AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2ನೇ ಮಗು ಪಡೆಯಲು ಕಳೆದ 7 ವರ್ಷದಿಂದ ಪ್ರಯತ್ನಿಸುತ್ತಿರುವ ರಾಣಿ ಮುಖರ್ಜಿ

ನಟಿ ರಾಣಿ ಮುಖರ್ಜಿ ಅವರು ಲಾಕ್​ಡೌನ್​ಗೂ ಮುನ್ನ 2ನೇ ಬಾರಿ ಗರ್ಭಿಣಿಯಾಗಿದ್ದರು. ಇನ್ನೇನು ಎರಡನೇ ಮಗುವಿಗೆ ಜನ್ಮನೀಡುವ ಖುಷಿಯಲ್ಲಿ ಅವರಿದ್ದರು. ಆದರೆ ಆಗ ಅವರಿಗೆ ಗರ್ಭಪಾತವಾಯಿತು. ಇದರಿಂದ ಅವರಿಗೆ ಬಹಳ ನೋವಾಯಿತು. ಆ ಸಮಯವನ್ನು ತಮ್ಮ ಪರೀಕ್ಷೆಯ ಕಾಲ ಎಂದು ರಾಣಿ ಮುಖರ್ಜಿ ಅವರು ಕರೆದಿದ್ದಾರೆ.

2ನೇ ಮಗು ಪಡೆಯಲು ಕಳೆದ 7 ವರ್ಷದಿಂದ ಪ್ರಯತ್ನಿಸುತ್ತಿರುವ ರಾಣಿ ಮುಖರ್ಜಿ
ರಾಣಿ ಮುಖರ್ಜಿ
ಮದನ್​ ಕುಮಾರ್​
|

Updated on: Mar 22, 2024 | 4:23 PM

Share

ಬಾಲಿವುಡ್​ (Bollywood) ನಟಿ ರಾಣಿ ಮುಖರ್ಜಿ ಅವರು ಇತ್ತೀಚಿನ ವರ್ಷಗಳಲ್ಲಿ ಬಹಳ ಚ್ಯೂಸಿ ಆಗಿದ್ದಾರೆ. ಅಳೆದು-ತೂಗಿ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಅದಕ್ಕೆ ಅವರು ವೈಯಕ್ತಿಕ ಜೀವನ ಕೂಡ ಕಾರಣ. ತಮ್ಮ ಬದುಕಿನ ತೀರಾ ಖಾಸಗಿ ವಿಚಾರಗಳನ್ನು ಅವರೀಗ ಬಹಿರಂಗಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಷಯ ಹೇಳಿದ್ದಾರೆ. ಕಳೆದ 7 ವರ್ಷಗಳಿಂದ ಅವರು 2ನೇ ಮಗು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ಅವರಿಗೆ ಕೊರಗು ಇದೆ. ಮೊದಲ ಮಗುವಿಗೆ ಒಡಹುಟ್ಟಿದವರು ಇಲ್ಲ ಎಂಬ ಬೇಸರದಲ್ಲಿ ರಾಣಿ ಮುಖರ್ಜಿ (Rani Mukerji) ಮಾತನಾಡಿದ್ದಾರೆ.

2014ರಲ್ಲಿ ರಾಣಿ ಮುಖರ್ಜಿ ಅವರು ನಿರ್ಮಾಪಕ ಆದಿತ್ಯ ಚೋಪ್ರಾ ಜೊತೆ ಮದುವೆಯಾದರು. ಮರುವರ್ಷವೇ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆದರೆ ಇನ್ನೊಂದು ಮಗು ಪಡೆಯಬೇಕು ಎಂಬ ಅವರ ಆಸೆ ಈಡೇರಲಿಲ್ಲ. ಎರಡನೇ ಮಗುವಿಗಾಗಿ ಅವರು ಕಳೆದ 7 ವರ್ಷಗಳಿಂದ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಅವರ ಈ ಆಸೆ ಈಡೇರುತ್ತಿಲ್ಲ. ಇದಕ್ಕೆ ತಮ್ಮ ವಯಸ್ಸು (46) ಕೂಡ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ರಾಣಿ ಮುಖರ್ಜಿ ಪತಿಯ ಬಳಿ ಇದೆ 7500 ಕೋಟಿ ರೂ. ಆಸ್ತಿ; ಎರಡನೇ ಪತ್ನಿ ಆಗಲು ನಟಿ ಒಪ್ಪಿದ್ದೇಕೆ?

ಲಾಕ್​ಡೌನ್​ಗೂ ಮುನ್ನ ರಾಣಿ ಮುಖರ್ಜಿ ಅವರು ಎರಡನೇ ಬಾರಿ ಗರ್ಭಿಣಿ ಆಗಿದ್ದರು. ಇನ್ನೇನು 2ನೇ ಮಗುವಿಗೆ ಜನ್ಮನೀಡುವ ಖುಷಿಯಲ್ಲಿ ಅವರಿದ್ದರು. ಆದರೆ ಆಗ ಅವರಿಗೆ ಗರ್ಭಪಾತ ಆಯಿತು. ಇದರಿಂದ ಅವರಿಗೆ ತುಂಬ ನೋವಾಯಿತು. ಅದನ್ನು ತಮ್ಮ ಪರೀಕ್ಷೆಯ ಕಾಲ ಎಂದು ಅವರು ಕರೆದಿದ್ದಾರೆ. ಗರ್ಭಪಾತದ ಬಳಿಕ ಅವರು ‘ಮಿಸಸ್​ ಚಟರ್ಜಿ ವರ್ಸಸ್​ ನಾರ್ವೇ’ ಸಿನಿಮಾ ಒಪ್ಪಿಕೊಂಡರು. ಆ ಸಿನಿಮಾದಲ್ಲಿ ತಾಯ್ತನದ ಕಥೆ ಇತ್ತು.

ಇದನ್ನೂ ಓದಿ: ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು

‘ಈಗ ಎರಡನೇ ಮಗು ಪಡೆಯುವ ವಯಸ್ಸು ನನ್ನದಲ್ಲ. ನಮ್ಮ ಬಳಿ ಏನು ಇದೆಯೋ ಅಷ್ಟರಲ್ಲೇ ನಾವು ತೃಪ್ತಿಪಟ್ಟುಕೊಳ್ಳಬೇಕು. ಮಗಳು ಅದಿರಾ ನನ್ನ ಪಾಲಿಗೆ ವಿಸ್ಮಯದ ಮಗು. ಒಂದು ಮಗುವನ್ನೂ ಪಡೆಯಲು ಕಷ್ಟಪಡುತ್ತಿರುವ ದಂಪತಿಯನ್ನು ನೋಡಿ ನಾನು ಸಮಾಧಾನಪಟ್ಟುಕೊಳ್ಳುತ್ತೇನೆ’ ಎಂದು ರಾಣಿ ಮುಖರ್ಜಿ ಅವರು ಹೇಳಿದ್ದಾರೆ. ತಮ್ಮ ಜೀವನದ ಬಗ್ಗೆ ಅವರು ಪುಸ್ತಕ ಬರೆಯುತ್ತಿದ್ದಾರೆ. ಅದರಲ್ಲಿ ಈ ರೀತಿಯ ಹೆಚ್ಚಿನ ವಿವರಗಳನ್ನು ಹೇಳಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?