AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranjani Raghavan: ‘ಕನ್ನಡತಿ’ ರಂಜನಿ ರಾಘವನ್ ಕಷ್ಟದ ದಿನಗಳು ಹೇಗಿದ್ದವು?

Ranjani Raghavan: ‘ಕನ್ನಡತಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆ-ಮನಗಳನ್ನು ಸೇರಿದ್ದಾರೆ ನಟಿ ರಂಜನಿ ರಾಘವನ್. ಆದರೆ ನಟಿಯಾಗಬೇಕೆಂಬ ಆಸೆ ಹೊತ್ತಿದ್ದ ರಂಜನಿ ಅದನ್ನು ನನಸು ಮಾಡಿಕೊಳ್ಳಲು ಸಾಕಷ್ಟು ಶ್ರಮ ಪಟ್ಟಿದ್ದಾರೆ.

Ranjani Raghavan: ‘ಕನ್ನಡತಿ’ ರಂಜನಿ ರಾಘವನ್ ಕಷ್ಟದ ದಿನಗಳು ಹೇಗಿದ್ದವು?
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Aug 26, 2024 | 7:03 AM

Share

ನಟಿ ರಂಜನಿ ರಾಘವನ್ ಅವರು ಕಲಾವಿದೆಯಾಗಿ, ಬರಹಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ‘ಕನ್ನಡತಿ’ ಧಾರಾವಾಹಿ ಮೂಲಕ ಅವರ ಗಮನ ಸೆಳೆದಿದ್ದಾರೆ. ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಅವರು ನಟನಾ ಕ್ಷೇತ್ರಕ್ಕೆ ಬರುವುದಕ್ಕೂ ಮೊದಲು ಖ್ಯಾತ ನಿರ್ದೇಶಕರಿಗೆ ಸೋಶಿಯಲ್ ಮೀಡಿಯಾ ಮೂಲಕ ಸಂದೇಶ ಕಳುಹಿಸುತ್ತಿದ್ದರು. ಆದರೆ, ಅವರಿಗೆ ಯಾರಿಂದಲೂ ಉತ್ತರ ಮಾತ್ರ ಬಂದಿರಲಿಲ್ಲ. ಈ ಬಗ್ಗೆ ರಂಜನಿ ರಾಘವನ್ ಅವರು ಹೇಳಿಕೊಂಡಿದ್ದಾರೆ. ಆ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ.

2012ರ ‘ಕೆಳದಿ ಚೆನ್ನಮ್ಮ’ ಧಾರಾವಾಹಿ ಮೂಲಕ ರಂಜನಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ‘ಆಕಾಶ ದೀಪ’ ಧಾರಾವಾಹಿಯಲ್ಲೂ ನಟಿಸಿದರು. ‘ಪುಟ್ಟಗೌರಿ ಮದುವೆ’ ಧಾರಾವಾಹಿಯಲ್ಲಿ ಗೌರಿ ಪಾತ್ರ ಮಾಡಿ ಜನಪ್ರಿಯತೆ ಪಡೆದರು. 2020ರಿಂದ 23ರ ಅವಧಿಯಲ್ಲಿ ಪ್ರಸಾರ ಕಂಡ ‘ಕನ್ನಡತಿ’ ಧಾರಾವಾಹಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತ್ತು. ಅವರು ಸಿನಿಮಾಗಳಲ್ಲೂ ನಟಿಸಿದ್ದಾರೆ.

ಇದನ್ನೂ ಓದಿ:ಧಾರವಾಹಿಯಲ್ಲಿ ದೈವಾರಾಧನೆ ಪ್ರದರ್ಶನ; ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ

2017ರ ‘ರಾಜಹಂಸ’ ಚಿತ್ರದಲ್ಲಿ ಪಾತ್ರ ಒಂದನ್ನು ಮಾಡಿದರು. ಇದು ಅವರ ನಟನೆಯ ಮೊದಲ ಸಿನಿಮಾ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’, ‘ಹಕುನಾ ಮಟಾಟ (ಸೀರಿಸ್)’, ‘ನೈಟ್ ಕರ್ಫ್ಯೂ’, ‘ಕಾಂಗರೂ’ ಸಿನಿಮಾಗಳಲ್ಲಿ ರಂಜನಿ ರಾಘವನ್ ನಟಿಸಿದ್ದಾರೆ. ಅವರು ನಟನೆಗೆ ಬರೋದಕ್ಕೂ ಮೊದಲು ನಿರ್ದೇಶಕರ ಬಳಿ ಅವಕಾಶಕ್ಕಾಗಿ ಬೇಡಿಕೆ ಇಟ್ಟಿದ್ದರು.

ನಟನೆಗೆ ಬರೋದಕ್ಕೂ ಮೊದಲು ನಿರ್ದೇಶಕರಿಗೆ ರಂಜನಿ ಮೆಸೇಜ್ ಮಾಡುತ್ತಿದ್ದರು. ನಿಮ್ಮ ಸಿನಿಮಾಗಳು ಇಷ್ಟ ಆಗಿವೆ ನಮಗೂ ಅವಕಾಶ ನೀಡಿ ಎಂದು ಕೇಳುತ್ತಿದ್ದರು. ಆದರೆ, ಯಾವುದೇ ನಿರ್ದೇಶಕರು ಅವರಿಗೆ ಈ ಮೆಸೇಜ್ ನೋಡಿ ಅವಕಾಶ ಕೊಟ್ಟಿಲ್ಲ. ಸದ್ಯ ರಂಜನಿ ಅವರು ‘ಸತ್ಯಂ’ ಹಾಗೂ ‘ಸ್ವಪ್ನ ಮಂಟಪ’ ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ.

ರಂಜನಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಅಲ್ಲದೆ, ಅಭಿಮಾನಿಗಳ ಸಂದೇಶಗಳಿಗೆ ಅವರು ಉತ್ತರ ನೀಡುತ್ತಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sun, 25 August 24

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!