AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ

‘ರಾಮಾಯಣ’ ನಿರ್ಮಾಪಕರು 700 ಕೋಟಿ ರೂಪಾಯಿ ಆಫರ್ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸಾವಿರ ಕೋಟಿ ರೂಪಾಯಿ ಡೀಲ್ ಮೇಲೆ ಅವರು ಕಣ್ಣು ಇಟ್ಟಿರುವಂತಿದೆ. ಇದೇ ರೀತಿ ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ವಾರಾಣಸಿ’ ಸಿನಿಮಾ ಕೂಡ ಒಟಿಟಿ ವ್ಯವಹಾರದ ಕಾರಣದಿಂದ ಸುದ್ದಿ ಆಗುತ್ತಿದೆ.

ದಾಖಲೆ ಬರೆಯುತ್ತಾ ‘ರಾಮಾಯಣ’? ಬರೋಬ್ಬರಿ 1000 ಕೋಟಿ ರೂಪಾಯಿಗೆ ಒಟಿಟಿ ಬೇಡಿಕೆ
Ranbir Kapoor
ಮದನ್​ ಕುಮಾರ್​
|

Updated on: Apr 03, 2026 | 7:23 PM

Share

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ‘ರಾಮಾಯಣ’ (Ramayana) ಈಗ ವ್ಯವಹಾರದ ವಿಚಾರದಲ್ಲಿ ಹೊಸ ಸಂಚಲನ ಮೂಡಿಸಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಬಿಗ್ ಬಜೆಟ್ ಚಿತ್ರದ ಡಿಜಿಟಲ್ ಹಕ್ಕುಗಳಿಗಾಗಿ (OTT Rights) ನಿರ್ಮಾಪಕರು ಭಾರಿ ಮೊತ್ತದ ಬೇಡಿಕೆಯಿಟ್ಟಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ನೂರಲ್ಲ, ಇನ್ನೂರಲ್ಲ.. ಬರೋಬ್ಬರಿ ಸಾವಿರ ಕೋಟಿ ರೂಪಾಯಿ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ಹೆಸರಾಂತ ಒಟಿಟಿ ಸಂಸ್ಥೆಯೊಂದು ‘ರಾಮಾಯಣ’ ಸಿನಿಮಾದ ಎರಡು ಭಾಗಗಳ ಡಿಜಿಟಲ್ ಹಕ್ಕುಗಳಿಗಾಗಿ ಬರೋಬ್ಬರಿ 700 ಕೋಟಿ ರೂಪಾಯಿಗಳ ಆಫರ್ ನೀಡಿತ್ತು. ಆದರೆ, ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಈ ಆಫರ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಈ ಬೃಹತ್ ಬಜೆಟ್​ನ ದೃಶ್ಯಕಾವ್ಯಕ್ಕೆ ಕನಿಷ್ಠ 1000 ಕೋಟಿ ರೂಪಾಯಿಗಳ ಡೀಲ್ ಕುದುರಿಸುವುದು ಅವರ ಗುರಿಯಾಗಿದೆ.

ಈ ಚಿತ್ರವು ಸುಮಾರು 4000 ಕೋಟಿ ರೂಪಾಯಿ ಬೃಹತ್ ಬಜೆಟ್‌ನಲ್ಲಿ ತಯಾರಾಗುತ್ತಿದೆ ಎಂಬ ಮಾಹಿತಿ. ಹೂಡಿಕೆಯನ್ನು ಹಿಂಪಡೆಯಲು ಚಿತ್ರತಂಡಕ್ಕೆ ಥಿಯೇಟರ್ ಮತ್ತು ಡಿಜಿಟಲ್ ಮೂಲಗಳಿಂದ ದೊಡ್ಡ ಮಟ್ಟದ ಆದಾಯದ ಅಗತ್ಯವಿದೆ. ಆ ಕಾರಣದಿಂದಲೇ ದೊಡ್ಡ ಮೊತ್ತದ ಒಟಿಟಿ ಡೀಲ್ ಸಲುವಾಗಿ ಚಿತ್ರತಂಡ ಕಾಯುತ್ತಿದೆ ಎನ್ನಲಾಗಿದೆ.

ರಾಮಾಯಣ ಸಿನಿಮಾದ ಟೀಸರ್:

ಎಸ್‌ಎಸ್‌ ರಾಜಮೌಳಿ ನಿರ್ದೇಶನದ, ಮಹೇಶ್ ಬಾಬು ನಟನೆಯ ‘ವಾರಾಣಸಿ’ ಚಿತ್ರಕ್ಕೂ ಇದೇ ರೀತಿಯ ದೊಡ್ಡ ಮೊತ್ತದ ಒಟಿಟಿ ಆಫರ್ ಬಂದಿತ್ತು ಎಂಬ ಸುದ್ದಿಯಿದೆ. ನೆಟ್‌ಫ್ಲಿಕ್ಸ್ ಸಂಸ್ಥೆಯು ಈ ಚಿತ್ರಕ್ಕೆ ಭಾರಿ ಮೊತ್ತದ ಆಫರ್ ನೀಡಿತ್ತು ಎನ್ನಲಾಗಿದ್ದರೂ, ಇನ್ನೂ ಅಧಿಕೃತವಾಗಿ ಯಾವುದೇ ಒಪ್ಪಂದ ನಡೆದಿಲ್ಲ. ‘ವಾರಣಸಿ’ ಚಿತ್ರಕ್ಕಿಂತಲೂ ದೊಡ್ಡ ಮೊತ್ತಕ್ಕೆ ತಮ್ಮ ಸಿನಿಮಾದ ಒಟಿಟಿ ಡೀಲ್ ಕುದುರಬೇಕು ಎಂಬ ಹಠ ‘ರಾಮಾಯಣ’ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರಿಗೆ ಇರಬಹುದು.

ಇದನ್ನೂ ಓದಿ: ರಾಮಾಯಣ ಟೀಸರ್: ‘ಇದಕ್ಕಿಂತ ಆದಿಪುರುಷ್ ಎಷ್ಟೋ ಚೆನ್ನಾಗಿತ್ತು’ ಎಂದ ನೆಟ್ಟಿಗರು

‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ವಿಶೇಷವಾಗಿ ವಿಎಫ್‌ಎಕ್ಸ್ ವಿಚಾರದಲ್ಲಿ ಪ್ರೇಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದು, ನಿರೀಕ್ಷಿತ ಮಟ್ಟದಲ್ಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ರಾಜಮೌಳಿ ಅವರ ‘ವಾರಾಣಸಿ’ ಮೊದಲ ಗ್ಲಿಂಪ್ಸ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?