AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾನು ಮಂಡಲ್​ ಜೀವನ ಆಧರಿಸಿ ಬರಲಿದೆ ಬಯೋಪಿಕ್; ಇದರಲ್ಲಿ ಮುಖ್ಯಭೂಮಿಕೆ ಯಾರದ್ದು?  ​

ರಾನು ಮಂಡಲ್​ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರ ‘ಏಕ್​ ಪ್ಯಾರ್​ ಕಾ ನಗ್ಮಾ ಹೈ..’ ಹಾಡನ್ನು ರೈಲು ನಿಲ್ದಾಣದಲ್ಲಿ ಹಾಡಿದ್ದರು. ಇದನ್ನು ಕೆಲವರು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.

ರಾನು ಮಂಡಲ್​ ಜೀವನ ಆಧರಿಸಿ ಬರಲಿದೆ ಬಯೋಪಿಕ್; ಇದರಲ್ಲಿ ಮುಖ್ಯಭೂಮಿಕೆ ಯಾರದ್ದು?  ​
Ranu Mandal Biopic Bollywood to Comeup with Ranu Mandal Biopic
TV9 Web
| Edited By: |

Updated on: Sep 04, 2021 | 8:13 PM

Share

ಸೋಶಿಯಲ್​ ಮೀಡಿಯಾದಲ್ಲಿ ರಾನು ಮಂಡಲ್​ ಹೊಸ ಸಂಚಲನ ಸೃಷ್ಟಿ ಮಾಡಿದ್ದರು. ಅವರ ಹಾಡನ್ನು ಕೇಳಿ ಗಾಯಕ ಹಿಮೇಶ್​ ರೇಷಮಿಯಾ​ ಕೂಡ ಫಿದಾ ಆಗಿದ್ದರು. ಆದರೆ, ಕೆಲವೇ ತಿಂಗಳಲ್ಲಿ ಅವರು ಮೂಲೆಗುಂಪಾದರು. ಅವರ ಬಗ್ಗೆ ನಾನಾ ಸುದ್ದಿಗಳು ಹರಿದಾಡೋಕೆ ಆರಂಭವಾದವು. ಈಗ ರಾನು ಮಂಡಲ್​ ಕುರಿತಾಗಿ ಬಯೋಪಿಕ್​ ಸಿದ್ಧಗೊಳ್ಳುತ್ತಿದೆ. ಈ ವಿಚಾರ ನೆಟ್ಟಿಗರಿಗೆ ಕೊಂಚ ಅಚ್ಚರಿ ನೀಡಿದ್ದಂತೂ ಸತ್ಯ.

ರಾನು ಮಂಡಲ್​ ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ ಅವರ ‘ಏಕ್​ ಪ್ಯಾರ್​ ಕಾ ನಗ್ಮಾ ಹೈ..’ ಹಾಡನ್ನು ರೈಲು ನಿಲ್ದಾಣದಲ್ಲಿ ಹಾಡಿದ್ದರು. ಇದನ್ನು ಕೆಲವರು ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಇದು ಕೆಲವೇ ದಿನಗಳಲ್ಲಿ ಸಾಕಷ್ಟು ವೈರಲ್​ ಆಗಿತ್ತು. ಅನೇಕರು ರಾನು ಗಾಯನವನ್ನು ಕೊಂಡಾಡಿದ್ದರು. ರಾನು ರಾತ್ರಿ ಬೆಳಗಾಗುವುದರೊಳಗೆ ಸೋಶಿಯಲ್​ ಮೀಡಿಯಾ ಸ್ಟಾರ್​ ಆದರು.

ಹಿಮೇಶ್​ ಅವರು ‘ತೇರಿ ಮೇರಿ ಕಹಾನಿ..’ ಹಾಡು ಹೇಳೋಕೆ ರಾನುಗೆ ಅವಕಾಶ ನೀಡಿದ್ದರು. ಇದಾದ ನಂತರದಲ್ಲಿ ಸಾಕಷ್ಟು ಶೋಗಳಿಗೆ ಅತಿಥಿ​ ಆಗುವ ಅವಕಾಶ ಅವರಿಗೆ ಸಿಕ್ಕಿತ್ತು. ಇದೆಲ್ಲವನ್ನೂ ಅವರು ಬೇಡ ಎನ್ನಲೇ ಇಲ್ಲ. ಈಗ ರಾನು ಜೀವನದ ಕಥೆ ಬಯೋಪಿಕ್​ ಆಗುತ್ತಿದೆ. ರಿಶಿಕೇಶ್​ ಮಂಡಲ್​ ಅವರು ಈ ಬಯೋಪಿಕ್​ ನಿರ್ದೇಶನ ಮಾಡುತ್ತಿದ್ದಾರೆ. ಇಶಿಕಾ ಡೇ ಅವರು ರಾನು ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮಿಸ್​ ರಾನು ಮರಿಯಾ’ ಎಂದು ಸಿನಿಮಾಗೆ ಟೈಟಲ್​ ಫಿಕ್ಸ್​ ಮಾಡಲಾಗಿದೆ.

ರಾನು ಪಶ್ಚಿಮ ಬಂಗಾಳದವರು. ಹೀಗಾಗಿ, ಬೆಂಗಾಲಿ ಭಾಷೆಯಲ್ಲಿ ಮಾತ್ರ ಈ ಸಿನಿಮಾ ಮಾಡುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ರಾನುಗೆ ದೇಶಾದ್ಯಂತ ಪ್ರಚಾರ ಸಿಕ್ಕಿದೆ. ಈ ಕಾರಣಕ್ಕೆ ಹಿಂದಿ ಭಾಷೆಯಲ್ಲೂ ಸಿನಿಮಾ ಮಾಡುವ ಆಲೋಚನೆ ಚಿತ್ರತಂಡಕ್ಕೆ ಬಂದಿದೆ. ಹಿಮೇಶ್​ ಕೂಡ ಈ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ.  ಮುಂದಿನ ಮಾರ್ಚ್​ ಅಥವಾ ಏಪ್ರಿಲ್​ ವೇಳೆಗೆ ಸಿನಿಮಾ ರಿಲೀಸ್​ ಆಗುವ ನಿರೀಕ್ಷೆ ಇದೆ.  ಈ ಬಯೋಪಿಕ್​ ವಿಚಾರ ಅನೇಕರಲ್ಲಿ ಅಚ್ಚರಿ ಮೂಡಿಸಿದೆ. ಈ ಸಿನಿಮಾ ಹೇಗಿರಬಹುದು ಎನ್ನುವ ಪ್ರಶ್ನೆ ಪ್ರೇಕ್ಷಕರನ್ನು ಕೊರೆಯೋಕೆ ಆರಂಭಿಸಿದೆ.

ಇದನ್ನೂ ಓದಿ: ‘ಮೇಘನಾಳನ್ನು ನಾವು ನೋಡಿಕೊಳ್ತೀವಿ, ಬೇರೆ ಯಾರೂ ಬೇಡ’; ಪ್ರಮೀಳಾ ಜೋಷಾಯ್​ ನೇರ​ ಮಾತು

ಯಾವ ಬ್ರಾ ತೊಡುತ್ತೀರಿ ಎಂದು ಹೀರೋಯಿನ್ಅನ್ನು​ ಪ್ರಶ್ನಿಸಿದ ಅಭಿಮಾನಿ; ಮುಜುಗರ ಇಲ್ಲದೆ ಉತ್ತರಿಸಿದ 19 ವರ್ಷದ ನಟಿ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?