AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​

‘ಸೂರ್ಯವಂಶಿ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಮತ್ತು ರಣವೀರ್​ ಸಿಂಗ್​ ಮಸ್ತ್​ ಮಜಾ ಮಾಡಿದ್ದಾರೆ. ಇಬ್ಬರೂ ಸೇರಿ ‘ಬಾಲ..’ ಹಾಡಿನ ಫೇಮಸ್​ ಡ್ಯಾನ್ಸ್​ ಸ್ಟೆಪ್​​ ಹಾಕಿದ್ದಾರೆ.

‘ತಪ್ಪಾಗಿ ಈ ಡ್ಯಾನ್ಸ್​ ಮಾಡಿದ್ರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’: ಅಕ್ಷಯ್​ ಕುಮಾರ್​ ವಾರ್ನಿಂಗ್​
ವೈರಲ್​ ವಿಡಿಯೋದಲ್ಲಿ ಅಕ್ಷಯ್ ಕುಮಾರ್​, ರಣವೀರ್​ ಸಿಂಗ್​
TV9 Web
| Edited By: |

Updated on: Oct 22, 2021 | 3:36 PM

Share

ಕೊರೊನಾ ಆತಂಕ ನಿಧಾನವಾಗಿ ಕಡಿಮೆ ಆಗುತ್ತಿದೆ. ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಗ್​ ಬಜೆಟ್​ ಸ್ಟಾರ್​ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅಕ್ಷಯ್​ ಕುಮಾರ್​, ಅಜಯ್​ ದೇವಗನ್​, ರಣವೀರ್​ ಸಿಂಗ್​ ನಟಿಸಿರುವ ‘ಸೂರ್ಯವಂಶಿ’ ಚಿತ್ರ ಈ ವರ್ಷದ ದೀಪಾವಳಿ ಪ್ರಯುಕ್ತ ನ.5ರಂದು ರಿಲೀಸ್​ ಆಗುತ್ತಿದೆ. ಅದಕ್ಕೂ ಮೊದಲು ‘ಐಲಾರೆ ಐಲಾ..’ ಹಾಡು ಬಿಡುಗಡೆ ಮಾಡಲಾಗಿದೆ. ಅದಲ್ಲದೇ ಅಕ್ಷಯ್​ ಕುಮಾರ್​ ಶೇರ್​ ಮಾಡಿಕೊಂಡಿರುವ ಒಂದು ವಿಡಿಯೋ ಈಗ ಸಖತ್​ ವೈರಲ್​ ಆಗುತ್ತಿದೆ.

‘ಸೂರ್ಯವಂಶಿ’ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಅಕ್ಷಯ್​ ಕುಮಾರ್​ ಮತ್ತು ರಣವೀರ್​ ಸಿಂಗ್​ ಮಸ್ತ್​ ಮಜಾ ಮಾಡಿದ್ದಾರೆ. ಇಬ್ಬರೂ ಸೇರಿ ‘ಬಾಲ..’ ಹಾಡಿನ ಫೇಮಸ್​ ಡ್ಯಾನ್ಸ್​ ಸ್ಟೆಪ್​​ ಹಾಕಿದ್ದಾರೆ. ಆ ವಿಡಿಯೋವನ್ನು ಈಗ ‘ಐಲಾರೆ ಐಲಾ..’ ಹಾಡಿನೊಂದಿಗೆ ಅಕ್ಷಯ್​ ಕುಮಾರ್​ ಶೇರ್​ ಮಾಡಿಕೊಂಡಿದ್ದಾರೆ. ಆ ಸ್ಟೆಪ್​ ಹಾಕುವಾಗ ರಣವೀರ್​ ಸಿಂಗ್​ ಕೊಂಚ ಎಡವಿದ್ದರಿಂದ ಅವರಿಗೆ ನೋವಾಗಿದೆ! ಅದು ಹೇಗೆ ಎಂಬುದು ವಿಡಿಯೋ ನೋಡಿದರೆ ಮಾತ್ರ ತಿಳಿಯುವಂಥದ್ದು.

View this post on Instagram

A post shared by Akshay Kumar (@akshaykumar)

‘ರಣವೀರ್​ ಸಿಂಗ್​ ಮತ್ತು ನಾನು ಐಲಾರೆ ಐಲಾ ಹಾಡಿಗೆ ಡ್ಯಾನ್ಸ್​ ಮಾಡಿದ ವಿಡಿಯೋ ಇಲ್ಲಿದೆ. ನೀವು ಕೂಡ ಇದನ್ನು ಮಾಡಿ ತೋರಿಸಿ. ಎಚ್ಚರಿಕೆ: ತಪ್ಪಾಗಿ ಈ ಡ್ಯಾನ್ಸ್​ ಸ್ಟೆಪ್​ ಹಾಕಿದಾರೆ ನಿಮ್ಮ ಭವಿಷ್ಯಕ್ಕೆ ತೊಂದರೆ ಆಗಬಹುದು’ ಎಂದು ಅಕ್ಷಯ್​ ಕುಮಾರ್​ ಕ್ಯಾಪ್ಷನ್​ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

‘ಸೂರ್ಯವಂಶಿ’ ಚಿತ್ರಕ್ಕೆ ರೋಹಿತ್​ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಎಲ್ಲವೂ ಎಂದುಕೊಂಡಂತೆ ಆಗಿದ್ದರೆ, 2020ರ ಮಾರ್ಚ್​ನಲ್ಲಿಯೇ ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಎಲ್ಲ ವಿಘ್ನಗಳನ್ನೂ ನಿವಾರಿಸಿಕೊಂಡು ನ.5ರಂದು ಈ ಚಿತ್ರ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಕತ್ರಿನಾ ಕೈಫ್​ ಅಭಿನಯಿಸಿದ್ದಾರೆ. ಭರ್ಜರಿ ಆ್ಯಕ್ಷನ್​ ದೃಶ್ಯಗಳ ಮೂಲಕ ಪ್ರೇಕ್ಷಕರನ್ನು ರಂಜಿಸುವ ಭರವಸೆ ನೀಡಿದ್ದಾರೆ ನಿರ್ದೇಶಕ ರೋಹಿತ್​ ಶೆಟ್ಟಿ.

ಇದನ್ನೂ ಓದಿ:

ಸೈನಿಕರ ಬಗ್ಗೆ ಅಕ್ಷಯ್​ ಕುಮಾರ್​ ಹೊಸ ಸಿನಿಮಾ; ಪೋಸ್ಟರ್​ನಲ್ಲಿ ತಪ್ಪು ಕಂಡುಹಿಡಿದ ಮಾಜಿ ಸೇನಾಧಿಕಾರಿ

ಶಾರುಖ್​ ಪುತ್ರ ಆರ್ಯನ್​ ಖಾನ್​ ಅರೆಸ್ಟ್​ ಆದಾಗ ಅಕ್ಷಯ್​ ಕುಮಾರ್​ ಮಗ ಆರವ್​ ಏನು ಮಾಡ್ತಿದ್ರು? ಎಲ್ಲಿದ್ರು?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!