AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮತ್ತೊಂದು ಮದುವೆ ಆಗ್ತೀನಿ’; ರಣಬೀರ್ ಕಪೂರ್ ಹೇಳಿಕೆಗೆ ಟೀಕೆ

ರಣಬೀರ್ ಕಪೂರ್ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿರುವುದು ವಿವಾದ ಸೃಷ್ಟಿಸಿದೆ. ಅವರ ಹಿಂದಿನ ಹೇಳಿಕೆಗಳು ಮತ್ತು ವೈಯಕ್ತಿಕ ಜೀವನದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. "ಮತ್ತೊಂದು ಮದುವೆ ಆಗ್ತೀನಿ" ಎಂಬ ಅವರ ಹಳೆಯ ವಿಡಿಯೋ ಮತ್ತೆ ವೈರಲ್ ಆಗಿದ್ದು, ರಾಮನ ಪಾತ್ರದ ಪಾವಿತ್ರ್ಯತೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

‘ನಾನು ಮತ್ತೊಂದು ಮದುವೆ ಆಗ್ತೀನಿ’; ರಣಬೀರ್ ಕಪೂರ್ ಹೇಳಿಕೆಗೆ ಟೀಕೆ
ರಣಬೀರ್
ರಾಜೇಶ್ ದುಗ್ಗುಮನೆ
|

Updated on:Apr 18, 2026 | 7:29 AM

Share

ರಾಮನ ಪಾತ್ರ ಮಾಡೋದು ಎಂದರೆ ಅದು ಸಣ್ಣ ಮಾತಲ್ಲ. ಪಾತ್ರ ಮಾಡುವುದು ಚಾಲೆಂಜ್ ಅಲ್ಲ, ಆದರೆ, ಅದರ ಸುತ್ತಲೂ ಹುಟ್ಟಿಕೊಳ್ಳುವ ವಿವಾದ ತಣ್ಣಗಾಗಿಸುವುದು ದೊಡ್ಡ ಚಾಲೆಂಜ್. ಈಗ ರಣಬೀರ್ ಕಪೂರ್ (Ranbir Kapoor) ಅದೇ ರೀತಿಯ ಚಾಲೆಂಜ್​ ಎದುರಿಸುತ್ತಿದ್ದಾರೆ. ಅವರು ಅನೇಕ ನಟಿಯರ ಜೊತೆ ಸುತ್ತಾಡಿದ್ದಾರೆ. ಎಣ್ಣೆ ಪಾರ್ಟಿ ಮಾಡಿದ್ದಾರೆ. ಈಗ ಇದೆಲ್ಲವನ್ನೂ ತಂದು ಟೀಕೆ ಮಾಡಲಾಗುತ್ತಿದೆ. ಅದೇ ರೀತಿ ಅವರು ಈ ಮೊದಲು ನೀಡಿದ್ದ, ‘ಮತ್ತೊಂದು ಮದುವೆ ಆಗ್ತೀನಿ’ ಎಂಬ ಹೇಳಿಕೆಯನ್ನು ಮುನ್ನೆಲೆಗೆ ತರಲಾಗಿದೆ. ‘ಇವರಿಗೆಲ್ಲ ರಾಮನ ಪಾತ್ರ ನೀಡಲಾಗಿದೆಯಲ್ಲ’ ಎಂದು ಕೆಲವರು ಟೀಕೆ ಮಾಡಿದ್ದಾರೆ.

ರಣಬೀರ್ ಕಪೂರ್ ಅವರು ಹಿಂದಿಯ ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರ ಮಾಡುತ್ತಿದ್ದಾರೆ. ಅದರ ಲುಕ್ ರಿಲೀಸ್ ಆಗಿ ಗಮನ ಸೆಳೆದಿದೆ. ಅವರು ರಾಮನ ಪಾತ್ರಕ್ಕೆ ಆಯ್ಕೆ ಆದಾಗಿನಿಂದಲೂ ಟೀಕೆಗಳನ್ನು ಎದುರಿಸುತ್ತಿದ್ದಾರೆ. ರಣಬೀರ್ ಈ ಚಿತ್ರಕ್ಕಾಗಿ ಮದ್ಯ ಹಾಗೂ ನಾನ್ ವೆಜ್ ಸೇವನೆ ಬಿಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಇದನ್ನು ಒಪ್ಪಲು ಅನೇಕರು ರೆಡಿ ಇದ್ದಾರೆ. ಜನ ಸಾಮಾನ್ಯರಿಂದ ಹಿಡಿದು ಕಂಗನಾ ರಣಾವತ್ ರೀತಿಯ ಸೆಲೆಬ್ರಿಟಿಗಳು ರಣಬೀರ್ ಆಯ್ಕೆ ಅನ್ನು ಟೀಕಿಸಿದ್ದಾರೆ. ಅವರು ಸ್ತ್ರೀ ಲೋಲ ಎಂದು ಕರೆದಿರುವ ಅನೇಕರು, ರಾಮನ ಪಾತ್ರದ ಪಾವಿತ್ರ್ಯತೆ ಹಾಳು ಮಾಡಲಾಗಿದೆ ಎಂದು ಟೀಕಿಸಿದ್ದಾರೆ.

ಹೀಗಿರುವಾಗಲೇ ಒಂದು ವಿಡಿಯೋ ವೈರಲ್ ಆಗಿದೆ. ಇದು 2022ರ ಸಂದರ್ಶನದಲ್ಲಿ ನೀಡಿದ ವಿಡಿಯೋ. ‘ಶಂಶೇರ’ ಹೆಸರಿನ ಸಿನಿಮಾನ ರಣಬೀರ್ ಕಪೂರ್ ಮಾಡಿದ್ದರು. ಈ ಚಿತ್ರದ ಸಂದರ್ಶನದಲ್ಲಿ ಆ್ಯಂಕರ್ ಅವರು, ನಿಮ್ಮ ಮದುವೆಯಲ್ಲಿ ಸಮೋಸಾ-ಚಟ್ನಿ ಉತ್ತಮವಾಗಿರಲಿಲ್ಲ ಎಂದರು. ಆಗ ರಣಬೀರ್ ಕಪೂರ್ ಅವರು, ‘ನಾನು ಇನ್ನೊಂದು ಮದುವೆ ಆಗುತ್ತೇನೆ. ಆಗ ಒಳ್ಳೆಯ ಪಾರ್ಟಿ ಕೊಡುತ್ತೇನೆ’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಶ್ರೀರಾಮನ ಪಾತ್ರಕ್ಕೆ ರಣಬೀರ್ ಕಪೂರ್​ಗಿಂತ ಉತ್ತಮ ನಟ ಯಾರೂ ಇಲ್ಲ: ನಮಿತ್ ಮಲ್ಹೋತ್ರಾ

ನಾಲ್ಕು ವರ್ಷಗಳ ಬಳಿಕ ಈ ವಿಡಿಯೋನ ಮತ್ತೆ ವೈರಲ್ ಮಾಡಲಾಗಿದೆ. ಅನೇಕರು ರಾಮನ ಪಾತ್ರಕ್ಕೆ ರಣಬೀರ್ ಆಯ್ಕೆಯನ್ನು ಟೀಕಿಸುವ ಕೆಲಸ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:27 am, Sat, 18 April 26

Follow Us
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮುಂಬೈನ ರೈಲಿನಲ್ಲಿ ಮಹಿಳೆಯರ ಕಿತ್ತಾಟ; ವಿಡಿಯೋ ವೈರಲ್
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ಮಹಿಳಾ ಮೀಸಲಾತಿಗೆ ಬಹುಮತ ಸಿಗದಿದ್ದಕ್ಕೆ ಸಂಸತ್​​ನಲ್ಲಿ ಎನ್​ಡಿಎ ಪ್ರತಿಭಟನೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ; ಚಿರಾಗ್ ಪಾಸ್ವಾನ್ ಟೀಕೆ
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ: ಲಾಯರ್ ಹೇಳಿದ್ದಿಷ್ಟು
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ಸ್ಫೋಟಕ ವಿಚಾರ ಬಿಚ್ಚಿಟ್ಟ ಹೋರಾಟಗಾರ
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ದರ್ಶನ್ ಅಂದು ಆ ಮಾತು ಹೇಳಲು ಬಿಡಲಿಲ್ಲ: ಮಾಜಿ ಮ್ಯಾನೇಜರ್
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ ಎಂದ BSY
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ