AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಈ ನಿರ್ದೇಶಕರ ಜೊತೆ ಸಿನಿಮಾ ಮಾಡಲು ರಣವೀರ್ ಸಿಂಗ್ ಮುಂದಾಗಿದ್ದಾರೆ

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Jan 28, 2024 | 2:20 PM

Share

ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಗಲಿಲ್ಲ. ಅವರು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದಾರೆ. ‘ಡಾನ್ 3’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆ ಅವರು ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲು ರೆಡಿ ಆಗುತ್ತಿದ್ದಾರೆ. ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಬಗ್ಗೆ ನಂಬಿಕೆ ಬಂದಿದೆ. ಈ ಕಾರಣದಿಂದ ಅವರು ಹಲವು ಸ್ಟಾರ್ ಡೈರೆಕ್ಟರ್ ಜೊತೆ ಮಾತುಕತೆ ನಡೆಸಲು ಆರಂಭಿಸಿದ್ದಾರೆ ಎಂದು ವರದಿ ಆಗಿದೆ. ಶೀಘ್ರದಲ್ಲೇ ಅವರು ಒಂದು ಸಿನಿಮಾ ಫೈನಲ್ ಮಾಡುವ ನಿರೀಕ್ಷೆ ಇದೆ.

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಇಬ್ಬರೂ ದಕ್ಷಿಣ ಭಾರತದ ನಿರ್ದೇಶಕರು. ಹೀಗಾಗಿ, ರಣವೀರ್ ಸಿಂಗ್ ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಮೇಲೆ ಭರವಸೆ ಮೂಡಿದೆ. ಅಟ್ಲಿ ಜೊತೆ ಕೆಲಸ ಮಾಡಬೇಕು ಎಂಬುದು ರಣವೀರ್ ಸಿಂಗ್ ಆಸೆ ಎನ್ನಲಾಗಿದೆ.

ಅಟ್ಲಿ ಅವರು ವರುಣ್ ಧವನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಆ ಬಳಿಕ ಅಲ್ಲು ಅರ್ಜುನ್ ಜೊತೆ ಅವರು ಸಿನಿಮಾ ಮಾಡಬೇಕಿದೆ. ಈ ಮಧ್ಯೆ ರಣವೀರ್ ಸಿಂಗ್ ಕೂಡ ಅವಕಾಶ ಕೇಳಲು ಮುಂದೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್​, ‘ಘಜಿನಿ’ ಡೈರೆಕ್ಟರ್ ಎಆರ್​ ಮುರುಗದಾಸ್ ಜೊತೆಗೂ ರಣವೀರ್ ಸಿಂಗ್ ಮಾತುಕತೆ ನಡೆಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಮಾತುಕತೆಗಳು ನಡೆಯಲಿವೆ. ಹಿಂದಿ ಜೊತೆ ದಕ್ಷಿಣ ಭಾರತದ ಭಾಷೆಗಳಲ್ಲೂ ಸಿನಿಮಾ ಬರಲಿದೆ. ಲೋಕೇಶ್ ಕನಗರಾಜ್ ಅವರು ರಜನಿಕಾಂತ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಸ್ಮಶಾನವಾದ ಮದುವೆ ಮನೆ; ರಣವೀರ್ ಸಿಂಗ್ ಸಿನಿಮಾದಲ್ಲಿ ಬಳಕೆ ಆಗಿದ್ದ ಮನೆಯಲ್ಲಿ ಶೂಟೌಟ್​

ರಣವೀರ್ ಸಿಂಗ್ ನಟಿಸುತ್ತಿರುವ ‘ಡಾನ್ 3’ ಚಿತ್ರಕ್ಕೆ ಫರ್ಹಾನ್ ಅಖ್ತರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ. ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ