AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ‘ಕನ್ನಡತಿ’ ರಂಜನಿ ರಾಘವನ್ ಕಷ್ಟದ ದಿನಗಳು ಹೇಗಿದ್ದವು?

Ranjani Raghavan: ‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆ-ಮನಗಳನ್ನು ಸೇರಿದ್ದಾರೆ ನಟಿ ರಂಜನಿ ರಾಘವನ್. ಆದರೆ ನಟಿಯಾಗಬೇಕೆಂಬ ಆಸೆ ಹೊತ್ತಿದ್ದ ರಂಜನಿ ಅದನ್ನು ನನಸು ಮಾಡಿಕೊಳ್ಳಲು ಸಾಕಷ್ಟು ಶ್ರಮ ಪಟ್ಟಿದ್ದಾರೆ.

Ranjani Raghavan: ‘ಕನ್ನಡತಿ’ ರಂಜನಿ ರಾಘವನ್ ಕಷ್ಟದ ದಿನಗಳು ಹೇಗಿದ್ದವು?
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 26, 2024 | 7:03 AM

Share

ನಟಿ ರಂಜನಿ ರಾಘವನ್ ಅವರು ಕಲಾವಿದೆಯಾಗಿ, ಬರಹಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಅವರ ಗಮನ ಸೆಳೆದಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಅವರು ನಟನಾ ಕ್ಷೇತ್ರಕ್ಕೆ ಬರುವುದಕ್ಕೂ ಮೊದಲು ಖ್ಯಾತ ನಿರ್ದೇಶಕರಿಗೆ ಸೋಶಿಯಲ್ ಮೀಡಿಯಾ ಮೂಲಕ ಸಂದೇಶ ಕಳುಹಿಸುತ್ತಿದ್ದರು. ಆದರೆ, ಅವರಿಗೆ ಯಾರಿಂದಲೂ ಉತ್ತರ ಮಾತ್ರ ಬಂದಿರಲಿಲ್ಲ. ಈ ಬಗ್ಗೆ ರಂಜನಿ ರಾಘವನ್ ಅವರು ಹೇಳಿಕೊಂಡಿದ್ದಾರೆ. ಆ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ.

2012ರ ‘ಕೆಳದಿ ಚೆನ್ನಮ್ಮ’ ಧಾರಾವಾಹಿ ಮೂಲಕ ರಂಜನಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಆಕಾಶ ದೀಪ’ ಧಾರಾವಾಹಿಯಲ್ಲೂ ನಟಿಸಿದರು. ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ಗೌರಿ ಪಾತ್ರ ಮಾಡಿ ಜನಪ್ರಿಯತೆ ಪಡೆದರು. 2020ರಿಂದ 23ರ ಅವಧಿಯಲ್ಲಿ ಪ್ರಸಾರ ಕಂಡ ‘ಕನ್ನಡತಿ’ ಧಾರಾವಾಹಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತ್ತು. ಅವರು ಸಿನಿಮಾಗಳಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ:ಧಾರವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ

2017ರ ‘ರಾಜಹಂಸ’ ಚಿತ್ರದಲ್ಲಿ ಪಾತ್ರ ಒಂದನ್ನು ಮಾಡಿದರು. ಇದು ಅವರ ನಟನೆಯ ಮೊದಲ ಸಿನಿಮಾ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಹಕುನಾ ಮಟಾಟ (ಸೀರಿಸ್)’, ‘ನೈಟ್ ಕರ್ಫ್ಯೂ’, ‘ಕಾಂಗರೂ’ ಸಿನಿಮಾಗಳಲ್ಲಿ ರಂಜನಿ ರಾಘವನ್ ನಟಿಸಿದ್ದಾರೆ. ಅವರು ನಟನೆಗೆ ಬರೋದಕ್ಕೂ ಮೊದಲು ನಿರ್ದೇಶಕರ ಬಳಿ ಅವಕಾಶಕ್ಕಾಗಿ ಬೇಡಿಕೆ ಇಟ್ಟಿದ್ದರು.

ನಟನೆಗೆ ಬರೋದಕ್ಕೂ ಮೊದಲು ನಿರ್ದೇಶಕರಿಗೆ ರಂಜನಿ ಮೆಸೇಜ್ ಮಾಡುತ್ತಿದ್ದರು. ನಿಮ್ಮ ಸಿನಿಮಾಗಳು ಇಷ್ಟ ಆಗಿವೆ ನಮಗೂ ಅವಕಾಶ ನೀಡಿ ಎಂದು ಕೇಳುತ್ತಿದ್ದರು. ಆದರೆ, ಯಾವುದೇ ನಿರ್ದೇಶಕರು ಅವರಿಗೆ ಈ ಮೆಸೇಜ್ ನೋಡಿ ಅವಕಾಶ ಕೊಟ್ಟಿಲ್ಲ. ಸದ್ಯ ರಂಜನಿ ಅವರು ‘ಸತ್ಯಂ’ ಹಾಗೂ ‘ಸ್ವಪ್ನ ಮಂಟಪ’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಅಲ್ಲದೆ, ಅಭಿಮಾನಿಗಳ ಸಂದೇಶಗಳಿಗೆ ಅವರು ಉತ್ತರ ನೀಡುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sun, 25 August 24

ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ