒಪ್ಪಿಕೊಳ್ಳುವ ಧಾವಂತ ಅವರಿಗೆ ಇಲ್ಲ. ಶ್ರದ್ಧಾ ಕಪೂರ್​ ಜೊತೆ ಅವರು ನಟಿಸಿರುವ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ ಮಾರ್ಚ್​ 8ರಂದು ರಿಲೀಸ್​ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಆಗಸ್ಟ್​ ತಿಂಗಳಲ್ಲಿ ‘ಅನಿಮಲ್​’ ಸಿನಿಮಾ ರಿಲೀಸ್​ ಆಗಲಿದೆ. ಆ ಬಳಿಕ ರಣಬೀರ್ ಕಪೂರ್​ ಫುಲ್​ ಬಿಡುವು ಮಾಡಿಕೊಳ್ಳಲಿದ್ದಾರೆ.

ಇದನ್ನೂ ಓದಿ: Ranbir Kapoor: ಸೌರವ್​ ಗಂಗೂಲಿ, ಕಿಶೋರ್​ ಕುಮಾರ್​ ಬಯೋಪಿಕ್​ ಬಗ್ಗೆ ಬಾಯ್ಬಿಟ್ಟ ನಟ ರಣಬೀರ್​ ಕಪೂರ್​

ಇದನ್ನೂ ಓದಿ
Image
Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
Image
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ರಣಬೀರ್​ ಕಪೂರ್​ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾನು ಯಾವುದೇ ಹೊಸ ಸಿನಿಮಾಗೆ ಸಹಿ ಮಾಡಿಲ್ಲ. ಮುಂಬರುವ ದಿನಗಳಲ್ಲಿ ಹೊಸ ಕಥೆ ಕೇಳುತ್ತೇನೆ. ಆದರೆ ಸಿನಿಮಾ ಒಪ್ಪಿಕೊಳ್ಳುವಲ್ಲಿ ನನಗೆ ಅವಸರ ಇಲ್ಲ. ಮನೆಯಲ್ಲಿ ಮಗಳು ಇದ್ದಾಳೆ. ಆಕೆಯ ಜೊತೆ ಒಂದು ವರ್ಷ ಸುಮ್ಮನೆ ಕಾಲ ಕಳೆದರೂ ನನಗೆ ಖುಷಿ ಎನಿಸುತ್ತದೆ. ‘ಅನಿಮಲ್​’ ಮತ್ತು ‘ಬ್ರಹ್ಮಾಸ್ತ್ರ 2’ ಹೊರತಾಗಿ ನನ್ನ ಕೈಯಲ್ಲಿ ಬೇರೆ ಯಾವುದೇ ಸಿನಿಮಾಗಳು ಇಲ್ಲ’ ಎಂದು ರಣಬೀರ್​ ಕಪೂರ್​ ಹೇಳಿದ್ದಾರೆ.

ಇದನ್ನೂ ಓದಿ: Ranbir Kapoor: ಸೆಲ್ಫಿ ಕೇಳಲು ಬಂದ ಅಭಿಮಾನಿಯ ಮೊಬೈಲ್​​ ಎಸೆದ ರಣಬೀರ್​ ಕಪೂರ್​; ವಿಡಿಯೋ ವೈರಲ್​

ಹಿಂದಿಯಲ್ಲಿ ‘ಧೂಮ್​’ ಸರಣಿಯ ಚಿತ್ರಗಳಿಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ‘ಧೂಮ್​ 4’ ಸಿನಿಮಾದಲ್ಲಿ ರಣಬೀರ್​ ಕಪೂರ್​ ನಟಿಸಬಹುದು ಎಂಬ ಗಾಸಿಪ್​ ಹರಿದಾಡುತ್ತಿದೆ. ಅಲ್ಲದೇ ರಾಮಾಯಣ ಕಥೆಯಾಧಾರಿತ ಸಿನಿಮಾದಿಂದಲೂ ಅವರಿಗೆ ಆಫರ್​ ಹೋಗಿದೆ ಎಂಬ ಮಾತು ಕೇಳಿಬಂದಿದೆ. ಆದರೆ ಆ ಎಲ್ಲ ಗಾಸಿಪ್​ಗಳನ್ನು ರಣಬೀರ್​ ಕಪೂರ್​ ಅವರು ತಳ್ಳಿ ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್