ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್

Animal Movie Teaser: ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್
ರಣಬೀರ್ ಕಪೂರ್
Follow us
|

Updated on: Sep 28, 2023 | 12:29 PM

‘ಅನಿಮಲ್’ ಸಿನಿಮಾ (Animal Movie) ಘೋಷಣೆ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸಿತ್ತು. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇಂದು (ಸೆಪ್ಟೆಂಬರ್ 28) ರಣಬೀರ್ ಕಪೂರ್ ಜನ್ಮದಿನ. ಈ ವಿಶೇಷ ದಿನದಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ‘ಅನಿಮಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಈ ಟೀಸರ್ ಹೆಚ್ಚಿಸಿದೆ.

ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಕಥಾ ನಾಯಕ (ರಣಬೀರ್ ಕಪೂರ್) ಶ್ರೀಮಂತ ಕುಟುಂಬದವನು. ‘ವಿಶ್ವ ಸುತ್ತು, ಎರಡು-ಮೂರು ಸ್ಪೋರ್ಟ್ಸ್ ಕಾರ್​ನ ಆ್ಯಕ್ಸಿಡೆಂಟ್ ಮಾಡು, ಅಫೇರ್ ಇಟ್ಟುಕೋ. ಆಗ ನಿನ್ನ ಕಣ್ಣು ತೆರೆಯಬಹುದು’ ಎಂಬ ಮಾತನ್ನು ಕಥಾ ನಾಯಕ ಗಂಭಿರವಾಗಿ ತೆಗೆದುಕೊಳ್ಳುತ್ತಾನೆ. ಅಲ್ಲಿಂದ ಕಥೆ ಶುರು.

ರಣಬೀರ್ ಹಾಗೂ ರಶ್ಮಿಕಾ ‘ಅನಿಮಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರ ಪಾತ್ರವೂ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳು ಮೈ ನವಿರೇಳಿಸುವಂತಿದೆ. ಅತಿಯಾದ ರಕ್ತವನ್ನೂ ತೋರಿಸಲಾಗಿದೆ.

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

‘ಅನಿಮಲ್’ ಟೀಸರ್ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬಿರುಗಾಳಿ ಬರುವ ಸೂಚನೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ‘ರಣಬೀರ್ ಮತ್ತೊಂದು ಗೆಲುವು ಕಾಣೋದು ಪಕ್ಕಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಮೊದಲಾದವರು ಟೀಸರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ