‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​

‘ಸೂರ್ಯವಂಶಿ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಮತ್ತು ರಣವೀರ್​ ಸಿಂಗ್​ ಮಸ್ತ್​ ಮಜಾ ಮಾಡಿದ್ದಾರೆ. ಇಬ್ಬರೂ ಸೇರಿ ‘ಬಾಲ..’ ಹಾಡಿನ ಫೇಮಸ್​ ಡ್ಯಾನ್ಸ್​ ಸ್ಟೆಪ್​​ ಹಾಕಿದ್ದಾರೆ.

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​
ವೈರಲ್​ ವಿಡಿಯೋದಲ್ಲಿ ಅಕ್ಷಯ್ ಕುಮಾರ್​, ರಣವೀರ್​ ಸಿಂಗ್​
Follow us
| Edited By: ಮದನ್​ ಕುಮಾರ್​

Updated on: Oct 22, 2021 | 3:36 PM

ಕೊರೊನಾ ಆತಂಕ ನಿಧಾನವಾಗಿ ಕಡಿಮೆ ಆಗುತ್ತಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಗ್​ ಬಜೆಟ್​ ಸ್ಟಾರ್​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅಕ್ಷಯ್​ ಕುಮಾರ್​, ಅಜಯ್​ ದೇವಗನ್​, ರಣವೀರ್​ ಸಿಂಗ್​ ನಟಿಸಿರುವ ‘ಸೂರ್ಯವಂಶಿ’ ಚಿತ್ರ ಈ ವರ್ಷದ ದೀಪಾವಳಿ ಪ್ರಯುಕ್ತ ನ.5ರಂದು ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲು ‘ಐಲಾರೆ ಐಲಾ..’ ಹಾಡು ಬಿಡುಗಡೆ ಮಾಡಲಾಗಿದೆ. ಅದಲ್ಲದೇ ಅಕ್ಷಯ್​ ಕುಮಾರ್​ ಶೇರ್​ ಮಾಡಿಕೊಂಡಿರುವ ಒಂದು ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ.

‘ಸೂರ್ಯವಂಶಿ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಮತ್ತು ರಣವೀರ್​ ಸಿಂಗ್​ ಮಸ್ತ್​ ಮಜಾ ಮಾಡಿದ್ದಾರೆ. ಇಬ್ಬರೂ ಸೇರಿ ‘ಬಾಲ..’ ಹಾಡಿನ ಫೇಮಸ್​ ಡ್ಯಾನ್ಸ್​ ಸ್ಟೆಪ್​​ ಹಾಕಿದ್ದಾರೆ. ಆ ವಿಡಿಯೋವನ್ನು ಈಗ ‘ಐಲಾರೆ ಐಲಾ..’ ಹಾಡಿನೊಂದಿಗೆ ಅಕ್ಷಯ್​ ಕುಮಾರ್​ ಶೇರ್​ ಮಾಡಿಕೊಂಡಿದ್ದಾರೆ. ಆ ಸ್ಟೆಪ್​ ಹಾಕುವಾಗ ರಣವೀರ್​ ಸಿಂಗ್​ ಕೊಂಚ ಎಡವಿದ್ದರಿಂದ ಅವರಿಗೆ ನೋವಾಗಿದೆ! ಅದು ಹೇಗೆ ಎಂಬುದು ವಿಡಿಯೋ ನೋಡಿದರೆ ಮಾತ್ರ ತಿಳಿಯುವಂಥದ್ದು.

View this post on Instagram

A post shared by Akshay Kumar (@akshaykumar)

‘ರಣವೀರ್​ ಸಿಂಗ್​ ಮತ್ತು ನಾನು ಐಲಾರೆ ಐಲಾ ಹಾಡಿಗೆ ಡ್ಯಾನ್ಸ್​ ಮಾಡಿದ ವಿಡಿಯೋ ಇಲ್ಲಿದೆ. ನೀವು ಕೂಡ ಇದನ್ನು ಮಾಡಿ ತೋರಿಸಿ. ಎಚ್ಚರಿಕೆ: ತಪ್ಪಾಗಿ ಈ ಡ್ಯಾನ್ಸ್​ ಸ್ಟೆಪ್​ ಹಾಕಿದಾರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’ ಎಂದು ಅಕ್ಷಯ್​ ಕುಮಾರ್​ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ರೋಹಿತ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಎಂದುಕೊಂಡಂತೆ ಆಗಿದ್ದರೆ, 2020ರ ಮಾರ್ಚ್​ನಲ್ಲಿಯೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಎಲ್ಲ ವಿಘ್ನಗಳನ್ನೂ ನಿವಾರಿಸಿಕೊಂಡು ನ.5ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಕತ್ರಿನಾ ಕೈಫ್​ ಅಭಿನಯಿಸಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ಭರವಸೆ ನೀಡಿದ್ದಾರೆ ನಿರ್ದೇಶಕ ರೋಹಿತ್​ ಶೆಟ್ಟಿ.

ಇದನ್ನೂ ಓದಿ:

ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ