AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

‘ರಾಮಾಯಣ’ ನಿರ್ಮಾಪಕರು 700 ಕೋಟಿ ರೂಪಾಯಿ ಆಫರ್ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರ ಕೋಟಿ ರೂಪಾಯಿ ಡೀಲ್ ಮೇಲೆ ಅವರು ಕಣ್ಣು ಇಟ್ಟಿರುವಂತಿದೆ. ಇದೇ ರೀತಿ ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ವಾರಾಣಸಿ’ ಸಿನಿಮಾ ಕೂಡ ಒಟಿಟಿ ವ್ಯವಹಾರದ ಕಾರಣದಿಂದ ಸುದ್ದಿ ಆಗುತ್ತಿದೆ.

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ
Ranbir Kapoor
ಮದನ್​ ಕುಮಾರ್​
|

Updated on: Apr 03, 2026 | 7:23 PM

Share

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’ ಸಿನಿಮಾದ ಎರಡು ಭಾಗಗಳ ಡಿಜಿಟಲ್ ಹಕ್ಕುಗಳಿಗಾಗಿ ಬರೋಬ್ಬರಿ 700 ಕೋಟಿ ರೂಪಾಯಿಗಳ ಆಫರ್ ನೀಡಿತ್ತು. ಆದರೆ, ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈ ಬೃಹತ್ ಬಜೆಟ್​ನ ದೃಶ್ಯಕಾವ್ಯಕ್ಕೆ ಕನಿಷ್ಠ 1000 ಕೋಟಿ ರೂಪಾಯಿಗಳ ಡೀಲ್ ಕುದುರಿಸುವುದು ಅವರ ಗುರಿಯಾಗಿದೆ.

ಈ ಚಿತ್ರವು ಸುಮಾರು 4000 ಕೋಟಿ ರೂಪಾಯಿ ಬೃಹತ್ ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂಬ ಮಾಹಿತಿ. ಹೂಡಿಕೆಯನ್ನು ಹಿಂಪಡೆಯಲು ಚಿತ್ರತಂಡಕ್ಕೆ ಥಿಯೇಟರ್ ಮತ್ತು ಡಿಜಿಟಲ್ ಮೂಲಗಳಿಂದ ದೊಡ್ಡ ಮಟ್ಟದ ಆದಾಯದ ಅಗತ್ಯವಿದೆ. ಆ ಕಾರಣದಿಂದಲೇ ದೊಡ್ಡ ಮೊತ್ತದ ಒಟಿಟಿ ಡೀಲ್ ಸಲುವಾಗಿ ಚಿತ್ರತಂಡ ಕಾಯುತ್ತಿದೆ ಎನ್ನಲಾಗಿದೆ.

ರಾಮಾಯಣ ಸಿನಿಮಾದ ಟೀಸರ್:

ಎಸ್‌ಎಸ್‌ ರಾಜಮೌಳಿ ನಿರ್ದೇಶನದ, ಮಹೇಶ್ ಬಾಬು ನಟನೆಯ ‘ವಾರಾಣಸಿ’ ಚಿತ್ರಕ್ಕೂ ಇದೇ ರೀತಿಯ ದೊಡ್ಡ ಮೊತ್ತದ ಒಟಿಟಿ ಆಫರ್ ಬಂದಿತ್ತು ಎಂಬ ಸುದ್ದಿಯಿದೆ. ನೆಟ್‌ಫ್ಲಿಕ್ಸ್ ಸಂಸ್ಥೆಯು ಈ ಚಿತ್ರಕ್ಕೆ ಭಾರಿ ಮೊತ್ತದ ಆಫರ್ ನೀಡಿತ್ತು ಎನ್ನಲಾಗಿದ್ದರೂ, ಇನ್ನೂ ಅಧಿಕೃತವಾಗಿ ಯಾವುದೇ ಒಪ್ಪಂದ ನಡೆದಿಲ್ಲ. ‘ವಾರಣಸಿ’ ಚಿತ್ರಕ್ಕಿಂತಲೂ ದೊಡ್ಡ ಮೊತ್ತಕ್ಕೆ ತಮ್ಮ ಸಿನಿಮಾದ ಒಟಿಟಿ ಡೀಲ್ ಕುದುರಬೇಕು ಎಂಬ ಹಠ ‘ರಾಮಾಯಣ’ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರಿಗೆ ಇರಬಹುದು.

ಇದನ್ನೂ ಓದಿ: ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಶೇಷವಾಗಿ ವಿಎಫ್‌ಎಕ್ಸ್ ವಿಚಾರದಲ್ಲಿ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ರಾಜಮೌಳಿ ಅವರ ‘ವಾರಾಣಸಿ’ ಮೊದಲ ಗ್ಲಿಂಪ್ಸ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ