Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ

ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ವೈರಲ್​ ಆಗಿದೆ.

Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ
ರಣದೀಪ್​ ಹೂಡಾ
Follow us
|

Updated on: Jul 19, 2023 | 2:49 PM

ನಟ ರಣದೀಪ್​ ಹೂಡಾ (Randeep Hooda) ಅವರು ಸಿನಿಮಾಗಳಿಂದ ಮಾತ್ರವಲ್ಲದೇ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೂ ಜನರಿಗೆ ಇಷ್ಟ ಆಗಿದ್ದಾರೆ. ಬಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ಅವರಿಗೆ ಸಖತ್​ ಬೇಡಿಕೆ ಇದೆ. ಈಗ ಅವರು ಒಂದು ಪುಣ್ಯದ ಕೆಲಸ ಮಾಡಿ ಸುದ್ದಿ ಆಗಿದ್ದಾರೆ. ಪ್ರವಾಹ (Flood) ಪೀಡಿತ ಪ್ರದೇಶದ ಜನರಿಗೆ ರಣದೀಪ್​ ಹೂಡಾ ಅವರು ಸಹಾಯ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನಟನ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ (Swatantra Veer Savarkar) ಸಿನಿಮಾದಲ್ಲಿ ರಣದೀಪ್​ ಹೂಡಾ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಜನರಿಗೆ ನಿರೀಕ್ಷೆ ಇದೆ.

ಹರಿಯಾಣದಲ್ಲಿ ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಜಲಾವೃತ ಪ್ರದೇಶಗಳಲ್ಲಿ ಅವರು ಸಂಚರಿಸಿದ್ದಾರೆ. ಅಲ್ಲಿನ ಜನರಿಗೆ ಕುಡಿಯುವ ನೀರು, ಅಡುಗೆ ಸಾಮಾಗ್ರಿ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಿದ್ದಾರೆ. ರಣದೀಪ್ ಹೂಡಾ ಅವರು ಈ ರೀತಿ ಸಹಾಯ ಮಾಡಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಕೇರಳದಲ್ಲಿ ಪ್ರವಾಹ ಉಂಟಾದಾಗಲೂ ಅವರು ಜನರ ನೆರವಿಗೆ ಧಾವಿಸಿದ್ದರು.

2001ರಿಂದಲೂ ರಣದೀಪ್​ ಹೂಡಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಷ್ಟು ದಿನ ನಟನಾಗಿ ಗುರುತಿಸಿಕೊಂಡಿದ್ದ ಅವರು ಈಗ ನಿರ್ದೇಶನದಲ್ಲೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುವುದರ ಜೊತೆಗೆ ನಿರ್ದೇಶನವನ್ನೂ ಅವರೇ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್​ ಮುಗಿದಿದೆ. ಸಾವರ್ಕರ್​ ಜೀವನದ ಕುರಿತು ಈ ಚಿತ್ರ ನಿರ್ಮಾಣ ಆಗುತ್ತಿರುವುದರಿಂದ ಕೌತುಕ ಮೂಡಿದೆ.

ಇದನ್ನೂ ಓದಿ: Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾ ಮಾತ್ರವಲ್ಲದೇ ರಣದೀಪ್​ ಹೂಡಾ ಅವರ ಕೈಯಲ್ಲಿ ಇನ್ನೂ ಅನೇಕ ಪ್ರಾಜೆಕ್ಟ್​ಗಳಿಗೆ. ‘ಅನಾರಿ ಈಸ್​ ಬ್ಯಾಕ್​’, ‘21: ಬ್ಯಾಟಲ್​ ಆಫ್​ ಸರ್​ಗಡಿ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಈ ಎಲ್ಲ ಸಿನಿಮಾದ ಕೆಲಸಗಳನ್ನು ಬದಿಗೊತ್ತಿ ಜನರ ಸಹಾಯಕ್ಕೆ ಬಂದಿರುವ ರಣದೀಪ್​ ಹೂಡಾ ಅವರಿಗೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್