AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ

ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ವೈರಲ್​ ಆಗಿದೆ.

Randeep Hooda: ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸಹಾಯ ಮಾಡಿದ ‘ಸಾವರ್ಕರ್​’ ಚಿತ್ರದ ನಟ ರಣದೀಪ್​ ಹೂಡಾ
ರಣದೀಪ್​ ಹೂಡಾ
ಮದನ್​ ಕುಮಾರ್​
|

Updated on: Jul 19, 2023 | 2:49 PM

Share

ನಟ ರಣದೀಪ್​ ಹೂಡಾ (Randeep Hooda) ಅವರು ಸಿನಿಮಾಗಳಿಂದ ಮಾತ್ರವಲ್ಲದೇ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕವೂ ಜನರಿಗೆ ಇಷ್ಟ ಆಗಿದ್ದಾರೆ. ಬಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ಅವರಿಗೆ ಸಖತ್​ ಬೇಡಿಕೆ ಇದೆ. ಈಗ ಅವರು ಒಂದು ಪುಣ್ಯದ ಕೆಲಸ ಮಾಡಿ ಸುದ್ದಿ ಆಗಿದ್ದಾರೆ. ಪ್ರವಾಹ (Flood) ಪೀಡಿತ ಪ್ರದೇಶದ ಜನರಿಗೆ ರಣದೀಪ್​ ಹೂಡಾ ಅವರು ಸಹಾಯ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ನಟನ ಈ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ (Swatantra Veer Savarkar) ಸಿನಿಮಾದಲ್ಲಿ ರಣದೀಪ್​ ಹೂಡಾ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಜನರಿಗೆ ನಿರೀಕ್ಷೆ ಇದೆ.

ಹರಿಯಾಣದಲ್ಲಿ ಪ್ರವಾಹದಿಂದ ತತ್ತರಿಸಿದ ಪ್ರದೇಶಗಳಿಗೆ ರಣದೀಪ್​ ಹೂಡಾ ಭೇಟಿ ನೀಡಿದ್ದಾರೆ. ತಲೆಗೆ ಕೇಸರಿ ಬಟ್ಟೆ ಕಟ್ಟಿಕೊಂಡು, ಜನರಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವ ಅವರ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಜಲಾವೃತ ಪ್ರದೇಶಗಳಲ್ಲಿ ಅವರು ಸಂಚರಿಸಿದ್ದಾರೆ. ಅಲ್ಲಿನ ಜನರಿಗೆ ಕುಡಿಯುವ ನೀರು, ಅಡುಗೆ ಸಾಮಾಗ್ರಿ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಿದ್ದಾರೆ. ರಣದೀಪ್ ಹೂಡಾ ಅವರು ಈ ರೀತಿ ಸಹಾಯ ಮಾಡಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆ ಕೇರಳದಲ್ಲಿ ಪ್ರವಾಹ ಉಂಟಾದಾಗಲೂ ಅವರು ಜನರ ನೆರವಿಗೆ ಧಾವಿಸಿದ್ದರು.

2001ರಿಂದಲೂ ರಣದೀಪ್​ ಹೂಡಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇಷ್ಟು ದಿನ ನಟನಾಗಿ ಗುರುತಿಸಿಕೊಂಡಿದ್ದ ಅವರು ಈಗ ನಿರ್ದೇಶನದಲ್ಲೂ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುವುದರ ಜೊತೆಗೆ ನಿರ್ದೇಶನವನ್ನೂ ಅವರೇ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್​ ಮುಗಿದಿದೆ. ಸಾವರ್ಕರ್​ ಜೀವನದ ಕುರಿತು ಈ ಚಿತ್ರ ನಿರ್ಮಾಣ ಆಗುತ್ತಿರುವುದರಿಂದ ಕೌತುಕ ಮೂಡಿದೆ.

ಇದನ್ನೂ ಓದಿ: Randeep Hooda: ಮಾಯಾವತಿ ಬಗ್ಗೆ ಕೀಳು ಜೋಕ್​; ‘ರಾಧೆ’ ನಟ ರಣದೀಪ್​ ಹೂಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಛೀಮಾರಿ

‘ಸ್ವಾತಂತ್ರ್ಯ ವೀರ್​ ಸಾವರ್ಕರ್​’ ಸಿನಿಮಾ ಮಾತ್ರವಲ್ಲದೇ ರಣದೀಪ್​ ಹೂಡಾ ಅವರ ಕೈಯಲ್ಲಿ ಇನ್ನೂ ಅನೇಕ ಪ್ರಾಜೆಕ್ಟ್​ಗಳಿಗೆ. ‘ಅನಾರಿ ಈಸ್​ ಬ್ಯಾಕ್​’, ‘21: ಬ್ಯಾಟಲ್​ ಆಫ್​ ಸರ್​ಗಡಿ’ ಮುಂತಾದ ಸಿನಿಮಾಗಳಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಈ ಎಲ್ಲ ಸಿನಿಮಾದ ಕೆಲಸಗಳನ್ನು ಬದಿಗೊತ್ತಿ ಜನರ ಸಹಾಯಕ್ಕೆ ಬಂದಿರುವ ರಣದೀಪ್​ ಹೂಡಾ ಅವರಿಗೆ ಅಭಿಮಾನಿಗಳು ಭೇಷ್​ ಎನ್ನುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?