AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಈ ನಿರ್ದೇಶಕರ ಜೊತೆ ಸಿನಿಮಾ ಮಾಡಲು ರಣವೀರ್ ಸಿಂಗ್ ಮುಂದಾಗಿದ್ದಾರೆ

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Jan 28, 2024 | 2:20 PM

Share

ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಗಲಿಲ್ಲ. ಅವರು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದಾರೆ. ‘ಡಾನ್ 3’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆ ಅವರು ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲು ರೆಡಿ ಆಗುತ್ತಿದ್ದಾರೆ. ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಬಗ್ಗೆ ನಂಬಿಕೆ ಬಂದಿದೆ. ಈ ಕಾರಣದಿಂದ ಅವರು ಹಲವು ಸ್ಟಾರ್ ಡೈರೆಕ್ಟರ್ ಜೊತೆ ಮಾತುಕತೆ ನಡೆಸಲು ಆರಂಭಿಸಿದ್ದಾರೆ ಎಂದು ವರದಿ ಆಗಿದೆ. ಶೀಘ್ರದಲ್ಲೇ ಅವರು ಒಂದು ಸಿನಿಮಾ ಫೈನಲ್ ಮಾಡುವ ನಿರೀಕ್ಷೆ ಇದೆ.

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಇಬ್ಬರೂ ದಕ್ಷಿಣ ಭಾರತದ ನಿರ್ದೇಶಕರು. ಹೀಗಾಗಿ, ರಣವೀರ್ ಸಿಂಗ್ ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಮೇಲೆ ಭರವಸೆ ಮೂಡಿದೆ. ಅಟ್ಲಿ ಜೊತೆ ಕೆಲಸ ಮಾಡಬೇಕು ಎಂಬುದು ರಣವೀರ್ ಸಿಂಗ್ ಆಸೆ ಎನ್ನಲಾಗಿದೆ.

ಅಟ್ಲಿ ಅವರು ವರುಣ್ ಧವನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಆ ಬಳಿಕ ಅಲ್ಲು ಅರ್ಜುನ್ ಜೊತೆ ಅವರು ಸಿನಿಮಾ ಮಾಡಬೇಕಿದೆ. ಈ ಮಧ್ಯೆ ರಣವೀರ್ ಸಿಂಗ್ ಕೂಡ ಅವಕಾಶ ಕೇಳಲು ಮುಂದೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್​, ‘ಘಜಿನಿ’ ಡೈರೆಕ್ಟರ್ ಎಆರ್​ ಮುರುಗದಾಸ್ ಜೊತೆಗೂ ರಣವೀರ್ ಸಿಂಗ್ ಮಾತುಕತೆ ನಡೆಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಮಾತುಕತೆಗಳು ನಡೆಯಲಿವೆ. ಹಿಂದಿ ಜೊತೆ ದಕ್ಷಿಣ ಭಾರತದ ಭಾಷೆಗಳಲ್ಲೂ ಸಿನಿಮಾ ಬರಲಿದೆ. ಲೋಕೇಶ್ ಕನಗರಾಜ್ ಅವರು ರಜನಿಕಾಂತ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಸ್ಮಶಾನವಾದ ಮದುವೆ ಮನೆ; ರಣವೀರ್ ಸಿಂಗ್ ಸಿನಿಮಾದಲ್ಲಿ ಬಳಕೆ ಆಗಿದ್ದ ಮನೆಯಲ್ಲಿ ಶೂಟೌಟ್​

ರಣವೀರ್ ಸಿಂಗ್ ನಟಿಸುತ್ತಿರುವ ‘ಡಾನ್ 3’ ಚಿತ್ರಕ್ಕೆ ಫರ್ಹಾನ್ ಅಖ್ತರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ. ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ