AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ

ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ವೈರಲ್​ ಆಗಿದೆ.

Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ
ರಣದೀಪ್​ ಹೂಡಾ
ಮದನ್​ ಕುಮಾರ್​
|

Updated on: Jul 19, 2023 | 2:49 PM

Share

ನಟ ರಣದೀಪ್​ ಹೂಡಾ (Randeep Hooda) ಅವರು ಸಿನಿಮಾಗಳಿಂದ ಮಾತ್ರವಲ್ಲದೇ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೂ ಜನರಿಗೆ ಇಷ್ಟ ಆಗಿದ್ದಾರೆ. ಬಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ಅವರಿಗೆ ಸಖತ್​ ಬೇಡಿಕೆ ಇದೆ. ಈಗ ಅವರು ಒಂದು ಪುಣ್ಯದ ಕೆಲಸ ಮಾಡಿ ಸುದ್ದಿ ಆಗಿದ್ದಾರೆ. ಪ್ರವಾಹ (Flood) ಪೀಡಿತ ಪ್ರದೇಶದ ಜನರಿಗೆ ರಣದೀಪ್​ ಹೂಡಾ ಅವರು ಸಹಾಯ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನಟನ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ (Swatantra Veer Savarkar) ಸಿನಿಮಾದಲ್ಲಿ ರಣದೀಪ್​ ಹೂಡಾ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಜನರಿಗೆ ನಿರೀಕ್ಷೆ ಇದೆ.

ಹರಿಯಾಣದಲ್ಲಿ ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಜಲಾವೃತ ಪ್ರದೇಶಗಳಲ್ಲಿ ಅವರು ಸಂಚರಿಸಿದ್ದಾರೆ. ಅಲ್ಲಿನ ಜನರಿಗೆ ಕುಡಿಯುವ ನೀರು, ಅಡುಗೆ ಸಾಮಾಗ್ರಿ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಿದ್ದಾರೆ. ರಣದೀಪ್ ಹೂಡಾ ಅವರು ಈ ರೀತಿ ಸಹಾಯ ಮಾಡಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಕೇರಳದಲ್ಲಿ ಪ್ರವಾಹ ಉಂಟಾದಾಗಲೂ ಅವರು ಜನರ ನೆರವಿಗೆ ಧಾವಿಸಿದ್ದರು.

2001ರಿಂದಲೂ ರಣದೀಪ್​ ಹೂಡಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಷ್ಟು ದಿನ ನಟನಾಗಿ ಗುರುತಿಸಿಕೊಂಡಿದ್ದ ಅವರು ಈಗ ನಿರ್ದೇಶನದಲ್ಲೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುವುದರ ಜೊತೆಗೆ ನಿರ್ದೇಶನವನ್ನೂ ಅವರೇ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್​ ಮುಗಿದಿದೆ. ಸಾವರ್ಕರ್​ ಜೀವನದ ಕುರಿತು ಈ ಚಿತ್ರ ನಿರ್ಮಾಣ ಆಗುತ್ತಿರುವುದರಿಂದ ಕೌತುಕ ಮೂಡಿದೆ.

ಇದನ್ನೂ ಓದಿ: Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾ ಮಾತ್ರವಲ್ಲದೇ ರಣದೀಪ್​ ಹೂಡಾ ಅವರ ಕೈಯಲ್ಲಿ ಇನ್ನೂ ಅನೇಕ ಪ್ರಾಜೆಕ್ಟ್​ಗಳಿಗೆ. ‘ಅನಾರಿ ಈಸ್​ ಬ್ಯಾಕ್​’, ‘21: ಬ್ಯಾಟಲ್​ ಆಫ್​ ಸರ್​ಗಡಿ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಈ ಎಲ್ಲ ಸಿನಿಮಾದ ಕೆಲಸಗಳನ್ನು ಬದಿಗೊತ್ತಿ ಜನರ ಸಹಾಯಕ್ಕೆ ಬಂದಿರುವ ರಣದೀಪ್​ ಹೂಡಾ ಅವರಿಗೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು