AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಲೈಂಗಿಕತೆ ಬಗ್ಗೆ ಅಶ್ಲೀಲ ಹೇಳಿಕೆ; ಬ್ರೇಕಪ್​ನಲ್ಲಿ ಕೊನೆ ಆಯ್ತು ರಣವೀರ್ ಅಲಾಹಾಬಾದಿಯಾ ಪ್ರೀತಿ?

ರಣವೀರ್ ಅಲಾಹಾಬಾದಿಯಾ ಅವರ ವಿವಾದಾತ್ಮಕ ಹೇಳಿಕೆಯಿಂದ ‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದು, ರಣವೀರ್ ಮತ್ತು ಸಮಯ್ ರೈನಾ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಈ ಘಟನೆಯಿಂದಾಗಿ ರಣವೀರ್ ಅವರ ಸಂಬಂಧದಲ್ಲೂ ಬಿರುಕು ಬಿದ್ದಿದೆ ಎಂಬ ವದಂತಿ ಹಬ್ಬಿದೆ

ಪೋಷಕರ ಲೈಂಗಿಕತೆ ಬಗ್ಗೆ ಅಶ್ಲೀಲ ಹೇಳಿಕೆ; ಬ್ರೇಕಪ್​ನಲ್ಲಿ ಕೊನೆ ಆಯ್ತು ರಣವೀರ್ ಅಲಾಹಾಬಾದಿಯಾ ಪ್ರೀತಿ?
ಪೋಷಕರ ಲೈಂಗಿಕತೆ ಬಗ್ಗೆ ಅಶ್ಲೀಲ ಹೇಳಿಕೆ; ರಣವೀರ್ ಪ್ರೀತಿ ಕೊನೆ ಆಯ್ತಾ?
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 12, 2025 | 10:13 AM

‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯೂಟ್ಯೂಬರ್ ಮತ್ತು ಪಾಡ್‌ಕ್ಯಾಸ್ಟರ್ ರಣವೀರ್ ಅಲಾಹಾಬಾದಿಯಾ ಮಾಡಿದ ವಿವಾದಾತ್ಮಕ ಕಾಮೆಂಟ್‌ನಿಂದ ದೊಡ್ಡ ವಿವಾದ ಹುಟ್ಟಿಕೊಂಡಿದೆ. ಈ ಪ್ರಕರಣದ ಬಗ್ಗೆ ಮುಂಬೈ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಈ ಕಾರ್ಯಕ್ರಮದ ನಿರೂಪಕ, ಕಾಮಿಡಿಯನ್ ಸಮಯ್ ರೈನಾ ಮತ್ತು ರಣವೀರ್ ಇಬ್ಬರನ್ನೂ ಪೊಲೀಸ್ ವಿಚಾರಣೆಗೆ ಸಮನ್ಸ್ ಜಾರಿ ಮಾಡಲಾಗಿದೆ. ರಣವೀರ್ ಹೇಳಿಕೆಗೆ ವಿವಿಧ ಕಡೆಗಳಿಂದ ಆಕ್ರೋಶದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಹೀಗಿರುವಾಗಲೇ ರಣವೀರ್ ಅಲಹಾಬಾದಿಯಾ ಪ್ರೀತಿ ಕೂಡ ಕೊನೆಗೊಂಡಿದೆ ಎನ್ನಲಾಗಿತ್ತು. ಆದರೆ, ಹಾಗೇನು ಇಲ್ಲ ಎನ್ನಲಾಗುತ್ತಿದೆ.

ರಣವೀರ್ ಹಾಗೂ ನಿಕ್ಕಿ ಶರ್ಮಾ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಶೀಘ್ರವೇ ಮದುವೆ ಆಗುವ ಆಲೋಚನೆಯಲ್ಲಿ ಇದ್ದಾರೆ. ಈಗ ರಣವೀರ್ ಹಾಗೂ ನಿಕ್ಕಿ ಇನ್​ಸ್ಟಾಗ್ರಾಮ್​ನಲ್ಲಿ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

ಆದರೆ, ಇದು ಸುಳ್ಳು ಎಂಬುದು ತಿಳಿದು ಬಂದಿದೆ. ಇನ್​ಸ್ಟಾಗ್ರಾಮ್​ನಲ್ಲಿ ಇಬ್ಬರೂ ಪರಸ್ಪರ ಒಬ್ಬರನ್ನೊಬ್ಬರು ಫಾಲೋ ಮಾಡಿಕೊಳ್ಳುತ್ತಾ ಇದ್ದಾರೆ. ಹೀಗಾಗಿ, ಈ ಒಂದು ಹೇಳಿಕೆಯಿಂದ ಹಲವು ವರ್ಷಗಳ ಪ್ರೀತಿ ಕೊನೆ ಆಗಿದೆ ಎಂಬ ಹೇಳಿಕೆ ಸುಳ್ಳು ಎಂದು ವರದಿ ಆಗಿದೆ.

ಇದನ್ನೂ ಓದಿ: ‘ಪೋಷಕರು ಲೈಂಗಿಕ ಕ್ರಿಯೆ ನಡೆಸೋದನ್ನು ನೋಡ್ತಾ ಇರ್ತೀರಾ’; ವಿವಾದಕ್ಕೆ ಸಿಲುಕಿದ ರಣವೀರ್ ಅಲಾಹಾಬಾದಿಯಾ

‘ಬೀರ್ ಬೈಸೆಪ್ಸ್’ ಎಂಬ ಯೂಟ್ಯೂಬ್ ಖಾತೆ ಮೂಲಕ ಸುಮಾರು ಏಳು ಯೂಟ್ಯೂಬ್ ಚಾನೆಲ್‌ಗಳನ್ನು ಹೊಂದಿದ್ದಾರೆ. ಅವರು ತಿಂಗಳಿಗೆ ಸುಮಾರು 35 ಲಕ್ಷ ರೂ.ಗಳನ್ನು ಗಳಿಸುತ್ತಾರೆ. ಇದಲ್ಲದೆ, ರಣವೀರ್ ಇತರ ವ್ಯವಹಾರಗಳನ್ನು ಸಹ ಹೊಂದಿದ್ದಾರೆ. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದೆ. ರಣವೀರ್ ಅವರ ಮಾಸಿಕ ಆದಾಯ 50 ಲಕ್ಷ ರೂ.ಗಳವರೆಗೆ ಇದೆ ಎನ್ನಲಾಗಿದೆ.

ರಣವೀರ್ ಮೇಲೆ ಕೇಸ್

ರಣವೀರ್ ಅಲಾಹಾಬಾದಿಯಾ ಮೇಲೆ ಸದ್ಯ ಕೇಸ್ ದಾಖಲಾಗಿದೆ. ಈ ಪ್ರಕರಣದ ಬಳಿಕ ಅವರ ಸಾಕಷ್ಟು ಕೇಸ್​ಗಳು ಕೂಡ ಬಿದ್ದಿವೆ. ಅಷ್ಟಕ್ಕೂ ಅವರು ನೀಡಿದ ಹೇಳಿಕೆ ಏನು ಎಂಬುದನ್ನು ನೋಡೋಣ. ‘ಇಂಡಿಯಾ್ಸ್ ಗಾಟ್​ ಲೇಟೆಂಟ್’ ಶೋನಲ್ಲಿ ಭಾಗವಹಿಸಿದ್ದ ಅವರು, ಶೋನಲ್ಲಿ ಪರ್ಫಾರ್ಮ್ ಮಾಡಲು ಬಂದ ಸ್ಪರ್ಧಿಗೆ ರಣವೀರ್ ಅವರು ಪ್ರಶ್ನೆ ಒಂದನ್ನು ಕೇಳಿದ್ದರು. ‘ನಿಮ್ಮ ಜೀವನದುದ್ದಕ್ಕೂ ನಿಮ್ಮ ಹೆತ್ತವರು ಪ್ರತಿದಿನ ಲೈಂಗಿಕತೆಯನ್ನು ಹೊಂದುವುದನ್ನು ನೀವು ನೋಡುತ್ತೀರಾ ಅಥವಾ ಒಮ್ಮೆ ಅವರ ಜೊತೆ ಸೇರಿ ಅದನ್ನು ಶಾಶ್ವತವಾಗಿ ನಿಲ್ಲಿಸುತ್ತೀರಾ’ ಎಂದು ಪ್ರಶ್ನೆ ಮಾಡಿದ್ದರು. ಇದು ಚರ್ಚೆ ಸೃಷ್ಟಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಸುಹಾಸ್ ಕೊಲೆಯಲ್ಲಿ ಕನಿಷ್ಠ 40 ಜನ ಶಾಮೀಲಾಗಿದ್ದಾರೆ: ಪ್ರದೀಪ್ ಸರಿಪಲ್ಲ
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕಾಲ್ತುಳಿತ: ರಾಜ್ಯಪಾಲರಿಗೆ ಆಹ್ವಾನ ಕೊಟ್ಟಿದ್ಯಾರು? ಡಿಸಿಎಂ ಹೇಳಿದ್ದಿಷ್ಟು
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಕೊಲೆಯಾದವ ಮತ್ತು ಆರೋಪಿಗಳೆಲ್ಲ ಅಸ್ಸಾಂ ಮೂಲದವರು, ಮದ್ಯದ ಅಮಲಿನಲ್ಲಿ ಹತ್ಯೆ
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
ಶ್ವೇತಾ ಮನೆ ಬಿಟ್ಟು ಹೋಗ್ತಿದ್ಳು, ನನ್ನಮ್ಮನನ್ನು ಹೊಡೆಯುತ್ತಿದ್ದಳು: ರಘು
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್
‘ಸರಿಗಮಪ’ ವಿನ್ನರ್ ಶಿವಾನಿಗೆ ಸಿಕ್ಕ ಹಣ ಎಷ್ಟು? ಬಾಳು ಬೆಳಗುಂದಿಗೂ ಬಂಪರ್