AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ

ಟೊಮ್ಯಾಟೋ ದರ ಹೆಚ್ಚಾಗಿದೆ. ಕೆಲ ಕಡೆಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿವರೆಗೂ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಮಾನ್ಯರು ಟೊಮ್ಯಾಟೋ ಖರಿದಿಸೋದು ಕಷ್ಟವಾಗಿದೆ.

ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ
TV9 Web
| Edited By: |

Updated on: Nov 13, 2021 | 8:05 PM

Share

ಸ್ಟಾರ್​ ನಟ-ನಟಿಯರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ. ಮನೆಯ ಕೆಲಸ ನೋಡಿಕೊಳ್ಳೋಕೆ ಸಾಕಷ್ಟು ಸಿಬ್ಬಂದಿ ಇರುತ್ತಾರೆ. ಇವರು ಹೇಳಿದ ಅಡುಗೆ ಸಿದ್ಧವಾಗುತ್ತದೆ. ತರಕಾರಿ, ದಿನಸಿ, ಹಣ್ಣುಗಳನ್ನು ಕೆಲಸದವರೇ ತರುತ್ತಾರೆ. ಈ ಕಾರಣಕ್ಕೆ ಅದರ ಬೆಲೆಯ ಬಗ್ಗೆ ಅವರಿಗೆ ಕಿಂಚಿತ್ತೂ ಮಾಹಿತಿ ಇರುವುದಿಲ್ಲ. ಈ ವಿಚಾರ ಮತ್ತೊಮ್ಮೆ ಸಾಬೀತಾಗಿದೆ. ನಟಿ ರಾಣಿ ಮುಖರ್ಜಿ ಬಳಿ ಟೊಮ್ಯಾಟೋ ರೇಟ್​ ಕೇಳಲಾಗಿದೆ. ಇದಕ್ಕೆ ಅವರು ಸರಿಯಾದ ಉತ್ತರ ನೀಡಿದರಾ? ಇಲ್ಲ, ಈ ಪ್ರಶ್ನೆಗೆ ಉತ್ತರಿಸೋಕೆ ಅವರು ತಡವರಿಸಿದರು. ಈ ವಿಡಿಯೋ ಈಗ ವೈರಲ್​ ಆಗಿದೆ.

ಟೊಮ್ಯಾಟೋ ದರ ಹೆಚ್ಚಾಗಿದೆ. ಕೆಲ ಕಡೆಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿವರೆಗೂ ಮಾರಾಟ ಮಾಡಲಾಗುತ್ತಿದೆ. ಇದರಿಂದ ಸಾಮಾನ್ಯರು ಟೊಮ್ಯಾಟೋ ಖರೀದಿಸೋದು ಕಷ್ಟವಾಗಿದೆ. ಜನ ಸಾಮಾನ್ಯರ ಜೇಬಿಗೆ ಈ ತರಕಾರಿ ಭಾರವಾಗಿದೆ. ಹೀಗಾಗಿ, ಎಲ್ಲೆಲ್ಲೂ ಇದರದ್ದೇ ಚರ್ಚೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಟೊಮ್ಯಾಟೋ ಬೆಲೆಯನ್ನು ರಾಣಿ ಮುಖರ್ಜಿಗೆ ಕೇಳಲಾಗಿದೆ. ಅವರ ಉತ್ತರ ಹೇಗಿತ್ತು ಎಂಬುದನ್ನು ನೀವೇ ನೋಡಿ.

‘ಬಂಟಿ ಆರ್​ ಬಬ್ಲಿ 2’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಈ ಸಿನಿಮಾದ ಪ್ರಮೋಷನ್​ಗಾಗಿ ಸೈಫ್​ ಅಲಿ ಖಾನ್​, ಸಿದ್ದಾಂತ್​ ಚತುರ್ವೇದಿ, ರಾಣಿ ಮುಖರ್ಜಿ ‘ದಿ ಕಪಿಲ್​ ಶರ್ಮಾ ಶೋ’ಗೆ ಬಂದಿದ್ದರು. ಈ ಶೋನ ಪ್ರಮೋಷನ್​ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ‘ಈ ಸೆಟ್​ನಲ್ಲಿ ಸಾಕಷ್ಟು ಮಹಿಳೆಯರಿದ್ದಾರೆ. ಅವರೆಲ್ಲರೂ ನಿಮ್ಮ ಬಳಿ ಪ್ರಶ್ನೆ ಕೇಳಬೇಕು ಎಂದುಕೊಂಡಿದ್ದಾರೆ. ಟೊಮ್ಯಾಟೋ ಬೆಲೆ ಎಷ್ಟಿದೆ ಎಂಬುದು ನಿಮಗೆ ಮಾಹಿತಿ ಇದೆಯೇ’ ಎಂದು ಮಹಿಳೆಯರ ಪರವಾಗಿ ಪ್ರಶ್ನೆ ಕೇಳಿದ್ದಾರೆ ಕಪಿಲ್​ ಶರ್ಮಾ. ಇದಕ್ಕೆ ರಾಣಿ ಮುಖರ್ಜಿ ಇಲ್ಲ ಎನ್ನುವ ಉತ್ತರ ನೀಡಿದರು. ಇದಕ್ಕೆ ನಗುತ್ತಲೇ ಉತ್ತರ ನೀಡಿದ ಕಪಿಲ್​ ಶರ್ಮಾ, ‘ಇವರು ಇಷ್ಟು ದೊಡ್ಡ ಹೀರೋಯಿನ್​. ಟೊಮ್ಯಾಟೋಗೆ ಏಕೆ ಪ್ರಾಮುಖ್ಯತೆ ನೀಡುತ್ತಾರೆ’ ಎಂದರು.

‘ಬಂಟಿ ಔರ್​ ಬಬ್ಲಿ 2’ ಸಿನಿಮಾವನ್ನು ವರುಣ್​ ಶರ್ಮಾ ನಿರ್ದೇಶನ ಮಾಡಿದ್ದಾರೆ. ಸೈಫ್​ ಅಲಿ ಖಾನ್​, ರಾಣಿ ಮುಖರ್ಜಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ನವೆಂಬರ್​ 19ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಕಪಿಲ್​ ಶರ್ಮಾ ಶೋಗೆ ನವಜೋತ್​ ಸಿಂಗ್​ ಸಿಧು ಮರಳಿದರೆ ನಾನು ಇರಲ್ಲ ಎಂದ ಅರ್ಚನಾ ಸಿಂಗ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ