AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ

ಲಾಸ್ ಏಂಜಲೀಸ್‌ನ ವಿಶೇಷ ಪ್ರದರ್ಶನದಲ್ಲಿ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟೀಸರ್ ಅನಾವರಣಗೊಂಡಿದೆ. ಕೇವಲ 2 ಸೆಕೆಂಡ್‌ಗಳಲ್ಲಿ ರಾಮನ ಪಾತ್ರವನ್ನು ಕಂಡು ಪ್ರೇಕ್ಷಕರು ಮಂತ್ರಮುಗ್ಧರಾಗಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರ ಮಾಡುತ್ತಿದ್ದಾರೆ. ಏಪ್ರಿಲ್ 2ರಂದು ಹನುಮ ಜಯಂತಿ ಪ್ರಯುಕ್ತ ಟೀಸರ್ ಬಿಡುಗಡೆ ಆಗಲಿದೆ.

ವಿದೇಶಿ ಪ್ರೇಕ್ಷಕರಿಗೆ ಮೊದಲು ‘ರಾಮಾಯಣ’ ಟೀಸರ್ ದರ್ಶನ: ರಾಮನ ಪಾತ್ರಕ್ಕೆ ಫಿದಾ
Ramayana Movie Poster
ಮದನ್​ ಕುಮಾರ್​
|

Updated on: Mar 31, 2026 | 3:32 PM

Share

ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಸಿನಿಮಾ ‘ರಾಮಾಯಣ’ (Ramayana) ಬಗ್ಗೆ ಈಗ ವಿದೇಶದಲ್ಲೂ ಚರ್ಚೆ ಶುರುವಾಗಿದೆ. ಚಿತ್ರತಂಡವು ಇತ್ತೀಚೆಗೆ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರದ ಟೀಸರ್ ಪ್ರದರ್ಶಿಸಿದೆ. ಈ ಮೂಲಕ ಚಿತ್ರದ ದೃಶ್ಯ ವೈಭವವನ್ನು ಮೊದಲ ಬಾರಿಗೆ ಅಭಿಮಾನಿಗಳು ಕಣ್ತುಂಬಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್ (Ranbir Kapoor), ಯಶ್, ಸಾಯಿ ಪಲ್ಲವಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ.

ಟೀಸರ್ ಪ್ರದರ್ಶನದ ಬಳಿಕ ಮಾತನಾಡಿದ ನಟ ರಣಬೀರ್ ಕಪೂರ್ ಅವರು ಶ್ರೀರಾಮನ ಪಾತ್ರ ನಿರ್ವಹಿಸುತ್ತಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ‘ಇದು ನಮ್ಮ ಪ್ರೀತಿಯ ಶ್ರಮದ ಫಲ. ಈ ದೃಶ್ಯಗಳನ್ನು ಮೊದಲು ನೋಡುತ್ತಿರುವ ಅದೃಷ್ಟವಂತರು ನೀವು. ಶತಮಾನಗಳಿಂದಲೂ ಶ್ರೀರಾಮ ಕೋಟ್ಯಂತರ ಜನರ ಆತ್ಮಸಾಕ್ಷಿಯಾಗಿದ್ದಾನೆ. ಅವನು ಮಾನವ ಚೇತನದ ವಿಜಯವನ್ನು ಸಾರುತ್ತಾನೆ. ಸಹಾನುಭೂತಿ, ಧೈರ್ಯ ಮತ್ತು ಧರ್ಮದ ಸಂಕೇತವಾಗಿರುವ ರಾಮನನ್ನು ಮರ್ಯಾದಾ ಪುರುಷೋತ್ತಮ ಅಂತ ಕರೆಯಲಾಗುತ್ತದೆ’ ಎಂದು ರಣಬೀರ್ ಭಾವನಾತ್ಮಕವಾಗಿ ನುಡಿದರು.

ಈ ಸಿನಿಮಾದಲ್ಲಿ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ನಟ ‘ರಾಕಿಂಗ್ ಸ್ಟಾರ್’ ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಭಾರತೀಯ ಸಿನಿಪ್ರಿಯರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಟೀಸರ್ ನೋಡಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅನುಭವ ಹಂಚಿಕೊಳ್ಳುತ್ತಿದ್ದಾರೆ. ಆ ಮೂಲಕ ಈ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.

‘ಸ್ಕ್ರೀನ್ ಮೇಲೆ ಕೇವಲ 2 ಸೆಕೆಂಡ್ ರಣಬೀರ್ ಕಪೂರ್ ಅವರನ್ನು ಶ್ರೀರಾಮನಾಗಿ ನೋಡಿದಾಗ ಥಿಯೇಟರ್‌ನಲ್ಲಿ ಜನರ ಪ್ರತಿಕ್ರಿಯೆ ಅದ್ಭುತವಾಗಿತ್ತು. ನಮಗೆ ರೋಮಾಂಚನ ಆಯಿತು. ಇದು ಕೇವಲ ಸಿನಿಮಾ ಅಲ್ಲ, ಒಂದು ಎಮೋಷನ್’ ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಭಾರತದಲ್ಲಿರುವ ಪ್ರೇಕ್ಷಕರು ಈ ಸಿನಿಮಾದ ಟೀಸರ್ ನೋಡಲು ಕಾದಿದ್ದಾರೆ.

ಇದನ್ನೂ ಓದಿ: ಯಶ್ ಇಲ್ಲದೆ ಲಾಸ್ ಏಂಜಲೀಸ್​​ಗೆ ತೆರಳಿದ ‘ರಾಮಾಯಣ’ ಟೀಂ; ಪ್ರಚಾರದಲ್ಲಿ ಭಾಗಿ

ಏಪ್ರಿಲ್ 2ರಂದು ಹನುಮ ಜಯಂತಿ ಪ್ರಯುಕ್ತ ‘ರಾಮಾಯಣ: ಪಾರ್ಟ್ 1’ ಸಿನಿಮಾದ ಟೀಸರ್ ರಿಲೀಸ್ ಆಗಲಿದೆ. ಈ ವರ್ಷದ ದೀಪಾವಳಿ ಹಬ್ಬದ ಪ್ರಯಕ್ತ ಈ ಸಿನಿಮಾ ತೆರೆಕಾಣಲಿದೆ. ಬೃಹತ್ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರವು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆಯುವ ಮುನ್ಸೂಚನೆ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ