AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣಿ ಮುಖರ್ಜಿ-ಟೈಗರ್​ ಶ್ರಾಫ್​ ಈಗ ನೆರೆಹೊರೆಯವರು; ಇದಕ್ಕೆ ನಟಿ ಖರ್ಚು ಮಾಡಿದ್ದು 7 ಕೋಟಿ 

ಖಾರ್​ ಪ್ರದೇಶದಲ್ಲಿ ರಾಣಿ ಮುಖರ್ಜಿ ಫ್ಲಾಟ್​ ಖರೀದಿ ಮಾಡಿದ್ದಾರೆ. 22ನೇ ಅಂತಸ್ತಿನಲ್ಲಿ ಈ ಫ್ಲಾಟ್​ ಇದೆ. 4+3 ಬಿಎಚ್​ಕೆ ಮನೆ ಇದಾಗಿದ್ದು, ಈ ಫ್ಲಾಟ್​ನಿಂದ ಅರಬ್ಬೀ ಸಮುದ್ರ ಕಾಣುತ್ತದೆ.

ರಾಣಿ ಮುಖರ್ಜಿ-ಟೈಗರ್​ ಶ್ರಾಫ್​ ಈಗ ನೆರೆಹೊರೆಯವರು; ಇದಕ್ಕೆ ನಟಿ ಖರ್ಚು ಮಾಡಿದ್ದು 7 ಕೋಟಿ 
ರಾಣಿ ಮುಖರ್ಜಿ-ಟೈಗರ್​ ಶ್ರಾಫ್​ ಈಗ ನೆರೆಹೊರೆಯವರು; ಇದಕ್ಕೆ ನಟಿ ಖರ್ಚು ಮಾಡಿದ್ದು 7 ಕೋಟಿ 
Follow us
TV9 Web
| Updated By: ಮದನ್​ ಕುಮಾರ್​

Updated on: Aug 12, 2021 | 7:29 AM

ಬಾಲಿವುಡ್​​ನಲ್ಲಿ ಗುರುತಿಸಿಕೊಂಡ ನಂತರದಲ್ಲಿ ಸಾಕಷ್ಟು ನಟ-ನಟಿಯರು ಮನೆ ಕೊಂಡುಕೊಳ್ಳೋಕೆ ಆಸಕ್ತಿ ತೋರುತ್ತಾರೆ. ಅದೇ ರೀತಿ ಅನೇಕ ಸ್ಟಾರ್​ಗಳು ಮುಂಬೈನ ದುಬಾರಿ ಏರಿಯಾದಲ್ಲಿ ಮನೆ ಖರೀದಿ ಮಾಡಿದ್ದಾರೆ. ಈಗ ನಟಿ ರಾಣಿ ಮುಖರ್ಜಿ ಸರದಿ. ಅವರು ಮುಂಬೈನಲ್ಲಿ ಮನೆಯೊಂದನ್ನು ಖರೀದಿ ಮಾಡಿದ್ದಾರೆ.

ರಾಣಿ ಮುಖರ್ಜಿ ಬಾಲಿವುಡ್​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. 90ರ ದಶಕದಲ್ಲಿ ಸಿನಿಪ್ರಿಯರ ಹೃದಯ ಕದ್ದವರು ರಾಣಿ ಮುಖರ್ಜಿ. ಈಗಲೂ ಅವರಿಗೆ ಬಾಲಿವುಡ್​ನಲ್ಲಿ ಬೇಡಿಕೆ ಇದೆ. ನೋ ಒನ್​ ಕಿಲ್ಲಡ್​ ಜಸ್ಸಿಕಾ ಚಿತ್ರದಲ್ಲಿ ಜರ್ನಲಿಸ್ಟ್​ ಪಾತ್ರದಲ್ಲಿ ಅವರು ಮಿಂಚಿದ್ದರು. ಈಗ ರಾಣಿ ಮುಖರ್ಜಿ ಹಾಗೂ ಟೈಗರ್​ ಶ್ರಾಫ್​ ನೆರೆ ಹೊರೆಯವರಾಗಿದ್ದಾರೆ.

ಖಾರ್​ ಪ್ರದೇಶದಲ್ಲಿ ರಾಣಿ ಮುಖರ್ಜಿ ಫ್ಲಾಟ್​ ಖರೀದಿ ಮಾಡಿದ್ದಾರೆ. 22ನೇ ಅಂತಸ್ತಿನಲ್ಲಿ ಈ ಫ್ಲಾಟ್​ ಇದೆ. 4+3 ಬಿಎಚ್​​ಕೆ ಮನೆ ಇದಾಗಿದ್ದು, ಈ ಫ್ಲಾಟ್​ನಿಂದ ಅರಬ್ಬೀ ಸಮುದ್ರ ಕಾಣುತ್ತದೆ. ಇದಕ್ಕೆ ಅವರು ಬರೋಬ್ಬರಿ 7.12 ಕೋಟಿ ರೂಪಾಯಿ ನೀಡಿದ್ದಾರೆ. ಇದೇ ಅಪಾರ್ಟ್​ಮೆಂಟ್​ನಲ್ಲಿ ಟೈಗರ್​ ಶ್ರಾಫ್​ ಫ್ಲ್ಯಾಟ್​ ಕೂಡ ಇದೆ ಎಂದು ತಿಳಿದು ಬಂದಿದೆ.

‘ಮರ್ದಾನಿ 2’ ಸಿನಿಮಾದಲ್ಲಿ ರಾಣಿ ಮುಖರ್ಜಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾ 2019ರ ಡಿಸೆಂಬರ್ ತಿಂಗಳಲ್ಲಿ ತೆರೆಗೆ ಬಂದಿತ್ತು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆ ಮಾಡಿತ್ತು. ಸದ್ಯ ಅವರು ‘ಬಂಟಿ ಔರ್​​ ಬಬ್ಲಿ 2’ ಹಾಗೂ Mrs.ಚಟರ್ಜಿ vs ನಾರ್ವೆ ಫಿಲ್ಮ್ಸ್​​​ ಚಿತ್ರದಲ್ಲಿ ರಾಣಿ ಮುಖರ್ಜಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಅಮಿತಾಭ್​ ಬಚ್ಚನ್​, ಅರ್ಜುನ್​ ಕಪೂರ್​ ಹಾಗೂ ಅಜಯ್​ ದೇವಗನ್​-ಕಾಜೊಲ್​ ಮುಂಬೈನಲ್ಲಿ ಹೊಸ ಮನೆ ಖರೀದಿ ಮಾಡಿ ಸುದ್ದಿಯಾಗಿದ್ದರು. ಈಗ ರಾಣಿ ಮುಖರ್ಜಿ ಕೂಡ ಈ ಸಾಲಿಗೆ ಸೇರ್ಪಡೆ ಆಗಿದ್ದಾರೆ.

ಇದನ್ನೂ ಓದಿ:

 ಟೋಕಿಯೋ ಒಲಂಪಿಕ್ಸ್​ನಲ್ಲಿ ಮೊಳಗಿತು ಬಾಲಿವುಡ್​ ಹಾಡು; ಅಚ್ಚರಿಗೊಂಡ ಭಾರತೀಯರು

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು

ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಭಾರಿ ಮಳೆಗೆ ಜಮಖಂಡಿ ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು