AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rani Mukherjee: ‘ಪಠಾಣ್​’ ಚಿತ್ರವನ್ನೇ ಮೀರಿಸಿ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮಾಡಿದ ರಾಣಿ ಮುಖರ್ಜಿ ನಟನೆಯ ಹೊಸ ಸಿನಿಮಾ

Mrs Chatterjee Vs Norway: ‘ಮಿಸಸ್​ ಚಟರ್ಜಿ ವರ್ಸಸ್​ ನಾರ್ವೇ’ ಸಿನಿಮಾದಿಂದಾಗಿ ರಾಣಿ ಮುಖರ್ಜಿ ಅವರಿಗೆ ಗೆಲುವು ಸಿಕ್ಕಂತಾಗಿದೆ. ನಾರ್ವೇ ಮಾತ್ರವಲ್ಲದೇ ಇತರೆ ದೇಶಗಳಲ್ಲೂ ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

Rani Mukherjee: ‘ಪಠಾಣ್​’ ಚಿತ್ರವನ್ನೇ ಮೀರಿಸಿ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮಾಡಿದ ರಾಣಿ ಮುಖರ್ಜಿ ನಟನೆಯ ಹೊಸ ಸಿನಿಮಾ
ರಾಣಿ ಮುಖರ್ಜಿ, ಶಾರುಖ್ ಖಾನ್
ಮದನ್​ ಕುಮಾರ್​
|

Updated on:Mar 22, 2023 | 3:51 PM

Share

ಶಾರುಖ್​ ಖಾನ್​ ಅಭಿನಯದ ‘ಪಠಾಣ್​’ ಚಿತ್ರವು ಬಾಕ್ಸ್​ ಆಫೀಸ್​ನಲ್ಲಿ ಮಾಡಿದ ಸಾಧನೆ ದೊಡ್ಡದು. ವಿಶ್ವ ಮಾರುಕಟ್ಟೆಯಲ್ಲಿ ಈ ಸಿನಿಮಾ ಸಾವಿರಾರು ರೂಪಾಯಿ ಗಳಿಸಿದೆ. ಇದರಿಂದ ಶಾರುಖ್​ ಖಾನ್ (Shah Rukh Khan)​ ಅವರು ಭರ್ಜರಿಯಾಗಿ ಕಮ್​ಬ್ಯಾಕ್​ ಮಾಡಿದ್ದಾರೆ. ಬಾಲಿವುಡ್​ನಲ್ಲಿ ಅವರ ಹವಾ ಹೆಚ್ಚಿದೆ. ಆದರೆ ಈಗೊಂದು ಅಚ್ಚರಿ ಸುದ್ದಿ ಕೇಳಿಬಂದಿದೆ. ‘ಪಠಾಣ್​’ ಸಿನಿಮಾವನ್ನೂ ಮೀರಿಸುವ ರೀತಿಯಲ್ಲಿ ರಾಣಿ ಮುಖರ್ಜಿ (Rani Mukherjee) ಅವರ ಹೊಸ ಸಿನಿಮಾ ಅಬ್ಬರಿಸಿದೆ. ಆದರೆ ಅದು ಭಾರತದಲ್ಲಿ ಅಲ್ಲ. ಬದಲಿಗೆ, ನಾರ್ವೆಯಲ್ಲಿ ಎಂಬುದು ವಿಶೇಷ. ಹೌದು, ‘ಮಿಸಸ್​ ಚಟರ್ಜಿ ವರ್ಸಸ್​ ನಾರ್ವೇ’ (Mrs Chatterjee Vs Norway) ಸಿನಿಮಾ ನಾರ್ವೇಯಲ್ಲಿ ತೆರೆಕಂಡು ಸೂಪರ್​ ಹಿಟ್​ ಆಗಿದೆ. ನಾರ್ವೇಯಲ್ಲಿ ಬಿಡುಗಡೆಯಾದ ಹಿಂದಿ ಸಿನಿಮಾಗಳ ಪೈಕಿ ವೀಕೆಂಡ್​ನಲ್ಲಿ ಅತಿ ಕಲೆಕ್ಷನ್​ ಮಾಡಿದ ಖ್ಯಾತಿ ಈ ಸಿನಿಮಾಗೆ ಸಲ್ಲುತ್ತದೆ. ಈ ಕುರಿತು ಚಿತ್ರತಂಡದವರು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಸ್ಕ್ರಿಪ್ಟ್​ ಆಯ್ಕೆಯಲ್ಲಿ ರಾಣಿ ಮುಖರ್ಜಿ ಅವರು ಸಾಕಷ್ಟು ಕಾಳಜಿ ವಹಿಸುತ್ತಿದ್ದಾರೆ. ತಮ್ಮ ವಯಸ್ಸಿಗೆ ಒಪ್ಪುವಂತಹ ಪಾತ್ರಗಳನ್ನಷ್ಟೇ ಅವರು ಮಾಡುತ್ತಿದ್ದಾರೆ. ‘ಮಿಸಸ್ ಚಟರ್ಜಿ ವರ್ಸಸ್​ ನಾರ್ವೇ’ ಸಿನಿಮಾದಲ್ಲಿ ಅವರು ಎರಡು ಮಕ್ಕಳ ತಾಯಿಯಾಗಿ ನಟಿಸಿದ್ದಾರೆ. ನಾರ್ವೇಯಲ್ಲಿ ಮಕ್ಕಳನ್ನು ಕಳೆದುಕೊಂಡು ಕಷ್ಟಪಡುವ ಭಾರತೀಯ ಮಹಿಳೆಯಾಗಿ ಅವರು ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ
Image
Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​
Image
Kangana Ranaut: ‘ಪಠಾಣ್​’ ಸೂಪರ್​ ಹಿಟ್​; ‘ಚಿತ್ರರಂಗ ಇರೋದು ಹಣ ಮಾಡೋಕಲ್ಲ’ ಅಂತ ಕೊಂಕು ನುಡಿದ ಕಂಗನಾ
Image
Pathaan Review: ದೇಶಭಕ್ತಿಯಲ್ಲಿ ಮಿಂದೆದ್ದ ‘ಪಠಾಣ್​’; ಶಾರುಖ್​ ಫ್ಯಾನ್ಸ್​ಗೆ ಹಬ್ಬ, ಆ್ಯಕ್ಷನ್ ಪ್ರಿಯರಿಗೆ ಮಸ್ತ್ ಮನರಂಜನೆ
Image
Pathaan Movie Twitter Review: ‘ಹೈ ವೋಲ್ಟೇಜ್ ಆ್ಯಕ್ಷನ್ ಸಿನಿಮಾ’; ‘ಪಠಾಣ್​’ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ಇದನ್ನೂ ಓದಿ: ರಾಣಿ ಮುಖರ್ಜಿ ಅಜ್ಜಿ ಆರತಿ ರಾಯ್ ನಿಧನ; ಸಂತಾಪ ಸೂಚಿಸಿದ ಬೆಂಗಾಲಿ ಚಿತ್ರರಂಗ

ನೈಜ ಘಟನೆಗಳನ್ನು ಆಧರಿಸಿ ‘ಮಿಸಸ್ ಚಟರ್ಜಿ ವರ್ಸಸ್​ ನಾರ್ವೇ’ ಸಿನಿಮಾ ತಯಾರಾಗಿದೆ. ಇದು ನಾರ್ವೇ ಸರ್ಕಾರ ಮತ್ತು ಅಲ್ಲಿನ ಪ್ರಜೆಗಳಿಗೂ ಸಂಬಂಧಿಸಿದ ಕತೆ ಆದ್ದರಿಂದ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಿದ್ದಾರೆ. ಪರಿಣಾಮವಾಗಿ ನಾರ್ವೇ ಬಾಕ್ಸ್​ ಆಫೀಸ್​ನಲ್ಲಿ ‘ಪಠಾಣ್​’ ಚಿತ್ರಕ್ಕಿಂತಲೂ ಹೆಚ್ಚಿನ ಗಳಿಕೆಯನ್ನು ಈ ಸಿನಿಮಾ ಮಾಡಿದೆ.

ಇದನ್ನೂ ಓದಿ: ವೇದಿಕೆ ಮೇಲೆ ರಾಣಿ ಮುಖರ್ಜಿಗೆ ಟೊಮ್ಯಾಟೋ ರೇಟ್​ ಕೇಳಿದ ಮಹಿಳೆಯರು; ಉತ್ತರ ಹೇಳಲು ತಡವರಿಸಿದ ನಟಿ

ನಾರ್ವೆಯ ಚಿತ್ರಮಂದಿರಗಳಲ್ಲಿ ಮೊದಲ ಮೂರು ದಿನ ಉತ್ತಮ ಪ್ರದರ್ಶನ ಕಂಡಿರುವ ಈ ಸಿನಿಮಾ ಅಂದಾಜು 58 ಲಕ್ಷ ರೂಪಾಯಿ ಕಮಾಯಿ ಮಾಡಿದೆ. ಈ ಹಿಂದೆ ‘ಪಠಾಣ್​’, ‘ರಯೀಸ್​’, ‘ಸುಲ್ತಾನ್​’ ಸಿನಿಮಾಗಳು ನಾರ್ವೆಯಲ್ಲಿ ಅಬ್ಬರಿಸಿದ್ದವು. ಆ ಸಿನಿಮಾಗಳನ್ನೂ ಮೀರಿಸಿ ‘ಮಿಸಸ್ ಚಟರ್ಜಿ ವರ್ಸಸ್​ ನಾರ್ವೇ’ ಸಿನಿಮಾ ದಾಖಲೆ ಬರೆದಿದೆ.

ಈ ಸಿನಿಮಾದಿಂದಾಗಿ ರಾಣಿ ಮುಖರ್ಜಿ ಅವರಿಗೆ ಗೆಲುವು ಸಿಕ್ಕಂತಾಗಿದೆ. ಅವರ ಅಭಿಮಾನಿಗಳು ಚಿತ್ರ ನೋಡಿ ಮೆಚ್ಚಿಕೊಂಡಿದ್ದಾರೆ. ನಾರ್ವೇ ಮಾತ್ರವಲ್ಲದೇ ಬೇರೆ ಬೇರೆ ದೇಶಗಳಲ್ಲೂ ಈ ಸಿನಿಮಾಗೆ ಮೆಚ್ಚುಗೆ ವ್ಯಕ್ತವಾಗಿದೆ. ಅನಿರ್ಬನ್​ ಭಟ್ಟಾಚಾರ್ಯ, ಜಿಮ್​ ಸರ್ಬ್​ ಮುಂತಾದವರು ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ಆಶಿಮಾ ಚಿಬ್ಬರ್​ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:43 pm, Wed, 22 March 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ