AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್

Animal Movie Teaser: ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್
ರಣಬೀರ್ ಕಪೂರ್
ರಾಜೇಶ್ ದುಗ್ಗುಮನೆ
|

Updated on: Sep 28, 2023 | 12:29 PM

Share

‘ಅನಿಮಲ್’ ಸಿನಿಮಾ (Animal Movie) ಘೋಷಣೆ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸಿತ್ತು. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇಂದು (ಸೆಪ್ಟೆಂಬರ್ 28) ರಣಬೀರ್ ಕಪೂರ್ ಜನ್ಮದಿನ. ಈ ವಿಶೇಷ ದಿನದಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ‘ಅನಿಮಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಈ ಟೀಸರ್ ಹೆಚ್ಚಿಸಿದೆ.

ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಕಥಾ ನಾಯಕ (ರಣಬೀರ್ ಕಪೂರ್) ಶ್ರೀಮಂತ ಕುಟುಂಬದವನು. ‘ವಿಶ್ವ ಸುತ್ತು, ಎರಡು-ಮೂರು ಸ್ಪೋರ್ಟ್ಸ್ ಕಾರ್​ನ ಆ್ಯಕ್ಸಿಡೆಂಟ್ ಮಾಡು, ಅಫೇರ್ ಇಟ್ಟುಕೋ. ಆಗ ನಿನ್ನ ಕಣ್ಣು ತೆರೆಯಬಹುದು’ ಎಂಬ ಮಾತನ್ನು ಕಥಾ ನಾಯಕ ಗಂಭಿರವಾಗಿ ತೆಗೆದುಕೊಳ್ಳುತ್ತಾನೆ. ಅಲ್ಲಿಂದ ಕಥೆ ಶುರು.

ರಣಬೀರ್ ಹಾಗೂ ರಶ್ಮಿಕಾ ‘ಅನಿಮಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರ ಪಾತ್ರವೂ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳು ಮೈ ನವಿರೇಳಿಸುವಂತಿದೆ. ಅತಿಯಾದ ರಕ್ತವನ್ನೂ ತೋರಿಸಲಾಗಿದೆ.

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

‘ಅನಿಮಲ್’ ಟೀಸರ್ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬಿರುಗಾಳಿ ಬರುವ ಸೂಚನೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ‘ರಣಬೀರ್ ಮತ್ತೊಂದು ಗೆಲುವು ಕಾಣೋದು ಪಕ್ಕಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಮೊದಲಾದವರು ಟೀಸರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್