AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ರಿಲೀಸ್ ದಿನಾಂಕದ ಕುತೂಹಲಕ್ಕೆ ತೆರೆ? ಚಿತ್ರತಂಡದ ಪ್ಲ್ಯಾನ್ ಬಹಿರಂಗ

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿ ಸಂದರ್ಭದಲ್ಲಿ ಬಿಡುಗಡೆ ಆಗಲಿದೆ ಎಂಬುದು ತಿಳಿದಿದ್ದರೂ ಕೂಡ ನಿರ್ದಿಷ್ಟ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಕೊಂಚ ಗೊಂದಲ ಇತ್ತು. ಈಗ ಆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟ ಆಗಿದೆ. ಚಿತ್ರತಂಡದ ರಿಲೀಸ್ ಪ್ಲ್ಯಾನ್ ಬಗ್ಗೆ ಒಂದಷ್ಟು ವಿಷಯ ತಿಳಿದುಬಂದಿದೆ.

‘ರಾಮಾಯಣ’ ರಿಲೀಸ್ ದಿನಾಂಕದ ಕುತೂಹಲಕ್ಕೆ ತೆರೆ? ಚಿತ್ರತಂಡದ ಪ್ಲ್ಯಾನ್ ಬಹಿರಂಗ
Yash
ಮದನ್​ ಕುಮಾರ್​
|

Updated on: Aug 05, 2026 | 10:42 PM

Share

ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ (Ramayana) ಸಿನಿಮಾದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಈ ಚಿತ್ರವು ದೀಪಾವಳಿ ಹಬ್ಬದಂದು ಬಿಡುಗಡೆಯಾಗಲಿದೆ ಎಂದು ಟ್ರೇಲರ್‌ನಲ್ಲಿ ಹೇಳಲಾಗಿತ್ತಾದರೂ, ನಿಖರವಾದ ದಿನಾಂಕವನ್ನು (Ramayana  Release Date) ಬಹಿರಂಗಪಡಿಸಿರಲಿಲ್ಲ. ಇದರಿಂದಾಗಿ ಸಿನಿಮಾ ನವೆಂಬರ್ 8ರ ದೀಪಾವಳಿಯಂದೇ ಬರುತ್ತದೋ ಅಥವಾ ನವೆಂಬರ್ 6ರ ಶುಕ್ರವಾರವೇ ತೆರೆಕಾಣುತ್ತದೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ.

ವರದಿಗಳ ಪ್ರಕಾರ, ‘ರಾಮಾಯಣ’ ಚಿತ್ರವು ನವೆಂಬರ್ 6ರ ಶುಕ್ರವಾರದಂದು ವಿಶ್ವದಾದ್ಯಂತ ಏಕಕಾಲಕ್ಕೆ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಇದರ ಹಿಂದೆ ಚಿತ್ರತಂಡದ ಲೆಕ್ಕಾಚಾರ ಇದೆ. ರಿಲೀಸ್ ದಿನಾಂಕದ ಬಗ್ಗೆ ಚಿತ್ರತಂಡದ ಮೂಲಗಳು ಮಾಹಿತಿ ನೀಡಿರುವುದಾಗಿ ‘ಬಾಲಿವುಡ್ ಹಂಗಾಮಾ’ ವರದಿ ಮಾಡಿದೆ.

ಸಾಮಾನ್ಯವಾಗಿ ದೀಪಾವಳಿ ಹಬ್ಬಕ್ಕೂ ಮುಂಚಿನ ದಿನಗಳಲ್ಲಿ ಸಿನಿಮಾ ಬಿಡುಗಡೆಯಾದರೆ ಗಲ್ಲಾಪೆಟ್ಟಿಗೆಯಲ್ಲಿ ಕೊಂಚ ಮಂದಗತಿಯ ಬಿಸಿನೆಸ್ ಕಾಣುತ್ತವೆ. ಆದರೆ ‘ರಾಮಾಯಣ’ ಚಿತ್ರದ ಮೇಲಿರುವ ಅಪಾರ ನಿರೀಕ್ಷೆಯಿಂದಾಗಿ ಈ ಸಿನಿಮಾ ಮೊದಲ ದಿನವೇ ದಾಖಲೆ ಮಟ್ಟದ ಗಳಿಕೆ ಕಾಣಲಿದೆ ಎಂದು ಟ್ರೇಡ್ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಸಿನಿಮಾ ನವೆಂಬರ್ 6ರಂದು ಬಿಡುಗಡೆ ಆದರೂ ಕೂಡ ನವೆಂಬರ್ 9ರ ಸೋಮವಾರದಿಂದ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಬಹುನಿರೀಕ್ಷಿತ ಚಿತ್ರವನ್ನು ಭಾರತದಲ್ಲಿ ‘ಧರ್ಮ ಪ್ರೊಡಕ್ಷನ್ಸ್’ ಸಂಸ್ಥೆ ವಿತರಣೆ ಮಾಡುತ್ತಿದ್ದರೆ, ವಿದೇಶಗಳಲ್ಲಿ ‘ಸೋನಿ ಪಿಕ್ಚರ್ಸ್’ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಇನ್ನು ಚಿತ್ರದ ಎರಡೂ ಭಾಗಗಳ ಮ್ಯೂಸಿಕ್ ರೈಟ್ಸ್ ಅನ್ನು ‘ಟಿ-ಸಿರೀಸ್’ ಸಂಸ್ಥೆಯು ಬರೋಬ್ಬರಿ 75 ಕೋಟಿ ರೂಪಾಯಿಗೆ ಖರೀದಿಸಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ ಬಿಡುಗಡೆಗೂ ಮುನ್ನ ಬರಲಿದೆ ರಾಮಾಯಣ್ ಧಾರಾವಾಹಿ ಕುರಿತು ಸಾಕ್ಷ್ಯಚಿತ್ರ

‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ನಿರ್ದೇಶನದ ಈ ದೃಶ್ಯಕಾವ್ಯವನ್ನು ನಮಿತ್ ಮಲ್ಹೋತ್ರಾ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ, ರಾವಣನಾಗಿ ರಾಕಿಂಗ್ ಸ್ಟಾರ್ ಯಶ್, ಹನುಮಂತನಾಗಿ ಸನ್ನಿ ಡಿಯೋಲ್ ಹಾಗೂ ಲಕ್ಷ್ಮಣನಾಗಿ ರವಿ ದುಬೆ ಅಭಿನಯಿಸುತ್ತಿದ್ದಾರೆ. ಎ.ಆರ್. ರೆಹಮಾನ್ ಮತ್ತು ಹಾನ್ಸ್ ಜಿಮ್ಮರ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us