AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ: ಪಾರ್ಟ್ 1’ ಸಿನಿಮಾ ಅಂದುಕೊಂಡಿದ್ದಕ್ಕಿಂತ ಮೊದಲೇ ತೆರೆಗೆ ಬರಲಿದೆ. ದೀಪಾವಳಿ ರಜೆಗಳ ಮುಂಚೆ ಬಾಯ್ಮಾತಿನ ಪ್ರಚಾರ ಗಳಿಸಿ, ಎರಡನೇ ವಾರದಲ್ಲಿ ಭಾರಿ ಕಲೆಕ್ಷನ್ ಮಾಡುವ ತಂತ್ರ ಇದರ ಹಿಂದಿದೆ. ಆದರೆ, ಈ ನಿರ್ಧಾರದಿಂದ ಯಶ್ ಅವರ ಮತ್ತೊಂದು ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರ ಆಗಸ್ಟ್‌ಗೆ ಮುನ್ನವೇ ಬಿಡುಗಡೆಯಾಗಬೇಕಾದ ಒತ್ತಡಕ್ಕೆ ಸಿಲುಕಿದೆ.

ಅಂದುಕೊಂಡಿದ್ದಕ್ಕಿಂತ ಮೊದಲೇ ಬರಲಿದೆ ‘ರಾಮಾಯಣ’ ಸಿನಿಮಾ; ‘ಟಾಕ್ಸಿಕ್’ ಮೇಲೆ ಒತ್ತಡ?
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: May 23, 2026 | 11:14 AM

Share

ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್, ಸಾಯಿ ಪಲ್ಲವಿ ಮತ್ತು ಸನ್ನಿ ಡಿಯೋಲ್ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ‘ರಾಮಾಯಣ: ಪಾರ್ಟ್ 1’ (Ramayana) ಸಿನಿಮಾದ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಸಿನಿಮಾ ಬಗ್ಗೆ ಗಾಂಧಿನಗರದಿಂದ ಹಿಡಿದು ಬಾಲಿವುಡ್‌ವರೆಗೂ ಭಾರಿ ಚರ್ಚೆ ಶುರುವಾಗಿದೆ. ಈ ಬಿಗ್ ಬಜೆಟ್ ಸಿನಿಮಾ ದೀಪಾವಳಿ ಹಬ್ಬದ ಸಂದರ್ಭದಲ್ಲಿ (ನವೆಂಬರ್ 5-6 ಸಮಯದಲ್ಲಿ) ತೆರೆಗೆ ಬರಲಿದೆ ಎಂದು ತಂಡ ಹೇಳಿತ್ತು. ಆದರೆ, ಈಗ ಸಿಗುತ್ತಿರುವ ಲೇಟೆಸ್ಟ್ ಮಾಹಿತಿ ಪ್ರಕಾರ, ಅಂದುಕೊಂಡಿದ್ದಕ್ಕಿಂತ ಒಂದು ವಾರ ಮೊದಲೇ ಅಂದರೆ ಅಕ್ಟೋಬರ್ 30, 2026ರಂದೇ ಸಿನಿಮಾ ಥಿಯೇಟರ್‌ಗೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.

ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ದೀಪಾವಳಿ ಹಬ್ಬದ ರಜೆಯ ದಿನಗಳನ್ನೇ ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಹಬ್ಬದ ವಾರದಲ್ಲೇ ರಿಲೀಸ್ ಮಾಡುವ ಬದಲು, ಒಂದು ವಾರ ಮೊದಲೇ ಸಿನಿಮಾ ರಿಲೀಸ್ ಮಾಡಿ ಸಿನಿಮಾಗೆ ಬಾಯ್ಮಾತಿನ ಪ್ರಚಾರ ನೀಡಲು ತಂಡ ಪ್ಲಾನ್ ಮಾಡಿಕೊಂಡಿದೆ ಎಂದು ವರದಿ ಆಗಿದೆ.

ಮೊದಲ ವಾರವೇ ಸಿನಿಮಾ ಭದ್ರವಾಗಿ ನೆಲೆಯೂರಿದರೆ, ಎರಡನೇ ವಾರದಲ್ಲಿ ಬರುವ ದೀಪಾವಳಿ ರಜೆಗಳ ಸರಣಿಯಲ್ಲಿ ಚಿತ್ರದ ಕಲೆಕ್ಷನ್ ಮೊದಲ ವಾರಕ್ಕಿಂತ ದುಪ್ಪಟ್ಟಾಗಲಿದೆ ಎನ್ನುವುದು ಚಿತ್ರತಂಡದ ಲೆಕ್ಕಾಚಾರ. ಸದ್ಯ ವಿತರಕರೊಂದಿಗೆ ಬರೋಬ್ಬರಿ 450 ಕೋಟಿ ಬಿಸಿನೆಸ್ ಮಾತುಕತೆ ನಡೆಯುತ್ತಿದ್ದು, ಡೀಲ್ ಕ್ಲೋಸ್ ಆದ ತಕ್ಷಣವೇ ಅಕ್ಟೋಬರ್ 30ರ ಹೊಸ ರಿಲೀಸ್ ಡೇಟ್ ಅಧಿಕೃತವಾಗಿ ಹೊರಬೀಳಲಿದೆ.

‘ಟಾಕ್ಸಿಕ್’ ಚಿತ್ರಕ್ಕೂ ಎದುರಾಯ್ತಾ ರಿಲೀಸ್ ಒತ್ತಡ?

‘ರಾಮಾಯಣ’ ಚಿತ್ರದ ಈ ಹೊಸ ಮಾಸ್ಟರ್ ಪ್ಲಾನ್‌ನಿಂದಾಗಿ ಈಗ ಯಶ್ ಅವರ ಮತ್ತೊಂದು ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ (Toxic) ಮೇಲೂ ಇದರ ಪ್ರಭಾವ ಬೀರುವ ಸಾಧ್ಯತೆ ಇದೆ. ಯಶ್ ಅವರು ‘ರಾಮಾಯಣ’ದಲ್ಲಿ ರಾವಣನ ಪಾತ್ರ ಮಾಡುತ್ತಿರುವುದರಿಂದ, ಒಂದೇ ವರ್ಷ ಅವರ ಎರಡು ಬಿಗ್ ಸಿನಿಮಾಗಳು ಮುಖಾಮುಖಿಯಾಗುತ್ತಿವೆ. ಚಿತ್ರರಂಗದ ನಿಯಮದ ಪ್ರಕಾರ, ‘ರಾಮಾಯಣ’ ಅಕ್ಟೋಬರ್ ಕೊನೆಯಲ್ಲಿ ಬರುವುದರಿಂದ ಅದಕ್ಕೂ ಕನಿಷ್ಠ ಎರಡು ತಿಂಗಳು ಮೊದಲೇ, ಅಂದರೆ ಆಗಸ್ಟ್ ತಿಂಗಳಲ್ಲೇ ‘ಟಾಕ್ಸಿಕ್’ ಸಿನಿಮಾವನ್ನು ರಿಲೀಸ್ ಮಾಡಬೇಕಾದ ಅನಿವಾರ್ಯತೆ ಚಿತ್ರತಂಡಕ್ಕೆ ಎದುರಾಗಲಿದೆ. ಇಲ್ಲದಿದ್ದರೆ ಎರಡೂ ಚಿತ್ರಗಳ ಕಲೆಕ್ಷನ್ ಹಾಗೂ ಹೈಪ್ ಮೇಲೆ ಹೊಡೆತ ಬೀಳುವ ಆತಂಕವಿದೆ.

ಇದನ್ನೂ ಓದಿ: ಸಾಯಿ ಪಲ್ಲವಿ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ‘ರಾಮಾಯಣ’ ಟೀಂ

ಇನ್ನು ‘ರಾಮಾಯಣ’ ಸಿನಿಮಾದ ಎರಡನೇ ಭಾಗವನ್ನು ಮುಂದಿನ ವರ್ಷ ಅಂದರೆ 2027ರ ದೀಪಾವಳಿಗೆ ರಿಲೀಸ್ ಮಾಡಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ