AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ

ಟೊಮ್ಯಾಟೋ ದರ ಹೆಚ್ಚಾಗಿದೆ. ಕೆಲ ಕಡೆಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿವರೆಗೂ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಮಾನ್ಯರು ಟೊಮ್ಯಾಟೋ ಖರಿದಿಸೋದು ಕಷ್ಟವಾಗಿದೆ.

ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ
TV9 Web
| Edited By: |

Updated on: Nov 13, 2021 | 8:05 PM

Share

ಸ್ಟಾರ್​ ನಟ-ನಟಿಯರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ. ಮನೆಯ ಕೆಲಸ ನೋಡಿಕೊಳ್ಳೋಕೆ ಸಾಕಷ್ಟು ಸಿಬ್ಬಂದಿ ಇರುತ್ತಾರೆ. ಇವರು ಹೇಳಿದ ಅಡುಗೆ ಸಿದ್ಧವಾಗುತ್ತದೆ. ತರಕಾರಿ, ದಿನಸಿ, ಹಣ್ಣುಗಳನ್ನು ಕೆಲಸದವರೇ ತರುತ್ತಾರೆ. ಈ ಕಾರಣಕ್ಕೆ ಅದರ ಬೆಲೆಯ ಬಗ್ಗೆ ಅವರಿಗೆ ಕಿಂಚಿತ್ತೂ ಮಾಹಿತಿ ಇರುವುದಿಲ್ಲ. ಈ ವಿಚಾರ ಮತ್ತೊಮ್ಮೆ ಸಾಬೀತಾಗಿದೆ. ನಟಿ ರಾಣಿ ಮುಖರ್ಜಿ ಬಳಿ ಟೊಮ್ಯಾಟೋ ರೇಟ್​ ಕೇಳಲಾಗಿದೆ. ಇದಕ್ಕೆ ಅವರು ಸರಿಯಾದ ಉತ್ತರ ನೀಡಿದರಾ? ಇಲ್ಲ, ಈ ಪ್ರಶ್ನೆಗೆ ಉತ್ತರಿಸೋಕೆ ಅವರು ತಡವರಿಸಿದರು. ಈ ವಿಡಿಯೋ ಈಗ ವೈರಲ್​ ಆಗಿದೆ.

ಟೊಮ್ಯಾಟೋ ದರ ಹೆಚ್ಚಾಗಿದೆ. ಕೆಲ ಕಡೆಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿವರೆಗೂ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಮಾನ್ಯರು ಟೊಮ್ಯಾಟೋ ಖರೀದಿಸೋದು ಕಷ್ಟವಾಗಿದೆ. ಜನ ಸಾಮಾನ್ಯರ ಜೇಬಿಗೆ ಈ ತರಕಾರಿ ಭಾರವಾಗಿದೆ. ಹೀಗಾಗಿ, ಎಲ್ಲೆಲ್ಲೂ ಇದರದ್ದೇ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಟೊಮ್ಯಾಟೋ ಬೆಲೆಯನ್ನು ರಾಣಿ ಮುಖರ್ಜಿಗೆ ಕೇಳಲಾಗಿದೆ. ಅವರ ಉತ್ತರ ಹೇಗಿತ್ತು ಎಂಬುದನ್ನು ನೀವೇ ನೋಡಿ.

‘ಬಂಟಿ ಆರ್​ ಬಬ್ಲಿ 2’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಈ ಸಿನಿಮಾದ ಪ್ರಮೋಷನ್​ಗಾಗಿ ಸೈಫ್​ ಅಲಿ ಖಾನ್​, ಸಿದ್ದಾಂತ್​ ಚತುರ್ವೇದಿ, ರಾಣಿ ಮುಖರ್ಜಿ ‘ದಿ ಕಪಿಲ್​ ಶರ್ಮಾ ಶೋ’ಗೆ ಬಂದಿದ್ದರು. ಈ ಶೋನ ಪ್ರಮೋಷನ್​ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ‘ಈ ಸೆಟ್​ನಲ್ಲಿ ಸಾಕಷ್ಟು ಮಹಿಳೆಯರಿದ್ದಾರೆ. ಅವರೆಲ್ಲರೂ ನಿಮ್ಮ ಬಳಿ ಪ್ರಶ್ನೆ ಕೇಳಬೇಕು ಎಂದುಕೊಂಡಿದ್ದಾರೆ. ಟೊಮ್ಯಾಟೋ ಬೆಲೆ ಎಷ್ಟಿದೆ ಎಂಬುದು ನಿಮಗೆ ಮಾಹಿತಿ ಇದೆಯೇ’ ಎಂದು ಮಹಿಳೆಯರ ಪರವಾಗಿ ಪ್ರಶ್ನೆ ಕೇಳಿದ್ದಾರೆ ಕಪಿಲ್​ ಶರ್ಮಾ. ಇದಕ್ಕೆ ರಾಣಿ ಮುಖರ್ಜಿ ಇಲ್ಲ ಎನ್ನುವ ಉತ್ತರ ನೀಡಿದರು. ಇದಕ್ಕೆ ನಗುತ್ತಲೇ ಉತ್ತರ ನೀಡಿದ ಕಪಿಲ್​ ಶರ್ಮಾ, ‘ಇವರು ಇಷ್ಟು ದೊಡ್ಡ ಹೀರೋಯಿನ್​. ಟೊಮ್ಯಾಟೋಗೆ ಏಕೆ ಪ್ರಾಮುಖ್ಯತೆ ನೀಡುತ್ತಾರೆ’ ಎಂದರು.

‘ಬಂಟಿ ಔರ್​ ಬಬ್ಲಿ 2’ ಸಿನಿಮಾವನ್ನು ವರುಣ್​ ಶರ್ಮಾ ನಿರ್ದೇಶನ ಮಾಡಿದ್ದಾರೆ. ಸೈಫ್​ ಅಲಿ ಖಾನ್​, ರಾಣಿ ಮುಖರ್ಜಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ನವೆಂಬರ್​ 19ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಕಪಿಲ್​ ಶರ್ಮಾ ಶೋಗೆ ನವಜೋತ್​ ಸಿಂಗ್​ ಸಿಧು ಮರಳಿದರೆ ನಾನು ಇರಲ್ಲ ಎಂದ ಅರ್ಚನಾ ಸಿಂಗ್​

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು